ಮಂಗಳೂರಿಗೆ ಬರ್ತಿದ್ದಾರೆ ಕ್ರಿಕೆಟ್ ಮಾಜಿ ನಾಯಕ ಅಜರುದ್ಧೀನ್
ಮಂಗಳೂರು, ಡಿಸೆಂಬರ್ 10: ಅಲ್ ಮುಝೈನ್ -ವೈಟ್ ಸ್ಟೋನ್ -ಎಂಪಿಎಲ್ ಆವೃತ್ತಿಯ 20-20 ಕ್ರಿಕೆಟ್ ಪಂದ್ಯಾಟವನ್ನು ನವ ಮಂಗಳೂರು ಬಂದರು ಮಂಡಳಿಯ ಬಳಿಯ ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರುಗಲಿದ್ದು ಡಿ.17ರಂದು ಇದರ ಉಧ್ಘಾಟನೆಯನ್ನು ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕ ಮುಹಮ್ಮದ್ ಅಜರುದ್ಧೀನ್ ಅವರು ನೆರವೇರಿಸಲಿದ್ದಾರೆ.
ಡಿ.17ರಂದು ಸಂಜೆ 4.30 ಗಂಟೆಗೆ ಉದ್ಘಾಟನೆ ನಡೆಯಲಿದೆ. ಹಸಿರು ಹುಲ್ಲಿನ ಅಸ್ಟ್ರೋಟಫ್ ಮೈದಾನದಲ್ಲಿ ಡಿ.17ರಿಂದ 30ರವೆಗೆ ಒಟ್ಟು 14 ದಿನಗಳ ಕಾಲ 12 ತಂಡಗಳ ನಡುವೆ ಸ್ಪರ್ಧೆ ನಡೆಯಲಿದೆ. ಲೀಗ್ ಹಂತದಲ್ಲಿ 30 ಪಂದ್ಯಗಳು ,ನಂತರ ಎಲಿಮಿನೇಟರ್,ನಾಕೌಟ್ ಹಂತಗಳಲ್ಲಿ 5 ಪಂದ್ಯಗಳು ನಡೆಯಲಿದೆ. ಅಧಿಕೃತ ಪಂದ್ಯಗಳು ಡಿ.18ರಿಂದ ಪ್ರಾರಂಭವಾಗಲಿದೆ.[ಕೊಹ್ಲಿಗೆ ಈಗ ಅಜರುದ್ದೀನ್ ದಾಖಲೆ ಮುರಿಯುವ ತವಕ!]

ಈ ಬಾರಿಯ ಪಂದ್ಯದಲ್ಲಿ ರೆಡ್ ಹಾಕ್ಸ್ ಕುಡ್ಲ,ಟೀಮ್ ಎಲಿಗೆಂಟ್ ಮೂಡುಬಿದಿರೆ,ಕಂಕನಾಡಿ ನೈಟ್ ರೈಡರ್ಸ್, ಕರಾವಳಿ ವಾರಿಯರ್ಸ್ ಪಣಂಬೂರು, ಕಾರ್ಕಳ ಗ್ಲೇಡಿಯೇಟರ್ಸ್, ಪ್ರೆಸಿಡೆಂಟ್ಸ್ ಸಿಕ್ಸರ್ಸ್ ಕುಂದಾಪುರ, ಮೇಸ್ಟ್ರೋ ಟೈಟಾನ್ಸ್, ಸ್ಪಾರ್ಕ್ ಎವೆಂಜರ್ಸ್ ಬೊಳಾರ, ಕೋಸ್ಟಲ್ ಡೈಜೆಸ್ಟ್, ಸುರತ್ಕಲ್ ಸ್ಟ್ರೈಕರ್ಸ್, ಯುನೈಟೆಡ್ ಉಳ್ಳಾಲ, ಉಡುಪಿ ಟೈಗರ್ಸ್ ಭಾಗವಹಿಸಲಿವೆ. ಐಪಿಲ್ ಆಟಗಾರರಾದ ಕೆ.ಸಿ.ಕಾರ್ಯಪ್ಪ, ಶಿವಿಲ್ ಕೌಶಿಕ್,ಬಿ.ಅಖಿಲೇಶ್,ಅಪ್ಪಣ್ಣ ಮತ್ತು 38 ಮಂದಿ ಕೆಪಿಎಲ್ ಆಟಗಾರರು ವಿವಿಧ ತಂಡಗಳಲ್ಲಿ ಸೇರಿ ಆಡಲಿದ್ದಾರೆ.[ಅಜರುದ್ದೀನ್ ದಾಖಲೆ ಸಮಗಟ್ಟಿದ ಎಂಎಸ್ ಧೋನಿ ]
ಡಿ.17ರಂದು ಸಂಜೆ 4.30 ಗಂಟೆಗೆ ಅರ್ಜುನ್ ಕಾಫಿಕಾಡ್ ನೇತೃತ್ವದ ಚಲನಚಿತ್ರ ತಾರೆಯರ ತಂಡ ಹಾಗೂ ಎಂಪಿಎಲ್ ಆಯೋಜಕರ ತಂಡಗಳ ನಡುವೆ ಪ್ರದರ್ಶನ ಪಂದ್ಯ ನಡೆಯಲಿದೆ. ಲೇಸರ್ ಶೋ,ಟಾಲ್ ಮೆನ್,ಸುಡುಮದ್ದು ಪ್ರದರ್ಶನ, ರಶಿಯನ್ ಅಗ್ನಿ ನೃತ್ಯ, ಡ್ರಾಗ್ಯನ್ ನೃತ್ಯ ಪ್ರದರ್ಶನಗೊಳ್ಳಲಿದೆ ಎಂದು ಸಿರಾಜುದ್ಧೀನ್ ತಿಳಿಸಿದ್ದಾರೆ. ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧಿಕೃತ ತೀರ್ಪುಗಾರರು ಭಾಗವಹಿಸಲಿದ್ದಾರೆ ಎಂದು ಮಂಗಳೂರು ಕರ್ನಾಟಕ ರೀಜನಲ್ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷ ರಾದ ಸಿರಾಜುದ್ಧೀನ್ ತಿಳಿಸಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟಕ ಮುಹಮ್ಮದ್ ಅಜರುದ್ಧೀನ್ ಜೊತೆ ಅಲ್ಮುಝೈನ್ ಸಂಸ್ಥೆಯ ಉದ್ಯಮಿ ಝಕಾರಿಯಾ ಜೋಕಟ್ಟೆ,ವೈಟ್ ಸ್ಟೋನ್ ಸಂಸ್ಥೆಯ ಉದ್ಯಮಿ ಜನಾಬ್ ಶರೀಫ್ ಬಿ.ಎಂ,ರಿಯಲ್ ಟೆಕ್ ಕಂಪೆನಿಯ ಉದ್ಯಮಿ ಇಸ್ಮಾಯಿಲ್ ಭಾಗವಹಿಸಲಿದ್ದಾರೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications