ಮೂಡಬಿದಿರೆ ಕಲಾತ್ಮಕತೆ ಮೆಚ್ಚಿದ ಮನಮೋಹನ್ ಸಿಂಗ್ ಪುತ್ರಿ
ಮೂಡಬಿದಿರೆ, ಅಕ್ಟೋಬರ್, 20: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಪುತ್ರಿಯಾದ ದೆಹಲಿ ವಿವಿಯ ಇತಿಹಾಸ ವಿಭಾಗ ಮುಖ್ಯಸ್ಥೆ ಪ್ರೊ.ಯುಪಿಂದರ್ ಸಿಂಗ್ ಹಾಗೂ ಅವರ ಅಳಿಯ ದೆಹಲಿಯ ಸೈಂಟ್ ಸ್ಟೀಫನ್ಸ್ ಕಾಲೇಜಿನ ತತ್ವಶಾಸ್ತ್ರ ಪ್ರಾಧ್ಯಾಪಕ ಡಾ.ವಿಜಯ್ ತಂಕಾ ಅಕ್ಟೋಬರ್ 20ರ ಮಂಗಳವಾರದಂದು ಮೂಡಬಿದಿರೆಗೆ ಆಗಮಿಸಿ ಅದರ ಕಲಾತ್ಮಕತೆ ಶ್ಲಾಘಿಸಿದರು.
ಮೂಡುಬಿದಿರೆಯ ಜೈನ ಬಸದಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯುಪಿಂದರ್ ಸಿಂಗ್ ಅವರು 'ಜೈನ ಕಾಶಿಯಾದ ಮೂಡುಬಿದಿರೆಗೆ ಬರಬೇಕೆನ್ನುವುದು ಹಲವು ದಿನಗಳ ದೊಡ್ಡ ಕನಸಾಗಿತ್ತು. ಸಾವಿರ ಕಂಬ ಬಸದಿ ಕಲಾತ್ಮಕತೆ ಕಂಡು ಖುಷಿಯಾಗಿದೆ. ಇಲ್ಲಿನ ಐತಿಹಾಸಿಕ ಮಹತ್ವ, ಸಾಂಸ್ಕೃತಿಕ ಹಿನ್ನೆಲೆಯ ಕೆತ್ತನೆಗಳು ಅಧ್ಯಯನ ಯೋಗ್ಯವಾಗಿದೆ' ಎಂದು ಡಾ.ಮನಮೋಹನ್ ಸಿಂಗ್ ಪುತ್ರಿಯಾದ ದೆಹಲಿ ವಿವಿಯ ಇತಿಹಾಸ ವಿಭಾಗ ಮುಖ್ಯಸ್ಥೆ ಪ್ರೊ.ಯುಪಿಂದರ್ ಸಿಂಗ್ ಹೇಳಿದರು.[ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ದೃಶ್ಯಕಲೆಯಲ್ಲಿ ಪದವಿ, ಉದ್ಯೋಗ]

ಜೈನ ಬಸದಿಯಲ್ಲಿರುವ ಹಿಂದೂ ದೇವತೆಗಳ ಕೆತ್ತನೆಯಿಂದ ಪುಳಕಿತರಾದ ಅವರು ಇಲ್ಲಿನ ಸಾಮರಸ್ಯದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಮೂಡುಬಿದಿರೆಯ ಸೀಯಾಳಾಭಿಷೇಕ ಪ್ರಿಯ ಶ್ರೀ ಹನುಮಂತ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರ ಜಿ. ಉಮೇಶ್ ಪೈ ಮತ್ತು ಮೊಕ್ತೇಸರರು ಹಾಜರಿದ್ದು ಯುಪಿಂದರ್ ಸಿಂಗ್ ಅವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಭೈರಪ್ಪ ಅವರು ಉಪಸ್ಥಿತರಿದ್ದರು
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications