'ಜನರ ಖಾತೆಗೆ ಮೋದಿ ಈಗ 15 ಲಕ್ಷದ ಬದಲು 30 ಲಕ್ಷ ಹಾಕಬೇಕು'
ಮಂಗಳೂರು, ಜುಲೈ 17: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೇಶದ ಜನರಿಗೆ ನೀಡಿದ್ದ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ. ಬಿಜೆಪಿ ಎಂದರೆ ಭಾರತೀಯ ಜೂಟ್ (ಸುಳ್ಳು) ಪಾರ್ಟಿ ಎಂದು ಮಾಜಿ ಸಚಿವ ರಮಾನಾಥ್ ರೈ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಲೋಕ ಸಭಾ ಚುನಾವಣೆ ಸಂದರ್ಭದಲ್ಲಿ ದೇಶದ ಹೊರಗಿರುವ ಕಪ್ಪು ಹಣವನ್ನು ತರುವುದಾಗಿ ಬಡಾಯಿ ಕೊಚ್ಚಿದ್ದ ನರೇಂದ್ರ ಮೋದಿ ಅವರು ಈವರೆಗೆ ಕಪ್ಪುಹಣ ತಂದಿಲ್ಲ ಎಂದರು.
ಕಪ್ಪು ಹಣ ತಂದರೆ ದೇಶದ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರುಪಾಯಿ ಹಾಕುವುದಾಗಿ ಮೋದಿ ತಿಳಿಸಿದ್ದರು. ಆದರೆ ಈ ವರೆಗೆ ಒಂದು ನಯಾಪೈಸೆ ಜನರ ಖಾತೆಗೆ ಬಂದಿಲ್ಲ. ಈ ಹಿಂದೆ ಶೇಕಡಾ 44ರಷ್ಟಿದ್ದ ಕಪ್ಪು ಹಣ ಈಗ ಶೇಕಡಾ 88ಕ್ಕೆ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ಅವರು 15 ಲಕ್ಷದ ಬದಲು ಜನರ ಖಾತೆಗೆ 30 ಲಕ್ಷ ಹಾಕಬೇಕು ಎಂದು ವ್ಯಂಗ್ಯವಾಡಿದರು.

ಕೇಂದ್ರ ಸರಕಾರ ಎಲ್ಲ ಕ್ಷೇತ್ರಗಳಲ್ಲಿ ವೈಫಲ್ಯ ಕಂಡಿದೆ. ದೇಶದಲ್ಲಿ ಪೆಟ್ರೋಲ್, ಅಡುಗೆ ಅನಿಲ ದರ ಹೆಚ್ಚಳವಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ ಎಂದು ವಾಗ್ದಾಳಿ ನಡೆಸಿದರು.
ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಿವೆ. ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿವೆ. ಇದು ದೇಶದ ಕಾನೂನು ಸುವ್ಯವಸ್ಥೆಗೆ ಹಿಡಿದ ಕೈಗನ್ನಡಿ. ಕೇಂದ್ರದ ಜನ್ ಧನ್ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಖಾತೆ ತೆರೆಯಲಾಗಿದೆ? ಎಷ್ಟು ಜನರಿಗೆ ಸಾಲ ನೀಡಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಸವಾಲು ಹಾಕಿದರು.
ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿವೆ. ಮಂಗಳೂರಿನ ಪಂಪ್ ವಲ್ , ತೊಕ್ಕೊಟಿನ ಫ್ಲೈ ಓವರ್ ಗಳ ಕಾಮಗಾರಿ ಸ್ಥಗಿತಗೊಂಡಿದ್ದು, ಜನರು ಹಿಡಿ ಶಾಪ ಹಾಕುತ್ತಿದ್ದಾರೆ. ಬಿಜೆಪಿ ಕೇವಲ ಪ್ರಚಾರಕ್ಕಾಗಿ ಗಿಮಿಕ್ ಮಾಡುತ್ತಾ ಕಾಲ ಕಳೆಯುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಅನ್ನು ಮುಸ್ಲಿಮರ ಪಕ್ಷ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ನೀಡಿದ ಕುರಿತು ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಆ ರೀತಿ ಹೇಳಿಕೆ ನೀಡಲ್ಲ. ಇದೊಂದು ಷಡ್ಯಂತ್ರ ಎಂದು ಅವರು ಹೇಳಿದರು. ಕಾಂಗ್ರೆಸ್ ಎಲ್ಲ ಜಾತಿ, ಧರ್ಮ, ಮತ, ಪಂಥ ಗಳ ಏಳಿಗೆಗೆ ದುಡಿಯುವ ಪಕ್ಷ. ನಮಗೆ ಹಿಂದೂಗಳ ಮತ ಬೇಡ ಎಂದು ಯಾರೂ ಹೇಳುವುದಿಲ್ಲ ಎಂದು ಹೇಳಿದರು.
ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಕಾಂಗ್ರೆಸ್ ನ ನಿಷ್ಠಾವಂತ ಕಾರ್ಯಕರ್ತ. ಮುಂದಿನ ಲೋಕ ಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚಿಂತಿಸಿಲ್ಲ. ಇದು ಪಕ್ಷದ ಹಿರಿಯರಿಗೆ ಬಿಟ್ಟ ವಿಚಾರ ಎಂದು ತಿಳಿಸಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications