ಮಾಜಿ ಶಾಸಕರನ್ನು ಕಾಡಿದ ಬೀದಿ ನಾಯಿ ಕಾಟ: 25 ದಿನಗಳಿಂದ ವ್ಹೀಲ್ ಚೇರ್ನಲ್ಲೇ ಓಡಾಟ
ಮಂಗಳೂರು, ಫೆಬ್ರವರಿ 16: ಮಂಗಳೂರು ನಗರದಲ್ಲಿ ಇತ್ತೀಚಿಗೆ ಯಾವ ಬೀದಿ, ರಸ್ತೆಗಳಿಗೆ ಹೋದರೂ ಬೀದಿ ನಾಯಿಗಳದ್ದೇ ಕಾಟ ಶುರುವಾಗಿದೆ. ಬೈಕ್, ಕಾರ್ಗಳು ಸೇರಿದಂತೆ ಮಾರ್ಗದಲ್ಲಿ ಓಡಾಡುತ್ತಿರುವ ವಾಹನಗಳನ್ನು ಬೆನ್ನಟ್ಟುದಲ್ಲದೆ, ಹಲವರ ಮೇಲೆರಗಿ ಕಚ್ಚಿ ಗಾಯಗೊಳಿಸುತ್ತಿದೆ.
ಸದ್ಯ ಮಂಗಳೂರಿನ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರಿಗೂ ಬೀದಿ ನಾಯಿ ಕಾಟ ಎದುರಾಗಿದೆ. ಬೀದಿ ನಾಯಿ ಕಚ್ಚಿದ್ದ ಪರಿಣಾಮ ಅವರು ಕಳೆದ ಇಪ್ಪತ್ತೈದು ದಿನಗಳಲ್ಲಿ ವ್ಹೀಲ್ ಚೆಯರ್ನಲ್ಲೇ ಓಡಾಟ ನಡೆಸುತ್ತಿದ್ದಾರೆ.

ನಗರದ ಕದ್ರಿ ಪಾರ್ಕ್ ನೊಳಗಡೆ ವಾಕಿಂಗ್ ಎಂದು ಬಂದಿದ್ದ ಮೊಯ್ದೀನ್ ಬಾವಾ ಅವರಿಗೆ ನಾಯಿಯೊಂದು ದಾಳಿ ನಡೆಸಿ ಕಾಲಿಗೆ ಕಚ್ಚಿ ಗಾಯಗೊಳಿಸಿದೆ. ಪರಿಣಾಮ ಕಾಲಿನ ನರಕ್ಕೆ ಗಾಯವಾಗಿ ಅವರು ನಡೆಯಲಾರದಂಥಹ ಸ್ಥಿತಿಗೆ ತಲುಪಿದ್ದಾರೆ. ಕದ್ರಿ ಪಾರ್ಕ್ನೊಳಗಡೆ ಸಾಕು ನಾಯಿಗಳನ್ನು ತರುವಂತಿಲ್ಲ. ಆದರೆ ಪಾರ್ಕ್ನಲ್ಲಿ ಬೀದಿ ನಾಯಿಗಳ ಕಾಟ ವಾಯು ವಿಹಾರಿಗಳನ್ನು ಭೀತಿಗೆ ತಳ್ಳಿದೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮೊಯ್ದೀನ್ ಬಾವಾ ಅವರು, ಈಗಾಗಲೇ ಡಿಸಿಯವರಿಗೆ, ಮನಪಾ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ. ಬೀದಿ ನಾಯಿಗಳ ಸಂತಾನ ಹೆಚ್ಚದಂತೆ ಕ್ರಮ ವಹಿಸಬೇಕು. ಅಲ್ಲದೇ ಬೀದಿಗಳಲ್ಲಿರುವ ನಾಯಿಗಳನ್ನು ಬೇರೆಡೆ ಕೊಂಡೊಯ್ದು, ಸಾಕುವುದಕ್ಕೆ ವ್ಯವಸ್ಥೆ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ವೃದ್ಧನ ಮೇಲೆ ಬೀದಿ ನಾಯಿಗಳ ಕಾಟ
ಬೆಂಗಳೂರು: ವೃದ್ಧನ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿರುವ ಘಟನೆ ಇತ್ತೀಚಿಗೆ ಬೆಂಗಳೂರಿನ ಮಹದೇವಪುರ ಬಳಿ ನಡೆದಿದೆ. ರಸ್ತೆ ಮೇಲೆ ವೃದ್ಧ ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಏಕಾಏಕಿ ಎರಡು ನಾಯಿಗಳು ದಾಳಿ ಮಾಡಿವೆ. ಈ ವೇಳೆ ವೃದ್ಧನ ಕಾಲು ಕಚ್ಚಿ ಗಾಯಗೊಳಿಸಿದೆ.
ಮತ್ತೋರ್ವ ವ್ಯಕ್ತಿ ಬಂದು ಓಡಿಸೋವರೆಗೂ ವೃದ್ಧನ ಮೇಲೆ ನಾಯಿ ದಾಳಿ ಮಾಡಿದೆ. ಈ ಬಗ್ಗೆ ಪೊಲೀಸರಿಗೆ ಸ್ಥಳೀಯರು ಸಾಮಾಜಿಕ ಜಾಲತಾಣದಲ್ಲಿ ಟ್ಯಾಗ್ ಮಾಡಿ ಘಟನೆ ವಿವರಿಸಿದ್ದಾರೆ. ನಗರದಲ್ಲಿ ಬೀದಿ ನಾಯಿಗಳ ಕಾಟ ಜಾಸ್ತಿಯಾಗಿದೆ. ವೃದ್ಧರು ಭಯದಲ್ಲೇ ನಡೆದಾಡುವಂತಾಗಿದೆ. ಹೀಗಾಗಿ ಬೀದಿ ನಾಯಿಗಳ ಬಗ್ಗೆ ಕ್ರಮಕೈಗೊಳ್ಳಿ ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications