ಪುಟ್ಟ ಮಗಳ ಇಚ್ಛೆಯಂತೆ ಶೌಚಾಲಯ ನಿರ್ಮಿಸಲು ಚಿನ್ನವನ್ನೇ ಅಡವಿಟ್ಟ ಕುಟುಂಬ
ಮಂಗಳೂರು, ಜನವರಿ 17: ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯದ ಅನಿವಾರ್ಯತೆಯ ಕುರಿತು ಜಾಗೃತಿ ಮೂಡಲಾರಂಭಿಸಿದೆ. ಇದೀಗ ಶೌಚಾಲಯ ನಿರ್ಮಾಣಕ್ಕಾಗಿ ಹೆತ್ತವರಲ್ಲಿ ಹಠ ಹಿಡಿದು ಯಶಸ್ವಿಯಾದ ಪುಟ್ಟ ಬಾಲಕಿಯ ಕಥೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಭಾರೀ ಚರ್ಚೆಯಾಗುತ್ತಿದೆ.
ಮನೆಯಲ್ಲಿ ಶೌಚಾಲಯವಿಲ್ಲ ಎಂಬ ಕೊರಗಿನಿಂದ ಹೆತ್ತವರನ್ನು ಕಾಡಿಬೇಡಿ ಮನವೊಲಿಸಿ ಕೊನೆಗೂ ಶೌಚಾಲಯ ಕಟ್ಟಿಸಿಕೊಳ್ಳುವಲ್ಲಿ ಶಿರ್ತಾಡಿ ಗ್ರಾಮದ ಮೂಡುಕೊಣಾಜೆಯ 8ರ ಹರೆಯದ ಕಾವ್ಯ ಯಶಸ್ವಿಯಾಗಿದ್ದಾಳೆ. ಕುದ್ರೆಲ್ ನಿವಾಸಿ ಶೀನ-ಲೀಲಾ ದಂಪತಿಯ ಇಬ್ಬರು ಮಕ್ಕಳಲ್ಲಿ ಕಾವ್ಯಾ ಕಿರಿಯವಳು.
ಪುಟ್ಟ ಬಾಲಕಿ ಕಾವ್ಯ ಸ್ಥಳೀಯ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದಾಳೆ. ಶಾಲೆಯಲ್ಲಿ ಆರೋಗ್ಯ ಕಾರ್ಯಕರ್ತೆಯ ಸ್ವಚ್ಛತೆಯ ಪಾಠದಿಂದ ಪ್ರೇರಿತಳಾದ ಕಾವ್ಯಾ ಶೌಚಾಲಯ ನಿರ್ಮಿಸಲು ಹೆತ್ತವರನ್ನು ಆಗ್ರಹಿಸಿದ್ದಳು.

ಈ ಹಿಂದೆ ಸೋಗೆ ಮಾಡಿನ ಸೂರಿನ ಮನೆಯನ್ನು ದುರಸ್ತಿ ಮಾಡಲು ಸುಮಾರು 1.5 ಲಕ್ಷ ರೂಪಾಯಿ ಸಾಲಮಾಡಿದ್ದ ಈ ಬಡ ಕುಟುಂಬಕ್ಕೆ ಮತ್ತೆ ಶೌಚಾಲಯ ನಿರ್ಮಿಸಲು ಸಾಧ್ಯವಿರಲಿಲ್ಲ. ಮಗಳ ಆಸೆಯಂತೆ ಮನೆಗೆ ಶೌಚಾಲಯ ನಿರ್ಮಿಸಲು ಹೆತ್ತವರಲ್ಲಿ ಚಿಕ್ಕಾಸು ಇರಲಿಲ್ಲ. ಜೊತೆಗೆ ಮನೆ ಜಾಗದ ಹಕ್ಕುಪತ್ರ ಸಮಸ್ಯೆ ಬೇರೆ.
ಕೊನೆಗೆ ಪಂಚಾಯತ್ ನಲ್ಲಿ ಶೌಚಾಲಯ ನಿರ್ಮಿಸಲು ವಿನಂತಿ ಸಲ್ಲಿಸಿದಾಗ ಅದು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಮಗಳ ಒತ್ತಾಯಕ್ಕೆ ಮನಸೋತ ಹೆತ್ತವರು ಮನೆಯಲ್ಲಿ ಚಿನ್ನ ಅಡವಿಟ್ಟು 30 ಸಾವಿರ ರೂಪಾಯಿ ವೆಚ್ಚದಲ್ಲಿ ಶೌಚಾಲಯ, ಸ್ನಾನದ ಕೊಠಡಿ ಕಟ್ಟಿಸಿದ್ದಾರೆ. ಶೌಚಾಲಯಕ್ಕಾಗಿ ಒತ್ತಾಯಿಸಿ ಯಶಸ್ವಿಯಾದ ಕಾವ್ಯಾಳ ಪ್ರಸಂಗ ಈಗ ಪ್ರಶಂಸೆಗೆ ಪಾತ್ರವಾಗಿದೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications