ಬಂಟ್ವಾಳ ಟೋಲ್ ಬಳಿ ಕಾರು-ಟ್ಯಾಂಕರ್ ನಡುವೆ ಅಪಘಾತ; ನಾಲ್ವರ ಸಾವು
ಮಂಗಳೂರು, ಜುಲೈ 19: ಬ್ರಹ್ಮರಕೋಟ್ಲು ಟೋಲ್ ಗೇಟ್ ಬಳಿ ಟವೇರಾ ಕಾರ್ ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ನಿನ್ನೆ ಅಪಘಾತವಾಗಿ ನಿಂತಿದ್ದ ಲಾರಿಗೆ ಮತ್ತೆ ಕಾರು ಡಿಕ್ಕಿ- ವ್ಯಕ್ತಿ ಸಾವು
ಬಂಟ್ವಾಳ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 75ರ ಬ್ರಹ್ಮರಕೋಟ್ಲು ಟೋಲ್ ಗೇಟ್ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ನಡುವೆ ಡಿಕ್ಕಿಯಾಗಿದೆ. ಕಾರಿನಲ್ಲಿ ಭಟ್ಕಳ ಮೂಲದ ಕುಟುಂಬ ಪ್ರಯಾಣಿಸುತ್ತಿತ್ತು.
ಈ ಅಪಘಾತದಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Comments
English summary
Four killed and three seriously injured in accident which happened in national highway 75 near Bantwal Brahmarakotlu tollgate. Car collided with tanker which was on the way from mangaluru.
Story first published: Friday, July 19, 2019, 14:19 [IST]