ಪುಟ್ಟ ಮಗಳ ಇಚ್ಛೆಯಂತೆ ಶೌಚಾಲಯ ನಿರ್ಮಿಸಲು ಚಿನ್ನವನ್ನೇ ಅಡವಿಟ್ಟ ಕುಟುಂಬ
ಮಂಗಳೂರು, ಜನವರಿ 17: ಗ್ರಾಮೀಣ ಪ್ರದೇಶಗಳಲ್ಲಿ ಶೌಚಾಲಯದ ಅನಿವಾರ್ಯತೆಯ ಕುರಿತು ಜಾಗೃತಿ ಮೂಡಲಾರಂಭಿಸಿದೆ. ಇದೀಗ ಶೌಚಾಲಯ ನಿರ್ಮಾಣಕ್ಕಾಗಿ ಹೆತ್ತವರಲ್ಲಿ ಹಠ ಹಿಡಿದು ಯಶಸ್ವಿಯಾದ ಪುಟ್ಟ ಬಾಲಕಿಯ ಕಥೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಭಾರೀ ಚರ್ಚೆಯಾಗುತ್ತಿದೆ.
ಮನೆಯಲ್ಲಿ ಶೌಚಾಲಯವಿಲ್ಲ ಎಂಬ ಕೊರಗಿನಿಂದ ಹೆತ್ತವರನ್ನು ಕಾಡಿಬೇಡಿ ಮನವೊಲಿಸಿ ಕೊನೆಗೂ ಶೌಚಾಲಯ ಕಟ್ಟಿಸಿಕೊಳ್ಳುವಲ್ಲಿ ಶಿರ್ತಾಡಿ ಗ್ರಾಮದ ಮೂಡುಕೊಣಾಜೆಯ 8ರ ಹರೆಯದ ಕಾವ್ಯ ಯಶಸ್ವಿಯಾಗಿದ್ದಾಳೆ. ಕುದ್ರೆಲ್ ನಿವಾಸಿ ಶೀನ-ಲೀಲಾ ದಂಪತಿಯ ಇಬ್ಬರು ಮಕ್ಕಳಲ್ಲಿ ಕಾವ್ಯಾ ಕಿರಿಯವಳು.
ಪುಟ್ಟ ಬಾಲಕಿ ಕಾವ್ಯ ಸ್ಥಳೀಯ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದಾಳೆ. ಶಾಲೆಯಲ್ಲಿ ಆರೋಗ್ಯ ಕಾರ್ಯಕರ್ತೆಯ ಸ್ವಚ್ಛತೆಯ ಪಾಠದಿಂದ ಪ್ರೇರಿತಳಾದ ಕಾವ್ಯಾ ಶೌಚಾಲಯ ನಿರ್ಮಿಸಲು ಹೆತ್ತವರನ್ನು ಆಗ್ರಹಿಸಿದ್ದಳು.

ಈ ಹಿಂದೆ ಸೋಗೆ ಮಾಡಿನ ಸೂರಿನ ಮನೆಯನ್ನು ದುರಸ್ತಿ ಮಾಡಲು ಸುಮಾರು 1.5 ಲಕ್ಷ ರೂಪಾಯಿ ಸಾಲಮಾಡಿದ್ದ ಈ ಬಡ ಕುಟುಂಬಕ್ಕೆ ಮತ್ತೆ ಶೌಚಾಲಯ ನಿರ್ಮಿಸಲು ಸಾಧ್ಯವಿರಲಿಲ್ಲ. ಮಗಳ ಆಸೆಯಂತೆ ಮನೆಗೆ ಶೌಚಾಲಯ ನಿರ್ಮಿಸಲು ಹೆತ್ತವರಲ್ಲಿ ಚಿಕ್ಕಾಸು ಇರಲಿಲ್ಲ. ಜೊತೆಗೆ ಮನೆ ಜಾಗದ ಹಕ್ಕುಪತ್ರ ಸಮಸ್ಯೆ ಬೇರೆ.
ಕೊನೆಗೆ ಪಂಚಾಯತ್ ನಲ್ಲಿ ಶೌಚಾಲಯ ನಿರ್ಮಿಸಲು ವಿನಂತಿ ಸಲ್ಲಿಸಿದಾಗ ಅದು ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಮಗಳ ಒತ್ತಾಯಕ್ಕೆ ಮನಸೋತ ಹೆತ್ತವರು ಮನೆಯಲ್ಲಿ ಚಿನ್ನ ಅಡವಿಟ್ಟು 30 ಸಾವಿರ ರೂಪಾಯಿ ವೆಚ್ಚದಲ್ಲಿ ಶೌಚಾಲಯ, ಸ್ನಾನದ ಕೊಠಡಿ ಕಟ್ಟಿಸಿದ್ದಾರೆ. ಶೌಚಾಲಯಕ್ಕಾಗಿ ಒತ್ತಾಯಿಸಿ ಯಶಸ್ವಿಯಾದ ಕಾವ್ಯಾಳ ಪ್ರಸಂಗ ಈಗ ಪ್ರಶಂಸೆಗೆ ಪಾತ್ರವಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications