ಸ್ವಚ್ಛತಾ ಆಭಿಯಾನದೊಂದಿಗೆ ಚುನಾವಣಾ ಪ್ರಚಾರ ಆರಂಭಿಸಿದ ಮದನ್
ಮಂಗಳೂರು, ಫೆಬ್ರವರಿ 6: ಕೋಮು ಸಂಘರ್ಷ, ರಾಜಕೀಯ ದೊಂಬರಾಟಕ್ಕೆ ಸಾಕ್ಷಿಯಾಗುತ್ತಿರುವ ಕಡಲ ತಡಿಯ ನಗರ ಮಂಗಳೂರಿನಲ್ಲಿ ಬದಲಾವಣೆ ತರುವ ದೃಷ್ಠಿಯಿಂದ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ರಾಜಕೀಯಕ್ಕೆ ದಾಪುಗಾಲಿಟ್ಟಿದ್ದಾರೆ.
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಇದೀಗ ಮದನ್ ವಿಶಿಷ್ಟ ರೀತಿಯ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಅವರು ಜನರೊಂದಿಗೆ ಬೆರೆತುಕೊಳ್ಳಲು ಜನಪರ ಕಾರ್ಯಕ್ರಮಗಳನ್ನು ಕೂಡಾ ಹಮ್ಮಿಕೊಳ್ಳುತ್ತಿದ್ದಾರೆ.
ಮಂಗಳೂರು ನಗರದ ಬಂದರು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ ಬಜ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದ ಮದನ್ ಇತ್ತೀಚೆಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶದ ಇಂಗಿತ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಬಿಜೆಪಿಗೆ ಸೇರಿ ಚುನಾವಣಾ ಕಣಕ್ಕೆ ಇಳಿಯಲು ಪ್ರಯತ್ನ ನಡೆಸಿದ್ದರು. ಆದರೆ ಆ ಪ್ರಯತ್ನ ಫಲಕಾಣದ ಹಿನ್ನೆಲೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ.

ವಿವೇಕಾನಂದರೇ ಪ್ರೇರಣೆ
ಮೂಲತಃ ಕೊಡಗು ಜಿಲ್ಲೆಯವರಾಗಿರುವ ಮದನ್ ರಾಜಕೀಯಕ್ಕೆ ಕಾಲಿಡಲು ಪ್ರೇರಣೆ ಸ್ವಾಮಿ ವಿವೇಕಾನಂದರಂತೆ. ಪೊಲೀಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಒಮ್ಮೆಗೆ ಮಾಯವಾಗಿದ್ದ ಮದನ್ ಈಗ ಮತ್ತೆ ಒಂದಷ್ಟು ಯುವಕರ ಜತೆ ಕಾಣಿಸಿಕೊಂಡಿದ್ದಾರೆ.

ರಾಜಕೀಯ ಕೆಸರು ಸ್ವಚ್ಛಗೊಳಿಸುವ ಕಾಯಕ
ಈಗಾಗಲೇ ತಮ್ಮ ಚುನಾವಣಾ ಪ್ರಚಾರ ಆರಂಭಿಸಿರುವ ಮದನ್ ತಳಮಟ್ಟದಿಂದ ಕೆಲಸ ಮಾಡಿಕೊಂಡು ಜನರನ್ನು ತಲುಪುವ ಉದ್ದೇಶದಿಂದ ಹಾರೆ, ಪಿಕ್ಕಾಸು ಹಿಡಿದುಕೊಂಡು ರಾಜಕೀಯದಲ್ಲಿ ಮೆತ್ತಿಕೊಂಡಿರುವ ಕೆಸರನ್ನು ಸ್ವಚ್ಛಗೊಳಿಸುವ ಕಾಯಕದಲ್ಲೂ ತೊಡಗಿಸಿಕೊಂಡಿದ್ದಾರೆ.

ಹಿರಿಯರ ಮಾರ್ಗದರ್ಶನ ಯುವಕರ ತಂಡ
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಮಂಗಳೂರು ಮಹಾನಗರ ಪಾಲಿಕೆಯ 38 ವಾರ್ಡ್ ಗಳ ಜನರನ್ನು ತಲುಪಲು ಪ್ರತೀ ವಾರ್ಡ್ ನ ಆಯ್ದ ಜಾಗಗಳಲ್ಲಿ ಸ್ವಚ್ಛತಾ ಕಾರ್ಯ ಮತ್ತು ಎರಡು ದಿನಗಳ ಕಾಲ ಪ್ರಚಾರ ಕಾರ್ಯ ಕೈಗೊಳ್ಳಲು ಪ್ರಾರಂಭಿಸಿದ್ದಾರೆ. ಈ ಕಾರ್ಯಕ್ಕಾಗಿ ಹಿರಿಯರ ಮಾರ್ಗದರ್ಶನದೊಂದಿಗೆ ಯುವಕರ ಪಡೆಯನ್ನೂ ಕಟ್ಟಿಕೊಂಡಿದ್ದಾರೆ.

'ಐ ಸಪೋರ್ಟ್ ಮದನ್'
ರಾಜಕೀಯ ಪಕ್ಷಗಳು ಪ್ರಚಾರ ಆರಂಭಿಸುವ ಮೊದಲೇ ಮದನ್ ತಳಮಟ್ಟದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. 'ಐ ಸಪೋರ್ಟ್ ಮದನ್' ಎಂದು ಸೋಶಿಯಲ್ ಮೀಡಿಯಾದಲ್ಲೂ ಬಹಳಷ್ಟು ಜನ ಬೆಂಬಲ ವ್ಯಕ್ತಪಡಿಸಿದ್ದಾರೆ. ಮದನ್ ಅವರನ್ನು ಹಿಂಬಾಲಿಸುತ್ತಿರುವಂತಹ ಸ್ವಯಂ ಸೇವಕರು ಕೂಡಾ ಮಂಗಳೂರಿನ ಸ್ವಚ್ಛತೆಗೆ ಮದನ್ ಜತೆ ಕೈಜೋಡಿಸಿದ್ದಾರೆ.

ಮೂಡಿಸಿದ ಹೊಸ ಆಶಾಭಾವನೆ
ಒಟ್ಟಿನಲ್ಲಿ ಮಂಗಳೂರಿನಲ್ಲಿ ನಡೆಯುತ್ತಿರುವ ರಾಜಕೀಯ ಕಚ್ಚಾಟದ ನಡುವೆ, ಸ್ವಚ್ಛ ಪರಿಸರದೊಂದಿಗೆ ಸ್ವಚ್ಛ ರಾಜಕಾರಣ ನೀಡುವ ಉದ್ದೇಶದಿಂದ ಮಾಜಿ ಯುವ ಪೊಲೀಸ್ ಅಧಿಕಾರಿ ಮುನ್ನಡಿಯಿಟ್ಟಿದ್ದು, ಜನರಲ್ಲೂ ಹೊಸ ಆಶಾಭಾವನೆ ಮೂಡಿಸುತ್ತಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications