ಫೋನ್ನಲ್ಲಿ ಡಿ.ಕೆ. ಶಿವಕುಮಾರ್ ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲು ಶಿಕ್ಷೆ: ಏನಿದು ಪ್ರಕರಣ?
ಮಂಗಳೂರು, ಏಪ್ರಿಲ್ 18: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು, ಆರೋಪಿಗೆ ಜೈಲು ಶಿಕ್ಷೆಯಾಗಿದೆ.
ಈ ಹಿಂದೆ ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ಗೆ ನಿಂದಿಸಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದ ನ್ಯಾಯಾಧೀಶ ಸೋಮಶೇಖರ್ ಅವರು ಮಹತ್ವದ ತೀರ್ಪು ನೀಡಿದ್ದಾರೆ.
ನಾಲ್ಕು ಅಪರಾಧಗಳಲ್ಲಿಯೂ 2 ವರ್ಷ ಜೈಲು ಶಿಕ್ಷೆಯಾಗಿದ್ದು. ಒಂದು ಪ್ರಕರಣದಲ್ಲಿ 5 ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ?
2016ರಲ್ಲಿ ಡಿ.ಕೆ. ಶಿವಕುಮಾರ್ ಇಂಧನ ಸಚಿವರಾಗಿದ್ದ ವೇಳೆ ನಡೆದಿದ್ದ ಪ್ರಕರಣ ಇದಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ ಎಂಬಾತ 2016ರ ಫೆಬ್ರವರಿ 28ರಂದು ಅಂದಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ಗೆ ಕರೆ ಮಾಡಿದ್ದರು. ವಿದ್ಯುತ್ ಸಮಸ್ಯೆ ಹೇಳಿಕೊಳ್ಳಲು ಕರೆ ಮಾಡಿದ್ದ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.
ಈ ಹಿನ್ನೆಲೆಯಲ್ಲಿ ಅಂದಿನ ಮೆಸ್ಕಾಂ ಎಂಡಿ ಮೂಲಕ ಗಿರಿಧರ್ ರೈ ವಿರುದ್ಧ ಡಿ.ಕೆ. ಶಿವಕುಮಾರ್ ಪೊಲೀಸ್ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಡಿದ್ದ ಪೊಲೀಸರು ರಾತ್ರೋರಾತ್ರಿ ಗಿರಿಧರ್ ರೈನನ್ನು ಬಂಧಿಸಿದ್ದರು. ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಮಾನ ಹಾನಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ನಾಲ್ಕು ಅಪರಾಧಗಳಡಿ ಪ್ರಕರಣ ದಾಖಲಿಸಲಾಗಿತ್ತು.
ಈ ಪ್ರಕರಣದ ವಿಚಾರಣೆಗೆ ಸುಳ್ಯ ಕೋರ್ಟ್ ಸಾಕ್ಷಿ ಹೇಳಲು ಡಿ.ಕೆ. ಶಿವಕುಮಾರ್ ಅವರಿಗೆ ಮೂರು ಬಾರಿ ಸಮಸ್ಸ್, ಒಂದು ಬಾರಿ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು 2021ರ ಸೆ.29ರಂದು ಸುಳ್ಯ ಖುದ್ದಾಗಿ ಕೋರ್ಟ್ಗೆ ಹಾಜರಾಗಿ, ವಿಚಾರಣೆ ಎದುರಿಸಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications