ಅಕ್ಟೋಬರ್ ನಿಂದ ಶಿರಾಡಿ ಘಾಟ್ ಸಂಚಾರ ಬಂದ್

ಮಂಗಳೂರು, ಜು.15 : ಶಿರಾಡಿ ಘಾಟ್ ರಸ್ತೆ ದುರಸ್ತಿ ಕಾಮಗಾರಿ ಅಕ್ಟೋಬರ್ ನಿಂದ ಆರಂಭವಾಗಲಿದ್ದು ಸುಮಾರು ಏಳು ತಿಂಗಳ ಕಾಲ ನಡೆಯಲಿದೆ. ಈ ಸಮಯದಲ್ಲಿ ಈ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಳಿಸಲಾಗುವುದು ಎಂದು ಹೇಳಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಪರ್ಯಾಯ ಮಾರ್ಗಗಳನ್ನು ಗುರುತಿಸಲು ಸೂಚನೆ ನೀಡಿದ್ದಾರೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಎ.ಬಿ.ಇಬ್ರಾಹಿಂ ಬೆಂಗಳೂರು-ಮಂಗಳೂರು ಸಂಪರ್ಕಿಸುವ ಪ್ರಮುಖ ಮಾರ್ಗವಾದ ಶಿರಾಡಿ ಘಾಟ್ ರಸ್ತೆ ದುರಸ್ತಿ ಕಾಮಗಾರಿ ಆರಂಭವಾದರೆ ಈ ಮಾರ್ಗದಲ್ಲಿ ಸಂಚಾರ ನಿಷೇಧಿಸಬೇಕಾಗುತ್ತದೆ ಎಂದು ತಿಳಿಸಿದರು.

Shiradi Ghat

ಕಾಮಗಾರಿ ನಡೆಯುವ ವೇಳೆ ಶಿರಾಡಿ ಘಾಟ್ ನಲ್ಲಿ ಸಂಚರಿಸುವ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗದಂತೆ ಈಗಲೇ ಕಾರ್ಯ ಯೋಜನೆಗಳನ್ನು ರೂಪಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. [ಅಪಾಯಕಾರಿ ಶಿರಾಡಿ ಘಾಟ್ ರಸ್ತೆಗೆ ಕಾಯಕಲ್ಪ]

ಮೊದಲ ಹಂತದಲ್ಲಿ ಸುಮಾರು 23 ಕಿ.ಮೀ. ಕಾಮಗಾರಿ ನಡೆಸಲಾಗುತ್ತದೆ. ಈ ಕಾಮಗಾರಿ ನಡೆಯುವ ಸುಮಾರು ಏಳು ತಿಂಗಳ ಅವಧಿಯಲ್ಲಿ ಮಡಿಕೇರಿ ಹಾಗೂ ಚಾರ್ಮಾಡಿ ಮೂಲಕ ಬೆಂಗಳೂರಿಗೆ ಪರ್ಯಾಯ ಮಾರ್ಗವನ್ನು ಗುರುತಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಚಾರ್ಮಾಡಿ ರಸ್ತೆಯಲ್ಲಿ ಈಗಾಗಲೇ ವಾಹನಗಳ ದಟ್ಟಣೆ ಹೆಚ್ಚಾಗಿದ್ದು ಈ ಮಾರ್ಗದಲ್ಲಿ ಸಂಚಾರ ಸಾಧ್ಯವಿಲ್ಲ ಎನ್ನುವುದಾದದರೆ, ಇತರ ಪರ್ಯಾಯ ಮಾರ್ಗಗಳನ್ನು ಗುರುತಿಸುವ ಬಗ್ಗೆ ಹೆದ್ದಾರಿ ಇಲಾಖೆಯವರು ಲೋಕೋಪಯೋಗಿ ಇಲಾಖೆಯ ಜತೆ ಸಮಾಲೋಚನೆ ನಡೆಸಿ ಮಾರ್ಗ ಗುರುತಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಎರಡು ಕಾಮಗಾರಿ : ಶಿರಾಡಿ ಘಾಟ್ ನಲ್ಲಿ ಎರಡು ಹಂತದ ಕಾಮಗಾರಿಗಳನ್ನು ನಡೆಸಲು ಸರ್ಕಾರ ತೀರ್ಮಾನಿಸಿದೆ. ಕಾಂಕ್ರೀಟ್ ರಸ್ತೆ ನಿರ್ಮಾಣ ಮತ್ತು ರಸ್ತೆಯನ್ನು ಬಲಪಡಿಸುವುದು ಸೇರಿದಂತೆ ಎರಡು ಕಾಮಗಾರಿ ಈ ಮಾರ್ಗದಲ್ಲಿ ನಡೆಯಲಿದ್ದು, ಕಾಮಗಾರಿ ಪೂರ್ಣಗೊಳ್ಳುವ ತನಕ ಶಿರಾಡಿ ಘಾಟ್ ನಲ್ಲಿ ಸಂಚಾರ ನಿಷೇಧಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+