ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂತ್ರಸ್ತನಿಗೆ ಸರ್ಕಾರದಿಂದ ಪರಿಹಾರ ವಿತರಣೆ
ಮಂಗಳೂರು, ಜನವರಿ 17: ಕುಕ್ಕರ್ ಬಾಂಬ್ ಬ್ಲಾಸ್ಟ್ನಿಂದ ಗಾಯಾಳುವಾಗಿದ್ದ ರಿಕ್ಷಾ ಡ್ರೈವರ್ ಪುರುಷೋತ್ತಮ ಪೂಜಾರಿಯವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಖಾತೆಗೆ ಜನವರಿ 1ರಂದು ಸಿಎಂ ಪರಿಹಾರ ನಿಧಿಯಿಂದ ಬಿಡುಗಡೆಯಾದ ಈ ಪರಿಹಾರ ಮೊತ್ತದ ಚೆಕ್ ಅನ್ನು ಪುರುಷೋತ್ತಮ ಪೂಜಗೆ ವಿತರಣೆ ಮಾಡಲಾಗಿದೆ.
ಪರಿಹಾರ ಚೆಕ್ ವಿತರಣೆ ಉದ್ದೇಶದಿಂದ ಸಿಎಂ ಪರಿಹಾರ ನಿಧಿಯಿಂದ ಸಿಎಂ ಜಂಟಿ ಕಾರ್ಯದರ್ಶಿ ಪಿ. ಗೋಪಾಲ್ ಆದೇಶ ಹೊರಡಿಸಿದ್ದಾರೆ. ಆದರೆ ಈ ಆದೇಶದಲ್ಲಿ ಕುಕ್ಕರ್ ಬಾಂಬ್ ಪ್ರಕರಣವನ್ನು ಸಾಮಾನ್ಯ ಘಟನೆಯೆಂಬಂತೆ ಬಿಂಬಿಸಲಾಗಿದೆ. ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರೀಕ್ ಭಯೋತ್ಪಾದಕ ಕೃತ್ಯ ಎಸಗಿರುವುದನ್ನು ಒಪ್ಪಿದ್ದಾನೆ.

ಎನ್ಐಎ ಕೂಡಾ ಈತನ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಆದರೂ ಆದೇಶ ಪತ್ರದಲ್ಲಿ ಮೊಹಮ್ಮದ್ ಶಾರೀಕ್ ನನ್ನು ಸಾಮಾನ್ಯ ಪ್ರಯಾಣಿಕನಂತೆ ಬಿಂಬಿಸಲಾಗಿದೆ. ಕುಕ್ಕರ್ ಬಾಂಬ್ ಎಂದು ಬಿಂಬಸದೆ ಸಾಮಾನ್ಯ ಕುಕ್ಕರ್ ಸಿಡಿದಿದೆ ಎಂದು ಉಲ್ಲೇಖಿಸಲಾಗಿದೆ. ಈ ಮೂಲಕ ಕುಕ್ಕರ್ ಬಾಂಬ್ ಪ್ರಕರಣವನ್ನೇ ರಾಜ್ಯ ಸರ್ಕಾರ ಸಾಮಾನ್ಯ ಘಟನೆಯೆಂಬಂತೆ ಬಿಂಬಿಸಲು ಹೊರಟಂತಿದೆ ಎನ್ನುವ ಅಸಮಾಧಾನದ ಮಾತುಗಳು ಕೇಳಿ ಬಂದಿದೆ.
ಪುರುಷೋತ್ತಮ ಪೂಜಾರಿಯವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡುವಂತೆ ಐವಾನ್ ಡಿಸೋಜ ಅವರು ಸಿಎಂ ಸಿದ್ದರಾಮಯ್ಯರಿಗೆ ಮನವಿ ನೀಡಿದ್ದರು. ಅದನ್ನು ಪರಿಗಣಿಸಿ ಸಿದ್ದರಾಮಯ್ಯ ಎರಡು ಲಕ್ಷ ಪರಿಹಾರ ನೀಡುವಂತೆ ಆದೇಶ ಮಾಡಿದ್ದಾರೆ.
ಈ ಹಿಂದಿನ ಬಿಜೆಪಿ ಸರಕಾರದಿಂದ ಅವರಿಗೆ ಪರಿಹಾರದ ಮೊತ್ತ ಲಭಿಸಿರಲಿಲ್ಲ. ಶಾಸಕ ವೇದವ್ಯಾಸ ಕಾಮತ್ ತಮ್ಮ ವೈಯುಕ್ತಿಕ ಹಣದಿಂದ ಹೊಸದಾದ ಆಟೋ ರಿಕ್ಷಾ ಒದಗಿಸಿದ್ದರೆ, ಬಿಜೆಪಿ ಪಕ್ಷದಿಂದ ಐದು ಲಕ್ಷ ರೂಪಾಯಿ ನೆರವು ನೀಡಲಾಗಿತ್ತು. ಆದರೆ ಬಿಜೆಪಿ ಸರ್ಕಾರದಿಂದ ಪರಿಹಾರ ಮೊತ್ತ ಸಿಕ್ಕಿರಲಿಲ್ಲ. ಅವರ ಚಿಕಿತ್ಸಾ ವೆಚ್ಚವನ್ನೂ ಭರಿಸಿರಲಿಲ್ಲ.
ಪ್ರಕರಣದ ಹಿನ್ನೆಲೆ ಏನು?
2022 ನವೆಂಬರ್ 19ರಂದು ನಗರದ ನಾಗುರಿಯ ಗರೋಡಿ ಬಳಿ ಸಂಚಾರದಲ್ಲಿದ್ದ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಪಡೀಲ್ನಲ್ಲಿ ರಿಕ್ಷಾ ಹತ್ತಿದ್ದ ಶಂಕಿತ ಉಗ್ರ ಶಾರೀಕ್ ಬಳಿಯಿದ್ದ ಕುಕ್ಕರ್ ಬಾಂಬ್ ನಾಗುರಿ ಬಳಿ ಆಕಸ್ಮಿಕವಾಗಿ ಸ್ಪೋಟಗೊಂಡಿತ್ತು. ಇದರಿಂದ ಶಾರೀಕ್ ಹಾಗೂ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರು ಗಾಯಗೊಂಡಿದ್ದರು. ಈ ಇಬ್ಬರನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ರಿಕ್ಷಾ ಚಾಲಕ ಗುಣಮುಖರಾಗಿ ಮನೆಗೆ ಮರಳಿದ್ದರು. ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಲಾಗಿತ್ತು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications