ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ
ಮಂಗಳೂರು, ನವೆಂಬರ್ 18: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಜ.15ರಿಂದ 45 ದಿನಗಳ ಕಾಲ ಧನ ಸಂಗ್ರಹ ಕಾರ್ಯ ನಡೆಯಲಿದ್ದು, ಈ ಜವಾಬ್ದಾರಿಯನ್ನು ವಿಶ್ವ ಹಿಂದೂ ಪರಿಷತ್ಗೆ ವಹಿಸಲಾಗಿದೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ತಿಳಿಸಿದರು.
ರಾಮ ಜನ್ಮಭೂಮಿ ಟ್ರಸ್ಟ್ ಸಭೆಯ ನಿರ್ಣಯಗಳ ಬಗ್ಗೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ರಾಮ ಮಂದಿರದಲ್ಲಿ ಎಲ್ಲ ಭಕ್ತರ ಪಾಲುದಾರಿಕೆ ಇರಬೇಕು. ಈ ನಿಟ್ಟಿನಲ್ಲಿ ಧನ ಸಂಗ್ರಹ ಕಾರ್ಯ ನಡೆಯಲಿದೆ. ಎಲ್ಲ ಭಕ್ತರು ತಮ್ಮ ಕೈಲಾದ ದೇಣಿಗೆ ನೀಡಬೇಕು ಎಂದು ವಿನಂತಿಸಿದರು.
ಇದೇ ಸಂದರ್ಭ ಅಯೋಧ್ಯೆ ರಾಮಮಂದಿರದ ಕುರಿತು ಮಾತನಾಡಿ, "ಭಾರತೀಯ ವಾಸ್ತುಶಾಸ್ತ್ರದ ಪ್ರಕಾರ ಮಂದಿರ ನಿರ್ವಣವಾಗಲಿದೆ. ವಾಸ್ತು ಶಾಸ್ತ್ರಜ್ಞರ ತಂಡ ಮಂದಿರ ನಿರ್ಮಾಣಕ್ಕೆ ಮಾರ್ಗದರ್ಶನ ನೀಡಲಿದೆ. ಕರಾವಳಿಯವರಾದ ಕುಡುಪು ಕೃಷ್ಣರಾಜ ತಂತ್ರಿ ಮತ್ತು ಗುಂಡಿಬೈಲು ಸುಬ್ರಹ್ಮಣ್ಯ ಭಟ್, ಕೇರಳದ ಓರ್ವರು ಮತ್ತು ಉತ್ತರ ಭಾರತದ ಇಬ್ಬರು ಈ ತಂಡದಲ್ಲಿದ್ದಾರೆ ಎಂದು ಹೇಳಿದರು.

ರಾಮ ಮಂದಿರ ಸಂಪೂರ್ಣ ಶಿಲಾಮಯವಾಗಿ ನಿರ್ಮಾಣವಾಗುವ ಕಾರಣ ಅಷ್ಟು ಭಾರ ಹೊರಲು ಅಲ್ಲಿನ ಭೂಮಿಯ ಧಾರಣಾ ಸಾಮರ್ಥ್ಯ ಎಷ್ಟಿದೆ ಎನ್ನುವ ಪರೀಕ್ಷೆ ನಡೆಯುತ್ತಿದೆ. ಅಲ್ಲಿರುವುದು ದೂಳು ತುಂಬಿದ ನೆಲ ಆಗಿರುವುದರಿಂದ ವೈಜ್ಞಾನಿಕವಾಗಿ ಪರೀಕ್ಷೆಗಳು ನಡೆಯುತ್ತಿವೆ. 200 ಅಡಿ ಆಳದವರೆಗೆ ಪರೀಕ್ಷೆ, ಪರಿಶೀಲನೆಯ ಬಳಿಕವೇ ತಳಪಾಯ ಹಾಕುವ ಕಾರ್ಯ ನಡೆಯಲಿದೆ ಎಂದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications