ನಿರ್ಮಾಣ ಯೋಗ್ಯ ಮರಳು ಪತ್ತೆ: ಭೂಗರ್ಭದ ಮೂಲಕ ಸರಬರಾಜು
ಮಂಗಳೂರು, ಅಕ್ಟೋಬರ್, 28: ಸಮುದ್ರ ತೀರದಿಂದ 10 ಕಿ.ಮೀ. ವ್ಯಾಪ್ತಿಯ ಹೊರಗೆ (ಸಮುದ್ರದೊಳಗೆ) ಕೇರಳ ವ್ಯಾಪ್ತಿಯ 2,797 ಚ.ಕಿ.ಮೀ. ಪ್ರದೇಶದಲ್ಲಿ ನಿರ್ಮಾಣ ಯೋಗ್ಯ ಮರಳನ್ನು ಈಗಾಗಲೇ ಪತ್ತೆ ಹಚ್ಚಲಾಗಿದೆ.
ಆಂಧ್ರಪ್ರದೇಶ, ತಮಿಳುನಾಡು, ಪಾಂಡಿಚೇರಿಯ 4,525 ಚ.ಕಿ.ಮೀ. ಭೂಗರ್ಭ ಪ್ರದೇಶದಲ್ಲಿ ನಿರ್ಮಾಣ ಯೋಗ್ಯ ಮತ್ತು ಕಾರ್ಬೊನೇಟ್ ಮರಳು ನಿಕ್ಷೇಪಗಳನ್ನು ಪತ್ತೆ ಹಚ್ಚಲಾಗಿದೆ.

ಮನೆ, ಕಟ್ಟಡ ನಿರ್ಮಾಣಗಳಿಗೆ ಬೇಕಾಗುವ ಮರಳು ಇನ್ನು ಮುಂದೆ ಸಾಗರ ಭೂಗರ್ಭದ ಒಳಗಿನಿಂದ ಸರಬರಾಜು ಆಗಲಿದೆ. ಎಂದು ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭೂ ಸರ್ವೇಕ್ಷಣಾ ಇಲಾಖೆಯ ಡೈರೆಕ್ಟರ್ ಜನರಲ್ ಎಂ.ರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹೊಸ ಯಂತ್ರ 30 ಮೀ. ಆಳದವರೆಗೂ ಕೊರೆಯುವ ಸಾಮರ್ಥ್ಯ ಹೊಂದಿರುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಜಾಗತಿಕ ಟೆಂಡರ್ ಪ್ರಕ್ರಿಯೆ ನಡೆಸಲಾಗುತ್ತಿದೆ. ನಂತರ ಲವಣ ನಿಕ್ಷೇಪಗಳ ನಿಖರ ಹಾಗೂ ಸಮಗ್ರ ಮಾಹಿತಿ ಪಡೆಯಲು ಸಾಧ್ಯವೆಂದು ಅವರು ವಿವರಿಸಿದರು.

ಸಾಗರ ಭೂಗರ್ಭದೊಳಗಿರುವ ಲವಣಗಳ (ಮರಳು ಸೇರಿದಂತೆ) ಬಳಕೆಯ ಕುರಿತು ಕೇಂದ್ರ ಸರ್ಕಾರ ಉತ್ಸುಕವಾಗಿದ್ದು, ಈ ಕುರಿತು ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನೀತಿ ನಿರೂಪಣೆಯ ಹಂತದಲ್ಲಿದೆ.
ಆದರೆ ಸದ್ಯಕ್ಕೆ ಭೂ ಸರ್ವೇಕ್ಷಣಾ ಇಲಾಖೆಗೆ ಸೇರಿದ ಯಂತ್ರಗಳು ಸಾಗರ ಮಟ್ಟದಿಂದ ಕೇವಲ 3 ಮೀ. ಆಳವನ್ನಷ್ಟೇ ಕೊರೆಯುವ ಸಾಮರ್ಥ್ಯ ಹೊಂದಿವೆ.
ಇದರಿಂದ ಭೂಮಿಯಡಿಯ ನಿಕ್ಷೇಪಗಳ ಸಮಗ್ರ ಮಾಹಿತಿ ದೊರೆಯುವುದಿಲ್ಲ. ಅದಕ್ಕಾಗಿ ಹೊಸ ತಂತ್ರಜ್ಞಾನದ ಮೂಲಕ ಕೊರೆಯುವ ಹಡಗು ಸಹಿತ ಯಂತ್ರವನ್ನು ಬಳಕೆ ಮಾಡಲು ಉದ್ದೇಶಿಸಲಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications