ಬಂಟರ ಸಂಘದ ಶತಮಾನೋತ್ಸವ ಕಟ್ಟಡಕ್ಕೆ ಶಿಲಾನ್ಯಾಸ
ಮಂಗಳೂರು, ಮೇ. 13: ಬಂಟ ಸಮುದಾಯ ಶಿಕ್ಷಣ , ವೈದ್ಯಕೀಯ , ಉದ್ಯಮ, ಬ್ಯಾಂಕಿಂಗ್ ಕ್ಷೇತ್ರ ಸೇರಿದಂತೆ ನಾನಾ ಕ್ಷೇತ್ರದಲ್ಲಿ ಸಾಧನೆ ಮೆರೆದು ಸಾಧನಶೀಲ ಸಮಾಜವಾಗಿ ಹೊರಹೊಮ್ಮಿದೆ. ಈ ಮೂಲಕ ಹಿರಿಯರು ಕಟ್ಟಿ ಬೆಳೆಸಿದ ಕನಸನ್ನು ನಿಜಕ್ಕೂ ಸಾಕಾರಗೊಳಿಸಿದಂತಾಗಿದೆ ಎಂದು ನಿಟ್ಟೆ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ಎನ್ ವಿನಯ ಹೆಗ್ಡೆ ಹೇಳಿದರು.
ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಆವರಣದಲ್ಲಿ ಗುರುವಾರ ನಡೆದ ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಕಟ್ಟಡಗಳ ಸಂಕೀರ್ಣ ನಿರ್ಮಾಣದ ಶಿಲಾನ್ಯಾಸ ಸಮಾರಂಭದಲ್ಲಿ ನಾಮಫಲಕ ಅನಾವರಣ ಮಾಡಿ ಮಾತನಾಡಿದರು.[ನಿಡ್ಡೋಡಿಯ ರೈತನ ಮಗಳು ಮಿಶಲ್ ಯುಪಿಎಸ್ಸಿ ಸಾಧಕಿ!]

ರಾಜಕೀಯವಾಗಿಯೂ ಬಂಟರು ಬಲಾಢ್ಯವಾಗಿದ್ದಾರೆ. ಹಿಂದುಳಿದ ವರ್ಗ ಎಂಬ ಹಣೆಪಟ್ಟಿಯನ್ನು ಮೀರಿಬೇಳೆದ ಸಮುದಾಯ . ನಾವು ಸಮಾಜದಿಂದ ಪ್ರಯೋಜನ ಪಡೆದುಕೊಂಡ ಮೇಲೆ ಅದನ್ನು ಅರ್ಪಿಸುವ, ಋಣ ತೀರಿಸುವ ಮನೋಭಾವ ಬೆಳೆಸಬೇಕು ಎಂದು ಹೇಳಿದರು.[ಬಿಸಿಲ ಧಗೆಯ ನಡುವೆ ಕರಾವಳಿಗೆ ತಂಪೆರೆದ ವರುಣ]
ಐಜಿಪಿ ಓಂ ಪ್ರಕಾಶ್ ಮಾತನಾಡಿ, ರಾಷ್ಟ್ರದಲ್ಲೇ ಬಂಟ ಸಮುದಾಯ ಪ್ರಗತಿಶೀಲ ಸಮಾಜವಾಗಿ ಮೂಡಿಬಂದಿದೆ. ಈ ರೀತಿ ಐಕ್ಯತೆ ಸರ್ವ ಕ್ಷೇತ್ರದಲ್ಲೂ ಅಭಿವೃದ್ಧಿ ಹೊಂದಿದ ಸಮಾಜ ದೇಶದಲ್ಲಿ ಇನ್ನೊಂದು ಇರಲಿಕ್ಕಿಲ್ಲ ಎಂದರು.
ಹೊಸ ಕಟ್ಟಡದ ವಿಶೇಷತೆಗಳು
ಬಂಟರ ಯಾನೆ ನಾಡವರ ಮಾತ್ರ ಸಂಘ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ , ಶತಮಾನದ ಸವಿನೆನಪಿಗಾಗಿ ಯೋಜನೆ ಹಾಕಿಕೊಳ್ಳಲಾಗಿದೆ. ಈ ಸಂಕೀರ್ಣ ಅಂದಾಜು 230 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
2000 ಆಸನದ ಸಭಾಭವನ
ವಿನ್ಯಾಸಕಾರ ಎಸ್ ಕೆಎಸ್ ಸನತ್ ಕುಮಾರ್ ಶೆಟ್ಟಿ ಮಾತನಾಡಿ , ಕಟ್ಟಡದಲ್ಲಿ 2000 ಆಸನ ವ್ಯವಸ್ಥೆಯಿರುವ ಸುಸಜ್ಜಿತ ಸಭಾಭವನ , ಸಭೆ ಸಮಾರಂಭ ಏರ್ಪಡಿಸಲು ಎರಡು ಸಭಾಭವನ ನಿರ್ಮಾಣವಾಗಲಿದೆ. 1250 ರಷ್ಟು ವಾಹನ ನಿಲುಗಡೆಗೆ ವಿಸ್ತಾರವಾದ ಅವಕಾಶ , 4 ನೇ ಮಹಡಿಯಲ್ಲಿ 50 ಸಾವಿರ ಚದರ ಅಡಿಯಷ್ಟು ಓಪನ್ ಟೆರೇಸ್, ಸುಮಾರು ಆರು ಲಕ್ಷ ಚದರ ಅಡಿ ವಾಣಿಜ್ಯ ಸಂಕೀರ್ಣ ಹಾಗೂ ವಿಶ್ವ ದರ್ಜೆಯ ಜಿಮ್ ಮತ್ತು ಕ್ಲಬ್ ಇರುತ್ತದೆ ಎಂದರು.
ದಕ ಜಿಲ್ಲಾ ಉಸ್ತುವಾರಿ ಸಚಿವ ರಾಮನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕಿ ಶಕುಂತಲಾ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ , ಮಾಜಿ ಸಚಿವ ನಾಗರಾಜ ಶೆಟ್ಟಿ, ಮಂಗಳೂರು ಪೊಲೀಸ್ ಕಮಿಷನರ್ ಚಂದ್ರಶೇಖರ್, ಎಸ್ ಪಿ ಎಸ್ . ಡಿ. ಶರಣಪ್ಪ , ಎಂಆರ್ಜಿ ಗ್ರೂಪ್ ಚೇರ್ಮನ್ ಪ್ರಕಾಶ್ ಶೆಟ್ಟಿ , ಮುಂಬಯಿ ಬಂಟರ ಸಂಘದ ಅಧ್ಯಕ್ಷ ವಿಶ್ವನಾಥ್ ಶೆಟ್ಟಿ ಕರ್ನಿರೆ, ಡಾ. ಎಜೆ. ಶೆಟ್ಟಿ ಮಾತನಾಡಿ ಹಾಜರಿದ್ದರು.
ಬ್ರಿಗೇಡಿಯರ್ ಐ, ಎನ್. ರೈ, ಮುಂಬಯಿ ಬಂಟರ ಸಂಘದ ಮಾಜಿ ಅಧ್ಯಕ್ಷ ಮೇರ್ಕಳ ತ್ಯಾಂಪಣ್ಣ ಶೆಟ್ಟಿ, ಕೊಲ್ಲೂರು ಮೂಕಾಂಬಿಕ ದೇವಳ ಮಾಜಿ ಆಡಳಿತ ಮೋಕೆಸ್ತರ ಅಪ್ಪಣ್ಣ ಹೆಗ್ಡೆ, ಉದ್ಯಮಿ ಪದ್ಮನಾಭ , ಡಾ. ಆಶಾಜ್ಯೋತಿ ರೈ, ಪ್ರೇಮಲತಾ ಸತೀಶ್ಚಂದ್ರ ಹೆಗ್ಡೆ, ಲತಾ ಜಯರಾಮ ಶೆಟ್ಟಿ, ಆಶಾ ಮನೋಹರ ಹೆಗ್ಡೆ , ಮಂಜುಳಾ ಶೆಟ್ಟಿ ಹಾಗೂ ನಾನಾ ಬಂಟ ಸಂಘಗಳ ಪದಾಧಿಕಾರಿಗಳು, ಬಂಟರ ಯಾನೆ ನಾಡವರ ಮಾತೃ ಸಂಘದ ಜತೆ ಕಾರ್ಯದರ್ಶಿ ಹೇಮನಾಥ ಶೆಟ್ಟಿ, ನವೀನ್ ಶೆಟ್ಟಿ ಮತ್ತು ರಾಜೇಶ್ವರಿ ಶೆಟ್ಟಿ ಇದ್ದರು. ಎಸ್ ಕೆಎಸ್ ಸನತ್ ಕುಮಾರ್ ಶೆಟ್ಟಿ ಮತ್ತು ಯುಪಿಎಸ್ಸಿಯಲ್ಲಿ ಸಾಧನೆ ಮಾಡಿದ ನಿವ್ಯಾ ಪಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications