ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆ: ನಾಲ್ವರು ಶಂಕಿತ ಬಜರಂಗದಳ ಕಾರ್ಯಕರ್ತರ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಯುವತಿಯ ಜೊತೆಗಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಜರಂಗದಳದ ಕಾರ್ಯಕರ್ತರು ಎಂದು ಶಂಕಿಸಲಾದ ನಾಲ್ವರು ಯುವಕರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಬಂಧಿತರನ್ನು ಒಳಮೊಗ್ರು ಗ್ರಾಮದ ನಿವಾಸಿ ಎಸ್ ಪ್ರದೀಪ್ (19), ಕೆದಂಬಾಡಿಯ ದಿನೇಶ್ ಗೌಡ (25), ಗುತ್ತುಮನೆಯ ನಿಶಾಂತ್ ಕುಮಾರ್ (19) ಮತ್ತು ಆರ್ಯಾಪು ಗ್ರಾಮದ ಪ್ರಜ್ವಲ್ (23) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿಯಲ್ಲಿ ತಿಳಿಸಿದೆ. ದಿನೇಶ್ ಗೌಡ ಎಂಬಾತ ಆಟೋ ಚಾಲಕನಾಗಿದ್ದು, ಉಳಿದವರು ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಕಾನೂನುಬಾಹಿರ ಸಭೆ, ಗಲಭೆ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ (IPC) ಹಲವಾರು ಸೆಕ್ಷನ್ಗಳ ಅಡಿಯಲ್ಲಿ ಪೊಲೀಸರು ಅವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಮೇ 3ನೇ ತಾರೀಕಿನಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಮರೇಲ್ ಕಾಡುಮನೆ ನಿವಾಸಿ ಮೊಹಮ್ಮದ್ ಫರೀಷ್ (18) ತನ್ನ ಸಹಪಾಠಿ ಹಿಂದೂ ಯುವತಿಯೊಂದಿಗೆ ಪಾರ್ಲರ್ನಲ್ಲಿ ತಂಪು ಪಾನೀಯ ಕುಡಿಯುತ್ತಿದ್ದಾಗ ಜನರ ಗುಂಪೊಂದು ದಾಳಿ ಮಾಡಿದೆ ಎಂದು ಆರೋಪಿಸಲಾಗಿದೆ. ನಾಲ್ವರು ಯುವಕರು ಷರೀಫ್ ಮೇಲೆ ಭೀಕರವಾಗಿ ಹಲ್ಲೆ ಮಾಡಿದ್ದು, ಗಂಭೀರವಾದ ಗಾಯಗಳಾಗಿವೆ. ಸದ್ಯ ಫರೀಷ್ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಜರಂಗದಳ ನಿಷೇಧ ವಿವಾದ ಬೆನ್ನಲ್ಲೇ ಘಟನೆ
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ಸೇರಿದಂತೆ ಯಾವುದೇ ಧರ್ಮದ ಸಂಘಟನೆ ಸಂವಿಧಾನಕ್ಕೆ, ಸಮಾಜದ ಶಾಂತಿಗೆ ಭಂಗ ತಂದರೆ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳುವುದು ಮಾತ್ರವಲ್ಲದೆ, ಅಂತಹ ಸಂಘಟನೆಗಳನ್ನು ನಿಷೇಧಿಸುವುದಾಗಿ ಹೇಳಿದ್ದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.
ಚುನಾವಣೆ ಹೊಸ್ತಿಲಿನಲ್ಲೇ ಬಿಜೆಪಿ ಇದನ್ನು ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿದ್ದು, ಮತಗಳಿಕೆಯ ಲೆಕ್ಕಾಚಾರದಲ್ಲಿದೆ. ಬಜರಂಗದಳ ಕರ್ನಾಟಕ ರಾಜ್ಯ ಚುನಾವಣೆಯ ಪ್ರಮುಖ ದಾಳವಾಗುವ ಹೊಸ್ತಿಲಲ್ಲೇ ಈ ಘಟನೆ ನಡೆದಿದೆ. ಇಂತಹ ಘಟನೆಗಳ ಉದಾಹರಣೆ ನೀಡಿ ಕಾಂಗ್ರೆಸ್ ಕೂಡ ತನ್ನ ನಿಲುವನ್ನ ಸಮರ್ಥಿಸಿಕೊಳ್ಳುವ ಸಾಧ್ಯತೆ ಇದೆ.
ಮತದಾನದ ದಿನಾಂಕಕ್ಕೆ ಇನ್ನೂ 6 ದಿನಗಳು ಬಾಕಿ ಇದ್ದು ಬಜರಂಗದಳ ನಿಷೇಧ ವಿವಾದ ಇನ್ನಷ್ಟು ತಾರಕಕ್ಕೇರುವ ಸಾಧ್ಯತೆ ಇದೆ. ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ13ರಂದು ಫಲಿತಾಂಶ ಪ್ರಕಟವಾಗಲಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications