ಕಾಲೇಜು ಯುವತಿಯರ ಡ್ರೆಸ್ ನಲ್ಲಿ ಭಿಕ್ಷಾಟನೆ : ದುಡ್ಡು ಕೊಡೊ ಮುನ್ನ ಎಚ್ಚರ!
Recommended Video

ಮಂಗಳೂರು, ಆಗಸ್ಟ್.03: ನೀಟಾಗಿ ಕಾಲೇಜು ಹುಡುಗಿಯರ ತರ ಡ್ರೆಸ್ ಮಾಡಿಕೊಂಡು ಭಿಕ್ಷೆ ಬೇಡುತ್ತಿರುವ ಹುಡುಗಿಯರ ತಂಡವೊಂದು ಮಂಗಳೂರಿನಲ್ಲಿ ಸಕ್ರಿಯವಾಗಿದ್ದು, ಸಾರ್ವಜನಿಕರು ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂಬ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಚ್ಚುಕಟ್ಟಾಗಿ ಬಟ್ಟೆ ಧರಿಸಿ, ಟೈ ಕಟ್ಟಿ ಕೂದಲಿಗೆ ಬಣ್ಣ ಹಚ್ಚಿ ಹಣ ಕೇಳಲು ಬರುವ ಈ ಹುಡುಗಿಯರು ತಾವು ರಾಜಸ್ಥಾನದ ರಾಣಿಪುರದವರು ಎಂದು ಹೇಳಿಕೊಂಡ ತಂಡ ಭಿಕ್ಷಾಟನೆಯಲ್ಲಿ ಸಕ್ರಿಯವಾಗಿದೆ.
ತಮ್ಮ ಊರಿನಲ್ಲಿ ನೆರೆ ಬಂದಿದ್ದು, ಆಸ್ತಿ ಪಾಸ್ತಿ ಕಳೆದುಕೊಂಡಿದ್ದೇವೆ , ಆಹಾರ, ಬಟ್ಟೆ ಬರೆ ಇಲ್ಲದೆ ಸಂತ್ರಸ್ಥರಾಗಿದ್ದು , ಹಣ ಸಹಾಯ ಮಾಡಿ ಎಂದು ಝೆರಾಕ್ಸ್ ಪ್ರತಿಯೊಂದನ್ನು ಹಿಡಿದು ಮಂಗಳೂರು ನಗರದೆಲ್ಲಡೆ ತಿರುಗಾಡುತ್ತಿದ್ದಾರೆ.

ಹೆಚ್ಚಾಗಿ ಕಾಲೇಜು ಯುವಕ ಯುವತಿಯರು ಇರುವ ಸ್ಥಳಗಳಲ್ಲಿ ಕಾಣ ಸಿಗುವ ಇವರು ನೆರೆ ಸಂತ್ರಸ್ಥರು ಎಂದು ಭಿಕ್ಷಾಟನೆ ಮಾಡುತ್ತಾರೆ.
ಇದರ ಬಗ್ಗೆ ವಿಡಿಯೋ ಮಾಡಿ , ನಗರದ ಸೌರಜ್ ಎನ್ನುವವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ವಿಡಿಯೋ ಪ್ರಕಟಿಸಿ ಅದರ ಬಗ್ಗೆ ಮಾಹಿತಿ ನೀಡಿದ್ದಾರೆ. ಸೌರಜ್ ಅವರು ಹೇಳುವ ಪ್ರಕಾರ ಸುಮಾರು 8 ತಿಂಗಳಿನಿಂದ ಇಂತಹವರು ನಗರದಲ್ಲಿ ತಿರುಗಾಡುತ್ತಿದ್ದಾರೆ.
ವ್ಯಕ್ತಿಯೋರ್ವ 100 ರೂಪಾಯಿ ನೀಡಿದರೆ, ತಮ್ಮ ಬಳಿ ಇರುವ ಜೆರಾಕ್ಸ್ ಪ್ರತಿಯಲ್ಲಿ ಅದನ್ನು 1 ಸಾವಿರ ಎಂದು ಬರೆದುಕೊಳ್ಳುತ್ತಾರೆ. ಅದೇ ಪ್ರತಿಯನ್ನು ಇನ್ನೊಬ್ಬ ವ್ಯಕ್ತಿಗೆ ತೋರಿಸಿ ಇನ್ನೂ ಹೆಚ್ಚಿನ ಹಣ ಪಡೆಯಬಹುದು ಎನ್ನುವುದು ಈ ತಂಡದ ಲೆಕ್ಕಾಚಾರ.

ಈ ಹುಡುಗಿಯರ ಬಳಿ ಯಾವುದೇ ಪೊಲೀಸ್ ರಿಂದ ಪಡೆದ ಅನುಮತಿ ಪತ್ರವಾಗಲೀ, ಗುರುತಿನ ಚೀಟಿಯಾಗಲೀ ಇಲ್ಲ. ನೆರೆ ಸಂತ್ರಸ್ಥರು ಎಂದು ಹೇಳಿ ಭಿಕ್ಷಾಟನೆ ಮಾಡುತ್ತಿದ್ದ ಈ ಯುವತಿಯರ ವಿರುದ್ದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಎಚ್ಚರಿಕೆ ನೀಡಿ ಬಿಡಲಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications