ಜನ ಸಂಜೀವಿನಿಯಲ್ಲಿ ಶೇ.50ರಷ್ಟು ರಿಯಾಯಿತಿಯಲ್ಲಿ ಔಷಧಿಗಳು ಲಭ್ಯ
ಮಂಗಳೂರು, ಮಾರ್ಚ್. 06 : ಇಲ್ಲಿನ ವೆನ್ಲಾಕ್ ಆಸ್ಪತ್ರೆ ಹಾಗೂ ಲೇಡಿಗೋಷನ್ ಆಸ್ಪತ್ರೆಯ ಬಳಿ ಇರುವ ''ಜನ ಸಂಜೀವಿನಿ'' ಜನೆರಿಕ್ ಔಷಧಿ ಮಳಿಗೆಯಲ್ಲಿ ರಿಯಾಯಿತಿ ದರದಲ್ಲಿ ಎಲ್ಲ ಔಷಧಿಗಳು ಲಭ್ಯವಿದೆ. ವಿಪರ್ಯಾಸವೆಂದರೆ ಈ ಬಗ್ಗೆ ಬಹುತೇಕ ಜನರಿಗೆ ತಿಳಿದಿಲ್ಲ
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಈ ಔಷಧಿ ಮಳಿಗೆಗಳಲ್ಲಿ ಎಲ್ಲಾ ಔಷಧಗಳು ಶೇ.50ರಷ್ಟು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ.
ಇದರಿಂದ ಜನರು ಜನ ತಮಗೆ ಅವಶ್ಯವಾದ ಔಷಧಿಗಳನ್ನು ರಿಯಾಯಿತಿ ದರದಲ್ಲಿ ಪಡೆದುಕೊಂಡು ಹೆಚ್ಚಿನ ಹಣ ಉಳಿತಾಯ ಮಾಡಹುದು.
ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆರಂಭಗೊಂಡಿರುವ ಜನ ಸಂಜೀವಿನಿ -ಜೆನರಿಕ್ ಸೆಂಟರ್ ಎಂಬ ಔಷಧಿ ಮಳಿಗೆಯಲ್ಲಿ ಅತ್ಯಂತ ಕಡಿಮೆ ಬೆಲೆಗೆ ಔಷಧಿಗಳು ದೊರೆಯಲಿವೆ. ಇದರಿಂದ ಪ್ರಜ್ಞಾವಂತ ಜನರು ಈ ಬಗ್ಗೆ ಜನಸಾಮಾನ್ಯರಿಗೆ ಹರಿವು ಮೂಡಿಸುವ ಕಾರ್ಯ ಆಗಬೇಕಿದೆ.

ಸರಕಾರದ ''ಜನ ಸಂಜೀವಿನಿ''
ಕೇಂದ್ರ ಸರ್ಕಾರದ 'ಜನೌಷಧ' ಕಾರ್ಯಕ್ರಮಕ್ಕೆ ಪರ್ಯಾಯವಾಗಿ ರಾಜ್ಯ ಆರೋಗ್ಯ ಇಲಾಖೆ 'ಜನ ಸಂಜೀವಿನಿ' ಯೋಜನೆ ಜಾರಿಗೆ ತಂದಿದೆ. ಈ ಜನ ಸಂಜೀವಿನಿ ಮಳಿಗೆಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳೂ ಔಷಧ ಖರೀದಿಸಬಹುದು. ಔಷಧ ನಿಯಂತ್ರಣ ಇಲಾಖೆಯು ಈ ಮಳಿಗೆಗಳ ಮೇಲೆ ಹಿಡಿತ ಹೊಂದಿರುತ್ತದೆ.

ಜನ ಸಂಜೀವಿನಿಗೆ ಸರಕಾರ ಔಷಧಿಗಳ ಪೂರೈಕೆ
ಖಾಸಗಿ ಮೆಡಿಕಲ್ ಗಳಲ್ಲಿ ದೊರೆಯುವ ಔಷಧಿಗಳೇ ''ಜನ ಸಂಜೀವಿನಿ'' ರಿಯಾಯಿತಿ ದರಗಳಲ್ಲಿ ದೊರೆಯುತ್ತವೆ. ಮಧ್ಯವರ್ತಿಗಳಿಲ್ಲದೆ ಸರಕಾರ ನೇರವಾಗಿ ಔಷಧಿಗಳನ್ನು ಖರೀದಿಸಿ ಎಲ್ಲಾ ಜನರಿಕ್ ಕೇಂದ್ರಗಳಿಗೆ ಪೂರೈಸುತ್ತಿದೆ.

ಶೇ.50ರಷ್ಟು ರಿಯಾಯಿತಿ ದರದಲ್ಲಿ
ಈ ಔಷಧಿ ಮಳಿಗೆಗಳಲ್ಲಿ ಎಲ್ಲಾ ಔಷಧಗಳು ಶೇ.50ರಷ್ಟು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ಖಾಸಗಿ ಮೆಡಿಕಲ್ ಅಂಗಡಿಗಳಲ್ಲಿ ದೊರೆಯುವ 300-400 ಬೆಳೆಯ ಔಷಧಿಗಳು ''ಜನ ಸಂಜೀವಿನಿ'' ಜೆನೆರಿಕ್ ಔಷಧ ಕೇವಲ 100 ರುಗೆ ಸಿಗಲಿವೆ. ಡಯಾಬಿಟೀಸ್ ಗೆ ಸಂಬಂಧಿಸಿದ 47 ರು ಮಾತ್ರೆ ಕೇವಲ 4 ರುಗೆ ನೀಡಲಾಗುತ್ತಿದೆ. ಪ್ರಝೊಪ್ರೆಸ್ ಎಕ್ಸೆಲ್ 5 ಎಂಬ 148 ರು.ಬೆಲೆಯ ಔಷಧಿ ಕೇವಲ 28 ರುಗಳಲ್ಲಿ ಈ ''ಜನ ಸಂಜೀವಿನಿ'' ಜೆನೆರಿಕ್ ಔಷಧ ಲಭ್ಯವಿದೆ.

2016 ರ ಡಿಸೆಂಬರ್ 9ರಂದು ಜಾರಿಗೆ
2016 ರ ಡಿಸೆಂಬರ್ 9ರಂದು ಜೆನೆರಿಕ್ ಔಷಧ ಮಳಿಗೆಯನ್ನು ಯು.ಟಿ.ಖಾದರ್ ಅವರು ಆರೋಗ್ಯ ಸಚಿವರಾಗಿದ್ದ ವೇಳೆ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ನಂತರ ಆರೋಗ್ಯ ಸಚಿವರಾಗಿ ನೇಮಕಗೊಂಡಿದ್ದ ರಮೇಶ್ ಕುಮಾರ್ ಅವರು ಈ ಯೋಜನೆಯನ್ನು ಉದ್ಘಾಟನೆ ಮಾಡಿದ್ದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications