ಸರ್ಕಾರಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಂದ ಗುತ್ತಿಗೆ ಸೇವೆ
ಮಂಗಳೂರು, ನ. 25: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 65ಕ್ಕಿಂತ ಕಡಿಮೆ ವಯಸ್ಸಿನ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ 3 ವರ್ಷ ಅಥವಾ ಮುಂದಿನ ಆದೇಶ ನೀಡುವವರಿಗೆ ನೇಮಿಸಿಕೊಳ್ಳಲಾಗುವುದು. ಆಸಕ್ತ ಖಾಸಗಿ ವೈದ್ಯರಿಗೆ ಮಾಸಿಕ ಹಾಗೂ ದಿನದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಕೂಡ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. [ಸರ್ಕಾರಿ ಆಸ್ಪತ್ರೆಗೆ ತಜ್ಞ ವೈದ್ಯರು ಬರುತ್ತಿಲ್ಲ]

ಅರವಳಿಕೆ ತಜ್ಞರು ಪ್ರತಿ ಶಸ್ತ್ರಚಿಕಿತ್ಸೆ ಲೆಕ್ಕದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಮುಂದೆ ಬಂದಿದ್ದಾರೆ. ಯುವಕರನ್ನು ನೇಮಿಸಿಕೊಂಡು ಸ್ಕ್ಯಾನ್ನಂತಹ ಸೇವೆಗಳಿಗೆ ತರಬೇತಿ ನೀಡಲಾಗುವುದು. ರಾಜ್ಯದಲ್ಲಿ ವಿಕಿರಣ ಶಾಸ್ತ್ರಜ್ಞರ ಕೊರತೆ ಇರುವ ಹಿನ್ನೆಲೆಯಲ್ಲಿ ಅಂತರ್ಜಾಲದ ಮೂಲಕ ಅವರ ಸೇವೆ ಪಡೆಯಲಾಗುವುದೆಂದು ತಿಳಿಸಿದರು. [ವೈದ್ಯರ ಸಂಬಳ ಡಬಲ್]
ಪ್ರಸೂತಿ, ಅರವಳಿಕೆ, ಮಕ್ಕಳ ತಜ್ಞರಿಗೆ ಮಾಸಿಕ 50 ಸಾವಿರ ರೂ. ವೇತನ ಹಾಗೂ ಹೊರರೋಗಿ ವಿಭಾಗದಲ್ಲಿ ಕಾರ್ಯನಿರ್ವಹಿಸುವವರಿಗೆ ದಿನಕ್ಕೆ ಒಂದು ಸಾವಿರ ರೂ. ಗೌರವ ಧನ ನೀಡಲಾಗುವುದು ಎಂದು ತಿಳಿಸಿದ್ದಾರೆ. [ಇಂದು ವೈದ್ಯರ ಸಾಮೂಹಿಕ ರಾಜೀನಾಮೆ]
ಶಾಸಕರೂ ಸಿದ್ಧ: ವೈದ್ಯಕೀಯ ವೃತ್ತಿ ಕಲಿತು ಶಾಸಕರಾದ ಹಲವರು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಮುಂದೆ ಬಂದಿದ್ದಾರೆ. ರಾಜ್ಯದಲ್ಲಿ 9 ವೈದ್ಯಕೀಯ ಕಲಿತ ಶಾಸಕರಿದ್ದಾರೆ. ಅವರು ತಮ್ಮ ಕ್ಷೇತ್ರ ವ್ಯಾಪ್ತಿಯ ಆರೋಗ್ಯ ಕೇಂದ್ರ, ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಲು ಒಪ್ಪಿಗೆ ನೀಡಲಾಗಿದೆ ಎಂದು ಖಾದರ್ ತಿಳಿಸಿದ್ದಾರೆ. [ವೈದ್ಯರಿಗೆ ಖಡಕ್ ಎಚ್ಚರಿಕೆ]
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಸರ್ಕಾರಿ ಆಸ್ಪತ್ರೆಗಳಲ್ಲಿ ನಾಳೆ OPD ಸೇವೆ ಬಂದ್? ವೈದ್ಯರ ರಾಜ್ಯವ್ಯಾಪಿ ಪ್ರತಿಭಟನೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications