Get Updates
Get notified of breaking news, exclusive insights, and must-see stories!

ಫೋನ್‌ನಲ್ಲಿ ಡಿ.ಕೆ. ಶಿವಕುಮಾರ್‌ ನಿಂದಿಸಿದ್ದ ವ್ಯಕ್ತಿಗೆ 2 ವರ್ಷ ಜೈಲು ಶಿಕ್ಷೆ: ಏನಿದು ಪ್ರಕರಣ?

ಮಂಗಳೂರು, ಏಪ್ರಿಲ್ 18: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ನಿಂದಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು, ಆರೋಪಿಗೆ ಜೈಲು ಶಿಕ್ಷೆಯಾಗಿದೆ.

ಈ ಹಿಂದೆ ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್​​ಗೆ ನಿಂದಿಸಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದ ನ್ಯಾಯಾಧೀಶ​ ಸೋಮಶೇಖರ್ ಅವರು ಮಹತ್ವದ ತೀರ್ಪು ನೀಡಿದ್ದಾರೆ.

ನಾಲ್ಕು ಅಪರಾಧಗಳಲ್ಲಿಯೂ 2 ವರ್ಷ ಜೈಲು ಶಿಕ್ಷೆಯಾಗಿದ್ದು. ಒಂದು ಪ್ರಕರಣದಲ್ಲಿ 5 ಸಾವಿರ ದಂಡ, ದಂಡ ತೆರಲು ತಪ್ಪಿದ್ದಲ್ಲಿ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ.

Giridhar Rai Who Has Abused To DK Shivakumar Sent To 2 Years Jail By Sulya Court

ಪ್ರಕರಣದ ಹಿನ್ನೆಲೆ?
2016ರಲ್ಲಿ ಡಿ.ಕೆ. ಶಿವಕುಮಾರ್ ಇಂಧನ ಸಚಿವರಾಗಿದ್ದ ವೇಳೆ ನಡೆದಿದ್ದ ಪ್ರಕರಣ ಇದಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ ಎಂಬಾತ 2016ರ ಫೆಬ್ರವರಿ 28ರಂದು ಅಂದಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್​​ಗೆ ಕರೆ ಮಾಡಿದ್ದರು. ವಿದ್ಯುತ್ ಸಮಸ್ಯೆ ಹೇಳಿಕೊಳ್ಳಲು ಕರೆ ಮಾಡಿದ್ದ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು.

ಈ ಹಿನ್ನೆಲೆಯಲ್ಲಿ ಅಂದಿನ ಮೆಸ್ಕಾಂ ಎಂಡಿ ಮೂಲಕ ಗಿರಿಧರ್ ರೈ ವಿರುದ್ಧ ಡಿ.ಕೆ. ಶಿವಕುಮಾರ್ ಪೊಲೀಸ್ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಡಿದ್ದ ಪೊಲೀಸರು ರಾತ್ರೋರಾತ್ರಿ ಗಿರಿಧರ್ ರೈನನ್ನು ಬಂಧಿಸಿದ್ದರು. ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಮಾನ ಹಾನಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ನಾಲ್ಕು ಅಪರಾಧಗಳಡಿ ಪ್ರಕರಣ ದಾಖಲಿಸಲಾಗಿತ್ತು.

ಈ ಪ್ರಕರಣದ ವಿಚಾರಣೆಗೆ ಸುಳ್ಯ ಕೋರ್ಟ್‌ ಸಾಕ್ಷಿ ಹೇಳಲು ಡಿ.ಕೆ. ಶಿವಕುಮಾರ್‌ ಅವರಿಗೆ ಮೂರು ಬಾರಿ ಸಮಸ್ಸ್, ಒಂದು ಬಾರಿ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು 2021ರ ಸೆ.29ರಂದು ಸುಳ್ಯ ಖುದ್ದಾಗಿ ಕೋರ್ಟ್‌ಗೆ ಹಾಜರಾಗಿ, ವಿಚಾರಣೆ ಎದುರಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+