ನಾನು ನಿಲ್ಲಲು ಪಕ್ಷದಲ್ಲೇ ಅಪಸ್ವರ ಇದೆ: ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ರಮಾನಾಥ್ ರೈ
ಮಂಗಳೂರು, ಮೇ 16: ನನಗೀಗ ಎಪ್ಪತ್ತೊಂದು ವರ್ಷ. ನನಗಿಂತಲೂ ಹಿರಿಯರು ಚುನಾವಣೆಗೆ ನಿಂತಿದ್ದಾರೆ. ಆದರೆ ನಾನು ಚುನಾವಣೆಗೆ ನಿಲ್ಲೋದಕ್ಕೆ ಪಕ್ಷದಲ್ಲೇ ಅಪಸ್ವರ ಇರುವುದರಿಂದ ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ್ ರೈ ಹೇಳಿದ್ದಾರೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿ ಸೋತ ಬಳಿಕ ಮಂಗಳೂರಿನಲ್ಲಿ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣೆ ವೇಳೆ ಹೇಳಿದಂತೆ ತಾನು ಚುನಾವಣಾ ರಾಜಕೀಯದಿಂದ ಮಾತ್ರ ದೂರವಿದ್ದು, ಪಕ್ಷದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುತ್ತೇನೆ ಎಂದು ಹೇಳಿದ ಮಾಜಿ ಸಚಿವ ರಮಾನಾಥ ರೈ, ಲೋಕಸಭಾ ಚುನಾವಣೆ ಸ್ಪರ್ಧೆಗೆ ಸೂಚಿಸಿದ್ದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ತಿಳಿಸಿದ್ದಾರೆ.

ಚುನಾವಣಾ ರಾಜಕೀಯದಿಂದ ಮಾತ್ರ ದೂರವಿರಲಿದ್ದೇನೆ. ಆದರೆ ಪಕ್ಷ ಎಂಎಲ್ಸಿ ಸೇರಿದಂತೆ ಇತರ ಅವಕಾಶಗಳನ್ನು ನೀಡಿದ್ದಲ್ಲಿ ಅದನ್ನು ಸ್ವೀಕರಿಸಲು ಸಿದ್ಧನಿದ್ದೇನೆ. ನನಗಿಂತ ಪಕ್ಷ ದೊಡ್ಡದು. ಇಷ್ಟು ವರ್ಷದ ರಾಜಕೀಯ ಜೀವನದಲ್ಲಿ ನಾನು ಪಕ್ಷಕ್ಕೆ ವಿರುದ್ಧವಾಗಿ ಎಂದೂ ನಡೆದಿಲ್ಲ ಆದ್ದರಿಂದ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದರು.
ಬಂಟ್ವಾಳದಲ್ಲಿ ತನಗೆ ಸಣ್ಣ ಅಂತರದಲ್ಲಿ ಸೋಲಾಗಿದೆ. ಪಕ್ಷದಲ್ಲಿ ನನಗಿಂತಲೂ ಹಿರಿಯರು ಈಗಲೂ ಇದ್ದಾರೆ. ಆದರೆ ನಾನು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನಮ್ಮ ಪಕ್ಷದಿಂದಲೇ ಅಪಸ್ವರ ಕೇಳಿ ಬರುತ್ತಿದೆ. ಆದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ. ಪಕ್ಷದ ವಿರುದ್ಧ ನಾನು ಈವರೆಗೆ ಯಾವುದೇ ಅಪಸ್ವರ ಎತ್ತಿಲ್ಲ. ಪಕ್ಷದ ಋಣವನ್ನು ಜೀವನ ಪರ್ಯಂತ ತೀರಿಸುತ್ತೇನೆ. ಈ ಬಾರಿಯ ನನ್ನ ಸೋಲಿನ ಅವಲೋಕನವನ್ನು ಮಾಡಿದ್ದೇನೆ. ಚುನಾವಣೆ ನಾವು ಗ್ರಹಿಸಿದ ರೀತಿಯಿಲ್ಲ. ನನಗೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿತ್ತು. ಸಮೀಕ್ಷೆಗಳೂ ಗೆಲ್ಲುವ ರೀತಿಯೇ ಇತ್ತು. ಆದರೆ ಹಿನ್ನಡೆಯಾಗಿದೆ ಎಂದು ರಮಾನಾಥ್ ರೈ ವಿವರಿಸಿದ್ದಾರೆ.

ಮಾತು ಮುಂದುವರಿಸಿದ ಅವರು, ಜನರು ಕಾಂಗ್ರೆಸ್ ಮೇಲೆ ವಿಶ್ವಾಸವನ್ನಿಟ್ಟು ಜನ ಮತ ನೀಡಿದ್ದಾರೆ. ಜಿಲ್ಲೆಯಲ್ಲಿ ಸೋತರೂ ರಾಜ್ಯದಲ್ಲಿ ಸರ್ಕಾರ ನಮ್ಮದೇ ಇದೆ. ಜಿಲ್ಲೆಯಲ್ಲಿ ಕಾರ್ಯಕರ್ತರು ಎದೆಗುಂದಬಾರದು. ಬಿಜೆಪಿ ರಾಜ್ಯದಲ್ಲಿ ಸ್ಪಷ್ಟ ಬಹುಮತವನ್ನು ಯಾವತ್ತೂ ಪಡೆದಿಲ್ಲ. ಜನಸಂಘ ಇರುವಾಗಲೂ ಬಾಹ್ಯ ಬೆಂಬಲದಿಂದಲೇ ಗೆದ್ದಿದ್ದರು. ಜಿಲ್ಲೆಯಲ್ಲಿ ಸೋತರೂ ಗೆದ್ದರೂ ಪಕ್ಷವನ್ನು ಪ್ರಬಲವಾಗಿ ಕಟ್ಟಿದ್ದೇವೆ. ರಾಜ್ಯದ ಜನ ಯಾವತ್ತೂ ಬಿಜೆಪಿಗೆ ಬೆಂಬಲ ನೀಡಿಲ್ಲ ಎಂದು ಬಿಜೆಪಿ ವಿರುದ್ಧ ವ್ಯಂಗ್ಯವಾಡಿದರು.
ಇದು ಬಸವಣ್ಣ ಹುಟ್ಟಿದ ನಾಡು, ಇಲ್ಲಿ ಜ್ಯಾತ್ಯಾತೀತ ನಿಲುವಿನ ಜನರಿಗೆ ಜನ ಮಣೆ ಹಾಕುತ್ತಾರೆ. ಭವಿಷ್ಯದಲ್ಲಿ ಬಿಜೆಪಿ ಖಂಡಿತಾ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನವನ್ನು ರಾಜ್ಯದಲ್ಲಿ ಕಾಂಗ್ರೆಸ್ ಗಳಿಸಲಿದೆ. ಗ್ಯಾರಂಟಿ ಕಾರ್ಯಕ್ರಮ ಪ್ರಮಾಣವಚನ ಸ್ವೀಕಾರವಾದ ತಕ್ಷಣ ಅನುಷ್ಠಾನಕ್ಕೆ ಬರಲಿದೆ. ಕಾಂಗ್ರೆಸ್ನ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚು ಪ್ರಯೋಜನ ತಂದಿದೆ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ರಮಾನಾಥ್ ರೈ ಹೇಳಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications