Get Updates
Get notified of breaking news, exclusive insights, and must-see stories!

ಒಂದು ಮಳೆ ಬಂದರೆ ಕಾವೇರಿ ಹೋರಾಟ ತಣ್ಣಗಾಗುತ್ತದೆ - ಮಾಜಿ ಸಿಎಂ ಬಾಲಿಶ ಹೇಳಿಕೆ

ಮಂಗಳೂರು, ಸೆಪ್ಟೆಂಬರ್‌ 24: ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಹೋರಾಟ ವಿಚಾರದಲ್ಲಿ ಬೇಜವಾಬ್ದಾರಿಯುತ ಹೇಳಿಕೆ ನೀಡಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ ಒಂದು ಮಳೆ ಬಂದರೆ ಕಾವೇರಿ ವಿಚಾರ ತಣ್ಣಗಾಗುತ್ತದೆ ಎಂದು ಹೇಳಿದ್ದಾರೆ‌.

ಮಂಗಳೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಈಗ ನಮ್ಮ ಸರ್ಕಾರ ಇರುವಾಗ ವಿರೋಧ ಮಾಡಲು ಆಗಲ್ಲ. ನಮ್ಮ ಸರ್ಕಾರ ಕೋರ್ಟ್ ಮೂಲಕ ಸಮಸ್ಯೆ ಸರಿ ಮಾಡಲು ಯತ್ನಿಸುತ್ತದೆ‌. ಬಿಜೆಪಿಯವರು ಈಗ ವಿರೋಧ ಪಕ್ಷದಲ್ಲಿ ಇದ್ದು ವಿರೋಧಿಸುತ್ತಿದ್ದಾರೆ ಎಂದರು.

Former CM Veerappa Moily Immature Statement Regarding Cauvery Dispute

ಕರ್ನಾಟಕ ಕಾವೇರಿ ವಿಚಾರದಲ್ಲಿ ಸೋಲಲು ಅನೇಕ ಕಾರಣಗಳಿವೆ. ನಾವು ಕಾವೇರಿ ನೀರನ್ನು ಗರಿಷ್ಠವಾಗಿ ಉಪಯೋಗ ಮಾಡಿಲ್ಲ. ಆ ಕಾಲದ ಆಡಳಿತಗಾರರು ಮಾಡಿದ ತಪ್ಪಿನಿಂದ ಹೀಗಾಗುತ್ತಿದೆ. ಯಗಚಿ ಅಣೆಕಟ್ಟು ಮಾಡೋದನ್ನು ಅನೇಕರು ತಡೆದಿದ್ದರು. ಇದರಿಂದ ನಮಗೆ ಸಿಗಬೇಕಾದ ನೀರಿನ ಪಾಲು ಸಿಗಲಿಲ್ಲ ಎಂದು ಹೇಳಿದರು.

ಇನ್ನು ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಯೆಂದರೆ ಅದು ಉಡ ಹೊಕ್ಕಿದಂತೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ವೀರಪ್ಪ ಮೊಯಿಲಿ ವ್ಯಂಗ್ಯವಾಡಿದ್ದಾರೆ. ಜೆಡಿಎಸ್ ಹೊಕ್ಕಿದ ಕಡೆಯಲ್ಲಿ ಸಂಪೂರ್ಣ ಹೋಯ್ತು ಎಂದೇ ಅರ್ಥ. ಅಂದು ನಾವು ಅವರೊಂದಿಗೆ ಸೇರಿದ ಸಂದರ್ಭದಲ್ಲಿ ನಾನು ಕೂಡ ಸೋತಿದ್ದೇನೆ. ಈಗ ಆ ಅನಿಷ್ಟ ದೂರವಾಗಿದೆ. ಈಗ ಆ ಅನಿಷ್ಠ ಬಿಜೆಪಿ ಕಡೆಗೆ ಹೋಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರಕಾರದ ಮಹಿಳಾ ಮಸೂದೆ ಪಾಸ್ ಮಾಡಿರುವುದು ಕಪಟ ನಾಟಕವೇ ಹೊರತು ಇದರಲ್ಲಿ ಪ್ರಾಮಾಣಿಕತೆಯಿಲ್ಲ. ಇವರಿಗೆ ಮಹಿಳೆಯರ ಬಗ್ಗೆ ಆಸಕ್ತಿಯಿಲ್ಲ‌. ಶೂದ್ರ ಮಹಿಳೆಯರಿಗೆ ಮತದಾನದ ಹಕ್ಕು ಕೊಡಬಾರದೆಂದು ಗೋಲ್ವಾಲ್ಕರ್ ಹೇಳಿದ್ದರು. ಮನುಸ್ಮೃತಿ ಮಹಿಳೆಯರು ಪಾಪಿಷ್ಠರು ಎಂದು ಹೇಳಿದೆ ಎಂದು ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದರು.

ಇನ್ನು ಮಾತು ಮುಂದುವರಿಸಿದ ಅವರು, ನಾನು ಈ ಬಾರಿಯೂ ಚಿಕ್ಕಬಳ್ಳಾಪುರದಲ್ಲಿ ಸ್ಪರ್ಧೆ ಮಾಡಿತ್ತಿದ್ದೇನೆ. ಬಿ.ಕೆ‌.ಹರಿಪ್ರಸಾದ್ ವಿಚಾರ ಶಿಸ್ತು ಕಮಿಟಿ ಮುಂದೆ ಇದೆ.‌ ಅವರಿಗೆ ನೋಟೀಸ್ ನೀಡಲಾಗಿದ್ದು, ಇದರ ಬಗ್ಗೆ ಸಮಿತಿ ನೋಡಿಕೊಳ್ಳುತ್ತದೆ. ಸಂವಿಧಾನದಲ್ಲಿ 'ಜಾತ್ಯಾತೀತ' ಪದವನ್ನು ಅಳಿಸಿ ಹಾಕಿರುವ ಬಗ್ಗೆ ಕಿಡಿಕಾರಿದ ವೀರಪ್ಪ ಮೊಯ್ಲಿ, ಬಿಜೆಪಿ ಸಂವಿಧಾನ ವಿರೋಧಿ ಪಕ್ಷ. ಅವರಿಗೆ ತಾಕತ್ತು ದಮ್ಮು ಇದ್ದಲ್ಲಿ ಅದನ್ನು ಕಾಯ್ದೆ ಮಾಡಿ ಸಂಸತ್ತಿನಲ್ಲಿ ಚರ್ಚೆ ಮಾಡಲಿ ಎಂದು ಸವಾಲೆಸಿದಿದ್ದಾರೆ.

ಮಾಜಿ ಸಿಎಂಗೆ ಪತ್ರಕರ್ತರ ತರಾಟೆ

ಎತ್ತಿನಹೊಳೆ ಯೋಜನೆ ಮುಗಿದ ಅಧ್ಯಾಯ. ಹಳೆಯ ವಿಚಾರವನ್ನು ಮತ್ತೆ ಮತ್ತೆ ಕೇಳಬೇಡಿ ಎಂದ ವೀರಪ್ಪ ಮೊಯ್ಲಿಯವರನ್ನು ಪತ್ರಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ.

ಎತ್ತಿನಹೊಳೆ ಯೋಜನೆಯನ್ನು ತರಾತುರಿಯಲ್ಲಿ ಮಾಡಿದ್ರಲ್ಲಾ. 20 ಸಾವಿರ ಕೋಟಿ ವ್ಯಯಿಸಿದರೂ ಒಂದು ಹನಿ ನೀರು ಹರಿಸಲು ಆಗಿಲ್ಲ ಯಾಕೆ ಎಂಬ ಪತ್ರಕರ್ತರ ಪ್ರಶ್ನೆಗೆ ಮೊಯ್ಲಿಯವರು, ಅದಕ್ಕೆ ನಾನು ಎಲ್ಲಿ ಬೇಕೋ ಅಲ್ಲಿ ಉತ್ತರ ಕೊಡುತ್ತೇನೆ ಎಂದು ಮೌನಕ್ಕೆ ಜಾರಿದ್ದಾರೆ. ನೀವು ಚಿಕ್ಕಬಳ್ಳಾಪುರದಲ್ಲಿ ಮತ್ತೆ ಸ್ಪರ್ಧಿಸುತ್ತೀರಲ್ಲಾ, ಅಲ್ಲಿನ ಜನರಿಗೂ ಉತ್ತರ ಕೊಡಿ ಎಂಬ ಪ್ರಶ್ನೆಗೆ ಅವಾಗಲೇ ಉತ್ತರ ಕೊಡುತ್ತೇನೆಂದು ಪ್ರಶ್ನೆಗೆ ಉತ್ತರಿಸಲಾಗದೆ ಹೋದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+