ಹಣದಾಸೆಗೆ ಸ್ನೇಹಿತನನ್ನೇ ಹತ್ಯೆಗೈದಿದ್ದ ನಾಲ್ಕು ಆರೋಪಿಗಳು ಅಂದರ್!
ಮಂಗಳೂರು, ಜನವರಿ. 11 : ಉದ್ಯಮಿ ಉಮೇಶ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಮೂಲ್ಕಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರಸಾದ್ ಆಚಾರ್ಯ, ರಾಜೇಶ್ ಶೆಟ್ಟಿ, ತಿಲಕ್ ಪೂಜಾರಿ, ಪ್ರಕಾಶ್ ಎಂಬುವವರನ್ನು ಬಂಧಿಸಿದ್ದಾರೆ. ವಿಚಿತ್ರ ಅಂದರೆ ಬಂಧಿತ ಆರೋಪಿಗಳು ಉಮೇಶ್ ಶೆಟ್ಟಿಯ ಸ್ನೇಹಿತರು. ಇವರು ಹಣದಾಸೆಗೆ ಈ ಕೊಲೆ ಮಾಡಿದ್ದರು ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.
ಘಟನೆ ಹಿನ್ನೆಲೆ: ಕಳೆದ ಡಿಸೆಂಬರ್ 28 ರಂದು ಏಕಾಏಕಿ ಕಾಣೆಯಾಗಿದ್ದ ಕಿನ್ನಿಗೋಳಿ ಬಳಿಯ ಕಿಲೆಂಜೂರು ಗ್ರಾಮದ ನಿವಾಸಿ ಉಮೇಶ್ ಶೆಟ್ಟಿಯ ಶವ ನಾಲ್ಕು ದಿನಗಳ ಅನಂತರ ನಿಡ್ಡೋಡಿ ಪರಿಸರದಲ್ಲಿ ಪತ್ತೆಯಾಗಿತ್ತು.[ಹೊಸ ವರ್ಷಾಚರಣೆ ತಕರಾರಿಗೆ ಜತೆಯಲ್ಲಿದ್ದವನದೇ ಕೊಲೆ]

ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಬಣ್ಣಿಸಲಾಗಿತ್ತು. ಮೂಲ್ಕಿ ಮತ್ತು ಮೂಡಬಿದಿರೆ ಪೊಲೀಸರು ಇದೊಂದು ವ್ಯವಸ್ಥಿತವಾದ ಕೊಲೆ ಎಂದೇ ತನಿಖೆಯನ್ನು ನಡೆಸಿ ಕೊನೆಗೂ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ನಾಲ್ಕು ಮಂದಿಯ ತಂಡವು ಸೇರಿಕೊಂಡು ಉಮೇಶ್ ಶೆಟ್ಟಿಯನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ಮೊದಲೇ ಹೇಳಿತ್ತು. ಹಣಕಾಸಿನ ವಿಷಯದಲ್ಲಿ ಈ ವ್ಯವಸ್ಥಿತ ಕೊಲೆ ನಡೆಸಿರುವುದು ಸಾಬೀತಾಗಿದೆ.
ಪಣಂಬೂರಿನಲ್ಲಿ ಟ್ರಾನ್ಸ್ ಪೋರ್ಟ್ ವ್ಯವಹಾರವನ್ನು ಪಾಲುದಾರಿಕೆಯಲ್ಲಿ ನಡೆಸುತ್ತಿದ್ದ ಉಮೇಶ್ ಶೆಟ್ಟಿ ಕೋರೆ ಉದ್ಯಮವನ್ನು ನಡೆಸುವುದಕ್ಕೆ ಪೂರ್ವ ತಯಾರಿ ನಡೆಸುತ್ತಿರುವಾಗಲೇ ಈತ ಕೊಲೆಯಾಗಿರುವುದು ಹಲವು ಸಂಶಯಕ್ಕೆ ಕಾರಣವಾಗಿತ್ತು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications