ಪೀಟರ್ ಸಾಲ್ಡಾನಾ ಮಂಗಳೂರು ಧರ್ಮಪ್ರಾಂತ್ಯದ ನೂತನ ಬಿಷಪ್
ಮಂಗಳೂರು ಜುಲೈ 4: ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ 14 ನೇ ಧರ್ಮಾದ್ಯಕ್ಷರಾಗಿ ಪೀಟರ್ ಪಾವ್ಲ್ ಸಾಲ್ಡಾನಾ ಅವರನ್ನು ನೇಮಕಗೊಳಿಸಲಾಗಿದೆ. ಈ ಕುರಿತು ವ್ಯಾಟಿಕನ್ ನಿಂದ ಕ್ರೈಸ್ತರ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರು ಆದೇಶ ಹೊರಡಿಸಿದ್ದಾರೆ.
ಪೋಪ್ ಅವರ ಆದೇಶವನ್ನು ಪ್ರಸ್ತುತ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಅಲೋಶಿಯಸ್ ಪಾವ್ಲ್ ಡಿಸೋಜಾ ಮಂಗಳೂರಿನಲ್ಲಿ ಮಂಗಳವಾರ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಡಾ. ಪೀಟರ್ ಪಾವ್ಲ್ ಸಾಲ್ಡಾನಾ ಅವರು ಮಂಗಳೂರು ಧರ್ಮಪ್ರಾಂತ್ಯದ 14ನೇ ನೂತನ ಧರ್ಮಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಮಂಗಳೂರು ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ 124 ಚರ್ಚ್ ಗಳಿದ್ದು, ಸುಮಾರು 2,48,860 ಕ್ಯಾಥೋಲಿಕ್ ಕ್ರೈಸ್ತರನ್ನು ಧರ್ಮಪ್ರಾಂತ್ಯ ಹೊಂದಿದೆ.

ನೂತನ ಮಂಗಳೂರು ಬಿಷಪ್ ಪೀಟರ್ ಪಾವ್ಲ್ ಸಾಲ್ಡಾನಾ ಮೂಲತಃ ಮಂಗಳೂರು ಹೊರವಲಯದ ಕಿರೆಂನವರು. ಅವರು ಪ್ರಸ್ತುತ ರೋಮ್ ನ ಫೊಂತಿಫಿಕಾಲ್ ಉರ್ಬನ್ ವಿಶ್ವವಿದ್ಯಾನಿಲಯದಲ್ಲಿ ದೇವತಾಶಾಸ್ತ್ರದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
1991ರ ಮೇ 06ರಂದು ಗುರು ದೀಕ್ಷೆ ಪಡೆದ ಪೀಟರ್ ಪಾವ್ಲ್ ಸಾಲ್ಡಾನಾ ಅವರು ನಂತರ ಉಡುಪಿ ಜಿಲ್ಲೆಯ ಮೂಡುಬೆಳ್ಳೆ ಹಾಗೂ ಮಂಗಳೂರಿನ ಮಿಲಾಗ್ರಿಸ್ ಹಾಗೂ ವಿಟ್ಲ ಚರ್ಚ್ಗಳಲ್ಲಿ ಧಾರ್ಮಿಕ ಗುರುಗಳಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಉನ್ನತ ವ್ಯಾಸಂಗಕ್ಕಾಗಿ ರೋಮ್ಗೆ ತೆರಳಿದ ಇವರು ಫೊಂತಿಫಿಕಾಲ್ ಉರ್ಬನ್ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದರು. ನಂತರ ಅಲ್ಲಿಯೇ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಇವರು 22 ವರ್ಷ ಸೇವೆ ಸಲ್ಲಿಸಿ ಎರಡು ವರ್ಷಗಳ ಮೊದಲು ನಿವೃತ್ತರಾಗಿದ್ದರು. ನೂತನ ಬಿಷಪ್ ಪೀಟರ್ ಪವ್ಲ್ ಸಾಲ್ಡಾನಾ ಅವರು ಅಧಿಕಾರ ಸ್ವೀಕರಿಸುವವರೆಗೆ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಬಿಷಪ್ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications