ಬಂಟರ ಸಂಘದ ಶತಮಾನೋತ್ಸವ ಕಟ್ಟಡಕ್ಕೆ ಶಿಲಾನ್ಯಾಸ
ಮಂಗಳೂರು, ಮೇ. 13: ಬಂಟ ಸಮುದಾಯ ಶಿಕ್ಷಣ , ವೈದ್ಯಕೀಯ , ಉದ್ಯಮ, ಬ್ಯಾಂಕಿಂಗ್ ಕ್ಷೇತ್ರ ಸೇರಿದಂತೆ ನಾನಾ ಕ್ಷೇತ್ರದಲ್ಲಿ ಸಾಧನೆ ಮೆರೆದು ಸಾಧನಶೀಲ ಸಮಾಜವಾಗಿ ಹೊರಹೊಮ್ಮಿದೆ. ಈ ಮೂಲಕ ಹಿರಿಯರು ಕಟ್ಟಿ ಬೆಳೆಸಿದ ಕನಸನ್ನು ನಿಜಕ್ಕೂ ಸಾಕಾರಗೊಳಿಸಿದಂತಾಗಿದೆ ಎಂದು ನಿಟ್ಟೆ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ಎನ್ ವಿನಯ ಹೆಗ್ಡೆ ಹೇಳಿದರು.
ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಆವರಣದಲ್ಲಿ ಗುರುವಾರ ನಡೆದ ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಕಟ್ಟಡಗಳ ಸಂಕೀರ್ಣ ನಿರ್ಮಾಣದ ಶಿಲಾನ್ಯಾಸ ಸಮಾರಂಭದಲ್ಲಿ ನಾಮಫಲಕ ಅನಾವರಣ ಮಾಡಿ ಮಾತನಾಡಿದರು.[ನಿಡ್ಡೋಡಿಯ ರೈತನ ಮಗಳು ಮಿಶಲ್ ಯುಪಿಎಸ್ಸಿ ಸಾಧಕಿ!]

ರಾಜಕೀಯವಾಗಿಯೂ ಬಂಟರು ಬಲಾಢ್ಯವಾಗಿದ್ದಾರೆ. ಹಿಂದುಳಿದ ವರ್ಗ ಎಂಬ ಹಣೆಪಟ್ಟಿಯನ್ನು ಮೀರಿಬೇಳೆದ ಸಮುದಾಯ . ನಾವು ಸಮಾಜದಿಂದ ಪ್ರಯೋಜನ ಪಡೆದುಕೊಂಡ ಮೇಲೆ ಅದನ್ನು ಅರ್ಪಿಸುವ, ಋಣ ತೀರಿಸುವ ಮನೋಭಾವ ಬೆಳೆಸಬೇಕು ಎಂದು ಹೇಳಿದರು.[ಬಿಸಿಲ ಧಗೆಯ ನಡುವೆ ಕರಾವಳಿಗೆ ತಂಪೆರೆದ ವರುಣ]
ಐಜಿಪಿ ಓಂ ಪ್ರಕಾಶ್ ಮಾತನಾಡಿ, ರಾಷ್ಟ್ರದಲ್ಲೇ ಬಂಟ ಸಮುದಾಯ ಪ್ರಗತಿಶೀಲ ಸಮಾಜವಾಗಿ ಮೂಡಿಬಂದಿದೆ. ಈ ರೀತಿ ಐಕ್ಯತೆ ಸರ್ವ ಕ್ಷೇತ್ರದಲ್ಲೂ ಅಭಿವೃದ್ಧಿ ಹೊಂದಿದ ಸಮಾಜ ದೇಶದಲ್ಲಿ ಇನ್ನೊಂದು ಇರಲಿಕ್ಕಿಲ್ಲ ಎಂದರು.
ಹೊಸ ಕಟ್ಟಡದ ವಿಶೇಷತೆಗಳು
ಬಂಟರ ಯಾನೆ ನಾಡವರ ಮಾತ್ರ ಸಂಘ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ , ಶತಮಾನದ ಸವಿನೆನಪಿಗಾಗಿ ಯೋಜನೆ ಹಾಕಿಕೊಳ್ಳಲಾಗಿದೆ. ಈ ಸಂಕೀರ್ಣ ಅಂದಾಜು 230 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
2000 ಆಸನದ ಸಭಾಭವನ
ವಿನ್ಯಾಸಕಾರ ಎಸ್ ಕೆಎಸ್ ಸನತ್ ಕುಮಾರ್ ಶೆಟ್ಟಿ ಮಾತನಾಡಿ , ಕಟ್ಟಡದಲ್ಲಿ 2000 ಆಸನ ವ್ಯವಸ್ಥೆಯಿರುವ ಸುಸಜ್ಜಿತ ಸಭಾಭವನ , ಸಭೆ ಸಮಾರಂಭ ಏರ್ಪಡಿಸಲು ಎರಡು ಸಭಾಭವನ ನಿರ್ಮಾಣವಾಗಲಿದೆ. 1250 ರಷ್ಟು ವಾಹನ ನಿಲುಗಡೆಗೆ ವಿಸ್ತಾರವಾದ ಅವಕಾಶ , 4 ನೇ ಮಹಡಿಯಲ್ಲಿ 50 ಸಾವಿರ ಚದರ ಅಡಿಯಷ್ಟು ಓಪನ್ ಟೆರೇಸ್, ಸುಮಾರು ಆರು ಲಕ್ಷ ಚದರ ಅಡಿ ವಾಣಿಜ್ಯ ಸಂಕೀರ್ಣ ಹಾಗೂ ವಿಶ್ವ ದರ್ಜೆಯ ಜಿಮ್ ಮತ್ತು ಕ್ಲಬ್ ಇರುತ್ತದೆ ಎಂದರು.
ದಕ ಜಿಲ್ಲಾ ಉಸ್ತುವಾರಿ ಸಚಿವ ರಾಮನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕಿ ಶಕುಂತಲಾ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ , ಮಾಜಿ ಸಚಿವ ನಾಗರಾಜ ಶೆಟ್ಟಿ, ಮಂಗಳೂರು ಪೊಲೀಸ್ ಕಮಿಷನರ್ ಚಂದ್ರಶೇಖರ್, ಎಸ್ ಪಿ ಎಸ್ . ಡಿ. ಶರಣಪ್ಪ , ಎಂಆರ್ಜಿ ಗ್ರೂಪ್ ಚೇರ್ಮನ್ ಪ್ರಕಾಶ್ ಶೆಟ್ಟಿ , ಮುಂಬಯಿ ಬಂಟರ ಸಂಘದ ಅಧ್ಯಕ್ಷ ವಿಶ್ವನಾಥ್ ಶೆಟ್ಟಿ ಕರ್ನಿರೆ, ಡಾ. ಎಜೆ. ಶೆಟ್ಟಿ ಮಾತನಾಡಿ ಹಾಜರಿದ್ದರು.
ಬ್ರಿಗೇಡಿಯರ್ ಐ, ಎನ್. ರೈ, ಮುಂಬಯಿ ಬಂಟರ ಸಂಘದ ಮಾಜಿ ಅಧ್ಯಕ್ಷ ಮೇರ್ಕಳ ತ್ಯಾಂಪಣ್ಣ ಶೆಟ್ಟಿ, ಕೊಲ್ಲೂರು ಮೂಕಾಂಬಿಕ ದೇವಳ ಮಾಜಿ ಆಡಳಿತ ಮೋಕೆಸ್ತರ ಅಪ್ಪಣ್ಣ ಹೆಗ್ಡೆ, ಉದ್ಯಮಿ ಪದ್ಮನಾಭ , ಡಾ. ಆಶಾಜ್ಯೋತಿ ರೈ, ಪ್ರೇಮಲತಾ ಸತೀಶ್ಚಂದ್ರ ಹೆಗ್ಡೆ, ಲತಾ ಜಯರಾಮ ಶೆಟ್ಟಿ, ಆಶಾ ಮನೋಹರ ಹೆಗ್ಡೆ , ಮಂಜುಳಾ ಶೆಟ್ಟಿ ಹಾಗೂ ನಾನಾ ಬಂಟ ಸಂಘಗಳ ಪದಾಧಿಕಾರಿಗಳು, ಬಂಟರ ಯಾನೆ ನಾಡವರ ಮಾತೃ ಸಂಘದ ಜತೆ ಕಾರ್ಯದರ್ಶಿ ಹೇಮನಾಥ ಶೆಟ್ಟಿ, ನವೀನ್ ಶೆಟ್ಟಿ ಮತ್ತು ರಾಜೇಶ್ವರಿ ಶೆಟ್ಟಿ ಇದ್ದರು. ಎಸ್ ಕೆಎಸ್ ಸನತ್ ಕುಮಾರ್ ಶೆಟ್ಟಿ ಮತ್ತು ಯುಪಿಎಸ್ಸಿಯಲ್ಲಿ ಸಾಧನೆ ಮಾಡಿದ ನಿವ್ಯಾ ಪಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications