Get Updates
Get notified of breaking news, exclusive insights, and must-see stories!

ಸರ್ಕಾರಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಂದ ಗುತ್ತಿಗೆ ಸೇವೆ

ಮಂಗಳೂರು, ನ. 25: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 65ಕ್ಕಿಂತ ಕಡಿಮೆ ವಯಸ್ಸಿನ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ 3 ವರ್ಷ ಅಥವಾ ಮುಂದಿನ ಆದೇಶ ನೀಡುವವರಿಗೆ ನೇಮಿಸಿಕೊಳ್ಳಲಾಗುವುದು. ಆಸಕ್ತ ಖಾಸಗಿ ವೈದ್ಯರಿಗೆ ಮಾಸಿಕ ಹಾಗೂ ದಿನದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಕೂಡ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. [ಸರ್ಕಾರಿ ಆಸ್ಪತ್ರೆಗೆ ತಜ್ಞ ವೈದ್ಯರು ಬರುತ್ತಿಲ್ಲ]

khader

ಅರವಳಿಕೆ ತಜ್ಞರು ಪ್ರತಿ ಶಸ್ತ್ರಚಿಕಿತ್ಸೆ ಲೆಕ್ಕದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಮುಂದೆ ಬಂದಿದ್ದಾರೆ. ಯುವಕರನ್ನು ನೇಮಿಸಿಕೊಂಡು ಸ್ಕ್ಯಾನ್‌ನಂತಹ ಸೇವೆಗಳಿಗೆ ತರಬೇತಿ ನೀಡಲಾಗುವುದು. ರಾಜ್ಯದಲ್ಲಿ ವಿಕಿರಣ ಶಾಸ್ತ್ರಜ್ಞರ ಕೊರತೆ ಇರುವ ಹಿನ್ನೆಲೆಯಲ್ಲಿ ಅಂತರ್ಜಾಲದ ಮೂಲಕ ಅವರ ಸೇವೆ ಪಡೆಯಲಾಗುವುದೆಂದು ತಿಳಿಸಿದರು. [ವೈದ್ಯರ ಸಂಬಳ ಡಬಲ್]

ಪ್ರಸೂತಿ, ಅರವಳಿಕೆ, ಮಕ್ಕಳ ತಜ್ಞರಿಗೆ ಮಾಸಿಕ 50 ಸಾವಿರ ರೂ. ವೇತನ ಹಾಗೂ ಹೊರರೋಗಿ ವಿಭಾಗದಲ್ಲಿ ಕಾರ್ಯನಿರ್ವಹಿಸುವವರಿಗೆ ದಿನಕ್ಕೆ ಒಂದು ಸಾವಿರ ರೂ. ಗೌರವ ಧನ ನೀಡಲಾಗುವುದು ಎಂದು ತಿಳಿಸಿದ್ದಾರೆ. [ಇಂದು ವೈದ್ಯರ ಸಾಮೂಹಿಕ ರಾಜೀನಾಮೆ]

ಶಾಸಕರೂ ಸಿದ್ಧ: ವೈದ್ಯಕೀಯ ವೃತ್ತಿ ಕಲಿತು ಶಾಸಕರಾದ ಹಲವರು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಮುಂದೆ ಬಂದಿದ್ದಾರೆ. ರಾಜ್ಯದಲ್ಲಿ 9 ವೈದ್ಯಕೀಯ ಕಲಿತ ಶಾಸಕರಿದ್ದಾರೆ. ಅವರು ತಮ್ಮ ಕ್ಷೇತ್ರ ವ್ಯಾಪ್ತಿಯ ಆರೋಗ್ಯ ಕೇಂದ್ರ, ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಲು ಒಪ್ಪಿಗೆ ನೀಡಲಾಗಿದೆ ಎಂದು ಖಾದರ್ ತಿಳಿಸಿದ್ದಾರೆ. [ವೈದ್ಯರಿಗೆ ಖಡಕ್ ಎಚ್ಚರಿಕೆ]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+