ನಿರ್ಮಾಣ ಯೋಗ್ಯ ಮರಳು ಪತ್ತೆ: ಭೂಗರ್ಭದ ಮೂಲಕ ಸರಬರಾಜು
ಮಂಗಳೂರು, ಅಕ್ಟೋಬರ್, 28: ಸಮುದ್ರ ತೀರದಿಂದ 10 ಕಿ.ಮೀ. ವ್ಯಾಪ್ತಿಯ ಹೊರಗೆ (ಸಮುದ್ರದೊಳಗೆ) ಕೇರಳ ವ್ಯಾಪ್ತಿಯ 2,797 ಚ.ಕಿ.ಮೀ. ಪ್ರದೇಶದಲ್ಲಿ ನಿರ್ಮಾಣ ಯೋಗ್ಯ ಮರಳನ್ನು ಈಗಾಗಲೇ ಪತ್ತೆ ಹಚ್ಚಲಾಗಿದೆ.
ಆಂಧ್ರಪ್ರದೇಶ, ತಮಿಳುನಾಡು, ಪಾಂಡಿಚೇರಿಯ 4,525 ಚ.ಕಿ.ಮೀ. ಭೂಗರ್ಭ ಪ್ರದೇಶದಲ್ಲಿ ನಿರ್ಮಾಣ ಯೋಗ್ಯ ಮತ್ತು ಕಾರ್ಬೊನೇಟ್ ಮರಳು ನಿಕ್ಷೇಪಗಳನ್ನು ಪತ್ತೆ ಹಚ್ಚಲಾಗಿದೆ.

ಮನೆ, ಕಟ್ಟಡ ನಿರ್ಮಾಣಗಳಿಗೆ ಬೇಕಾಗುವ ಮರಳು ಇನ್ನು ಮುಂದೆ ಸಾಗರ ಭೂಗರ್ಭದ ಒಳಗಿನಿಂದ ಸರಬರಾಜು ಆಗಲಿದೆ. ಎಂದು ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭೂ ಸರ್ವೇಕ್ಷಣಾ ಇಲಾಖೆಯ ಡೈರೆಕ್ಟರ್ ಜನರಲ್ ಎಂ.ರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಹೊಸ ಯಂತ್ರ 30 ಮೀ. ಆಳದವರೆಗೂ ಕೊರೆಯುವ ಸಾಮರ್ಥ್ಯ ಹೊಂದಿರುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಜಾಗತಿಕ ಟೆಂಡರ್ ಪ್ರಕ್ರಿಯೆ ನಡೆಸಲಾಗುತ್ತಿದೆ. ನಂತರ ಲವಣ ನಿಕ್ಷೇಪಗಳ ನಿಖರ ಹಾಗೂ ಸಮಗ್ರ ಮಾಹಿತಿ ಪಡೆಯಲು ಸಾಧ್ಯವೆಂದು ಅವರು ವಿವರಿಸಿದರು.

ಸಾಗರ ಭೂಗರ್ಭದೊಳಗಿರುವ ಲವಣಗಳ (ಮರಳು ಸೇರಿದಂತೆ) ಬಳಕೆಯ ಕುರಿತು ಕೇಂದ್ರ ಸರ್ಕಾರ ಉತ್ಸುಕವಾಗಿದ್ದು, ಈ ಕುರಿತು ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನೀತಿ ನಿರೂಪಣೆಯ ಹಂತದಲ್ಲಿದೆ.
ಆದರೆ ಸದ್ಯಕ್ಕೆ ಭೂ ಸರ್ವೇಕ್ಷಣಾ ಇಲಾಖೆಗೆ ಸೇರಿದ ಯಂತ್ರಗಳು ಸಾಗರ ಮಟ್ಟದಿಂದ ಕೇವಲ 3 ಮೀ. ಆಳವನ್ನಷ್ಟೇ ಕೊರೆಯುವ ಸಾಮರ್ಥ್ಯ ಹೊಂದಿವೆ.
ಇದರಿಂದ ಭೂಮಿಯಡಿಯ ನಿಕ್ಷೇಪಗಳ ಸಮಗ್ರ ಮಾಹಿತಿ ದೊರೆಯುವುದಿಲ್ಲ. ಅದಕ್ಕಾಗಿ ಹೊಸ ತಂತ್ರಜ್ಞಾನದ ಮೂಲಕ ಕೊರೆಯುವ ಹಡಗು ಸಹಿತ ಯಂತ್ರವನ್ನು ಬಳಕೆ ಮಾಡಲು ಉದ್ದೇಶಿಸಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications