ಮಂಗಳೂರು ವಿಶ್ವವಿದ್ಯಾಲಯದಲ್ಲಿ ಗಣೇಶೋತ್ಸವ: ಖುಷಿ ಹಂಚಿಕೊಂಡ ವೇದವ್ಯಾಸ್ ಕಾಮತ್
ಮಂಗಳೂರು ಸೆಪ್ಟೆಂಬರ್ 18 : ಮಂಗಳೂರು ವಿಶ್ವ ವಿದ್ಯಾನಿಲಯದದಲ್ಲಿ ಹಿಂದಿನಂತೆ ಮಂಗಳಾ ಸಭಾಂಗಣದಲ್ಲಿಯೇ ಗಣೇಶೋತ್ಸವ ಆಚರಣೆಗೆ ಅನುಮತಿ ಸಿಕ್ಕಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಖುಷಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ವೇದವ್ಯಾಸ್ ಕಾಮತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯದ ಗಣೇಶೋತ್ಸವ ವಿಚಾರದಲ್ಲಿ ವಿನಾಕಾರಣ ಉಂಟಾಗಿದ್ದ ಗೊಂದಲಕ್ಕೆ ಸಂಬಂಧಿಸಿ ಈ ಹಿಂದಿನಂತೆ ಗಣೇಶೋತ್ಸವ ಮುಂದುವರಿಸಿಕೊಂಡು ಹೋಗುವಂತೆ ಬಂದಿರುವ ಆದೇಶವು ಇಷ್ಟು ದಿನ ವಿವಾದ ಸೃಷ್ಟಿಸಿ ಜನರ ದಿಕ್ಕು ತಪ್ಪಿಸಲು ಯತ್ನಿಸಿದವರಿಗೆ ಸ್ಪಷ್ಟ ಸಂದೇಶವಾಗಿದೆ.

ಯಾವುದೇ ಗೊಂದಲಕ್ಕೂ ಆಸ್ಪದ ನೀಡದೇ ಈ ಹಿಂದಿನಂತೆ ಗಣೇಶೋತ್ಸವ ನಡೆಸುವ ಬಗ್ಗೆ ಬಂದಿರುವ ಆದೇಶವು ಇಡೀ ಹಿಂದೂ ಸಮಾಜದ ಹೋರಾಟಕ್ಕೆ ಸಿಕ್ಕಿರುವ ಗೆಲುವಾಗಿದೆ. ಕಾಂಗ್ರೆಸ್ ಸರ್ಕಾರ ಸದಾ ಹಿಂದೂ ಧರ್ಮದ ಆಚರಣೆಗಳಿಗೆ ಮಾತ್ರ ನಿರ್ಬಂಧಗಳನ್ನು ಹೇರುವ ಮೂಲಕ ಗೊಂದಲ ಸೃಷ್ಟಿಸುವ ಕೆಲಸವನ್ನು ಹಿಂದೆಯೂ ಮಾಡಿತ್ತು, ಈಗಲೂ ಅದನ್ನೇ ಮುಂದುವರಿಸುತ್ತಿದೆ.
ಕೆಲವರು ವೇದವ್ಯಾಸ್ ಕಾಮತ್ ಅವರು ಹೊರಗಿನಿಂದ ಬಂದು ಈ ಸಮಸ್ಯೆಯನ್ನು ಸೃಷ್ಟಿಸಿದರು ಎಂದು ಹೇಳುತ್ತಿದ್ದಾರೆ, ಆದರೆ ಆರಂಭದಲ್ಲಿಯೇ ಈ ಹಿಂದಿನಂತೆ ಗಣೇಶೋತ್ಸವ ಮುಂದುವರಿಸಿಕೊಂಡು ಹೋಗಿದ್ದರೆ ನಾನೂ ಸೇರಿದಂತೆ ಯಾವ ಹೊರಗಿನ ವ್ಯಕ್ತಿಗಳೂ ಸಹ ಈ ವಿಷಯದಲ್ಲಿ ವಿಶ್ವವಿದ್ಯಾನಿಲಯಕ್ಕೆ ಬರುವ ಪ್ರಮೇಯವೇ ಇರುತ್ತಿರಲಿಲ್ಲ, ಇಷ್ಟೊಂದು ಚರ್ಚೆಗಳ ಅಗತ್ಯವೂ ಇರುತ್ತಿರಲಿಲ್ಲ.
ವಾಸ್ತವದಲ್ಲಿ, ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿದ್ದ ಗಣೇಶೋತ್ಸವವನ್ನೇ ನಿಲ್ಲಿಸುವ ಹುನ್ನಾರದ ಭಾಗವಾಗಿ ಇಲ್ಲಸಲ್ಲದ ಗೊಂದಲ ಸೃಷ್ಟಿಸಿ ಸರಕಾರಕ್ಕೆ ಪತ್ರ ಬರೆಯಲಾಗಿತ್ತು. ಆದರೆ ಹಿಂದೂ ಸಮಾಜದ ತೀವ್ರ ವಿರೋಧ ಹಾಗೂ ಪ್ರತಿಭಟನೆಗೆ ಮಣಿದು ಕೊನೆಗೂ ಇದೀಗ ಬಂದಿರುವ ಆದೇಶದಂತೆ ವಿಶ್ವವಿದ್ಯಾನಿಲಯದ ಕುಲಪತಿಗಳು ಈ ಹಿಂದಿನಂತೆ ಮಂಗಳಾ ಸಭಾಂಗಣದಲ್ಲಿಯೇ ಗಣೇಶೋತ್ಸವ ಆಚರಿಸುತ್ತೇವೆಂದು ನಿರ್ಣಯಿಸಿದ್ದಾರೆ.
ಈ ಮೂಲಕ ಹಿಂದೂ ಸಮಾಜದ ಶ್ರದ್ಧೆ-ಭಕ್ತಿ ನಂಬಿಕೆಯಂತಹ ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಉಂಟಾದಾಗ ಭಾರತೀಯ ಜನತಾ ಪಾರ್ಟಿ ಸದಾ ಹೋರಾಟಕ್ಕೆ ಸಿದ್ಧವಾಗಿರುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ ಸಂಬಂಧಪಟ್ಟವರಿಗೆ ನೀಡ ಬಯಸುತ್ತೇನೆ ಎಂದು ವೇದವ್ಯಾಸ್ ಕಾಮತ್ ತಮ್ಮ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ.
-
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು?












Click it and Unblock the Notifications