Get Updates
Get notified of breaking news, exclusive insights, and must-see stories!

ಜಾಲತಾಣದಲ್ಲಿ ಪ್ರಧಾನಿ ವಿರುದ್ಧ ಅವಹೇಳನಕಾರಿ ಸಂದೇಶ, ಸರ್ಕಾರಿ ನೌಕರನ ಬಂಧನ

ಮಂಗಳೂರು ಆಗಸ್ಟ್ 17: ಸಾಮಾಜಿಕ ಜಾಲತಾಣದಲ್ಲಿ ಆರ್ ಎಸ್ ಎಸ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಅವಹೇಳನಕಾರಿ ಸಂದೇಶ ಹರಿಬಿಟ್ಟ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಸಿಬ್ಬಂದಿ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಭೂಮಾಪನ ಇಲಾಖೆಯ ಸಿಬ್ಬಂದಿ ಮಹೇಶ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಮಹೇಶ್ ಅವರು ಸರಕಾರಿ ಉದ್ಯೋಗಿ ಆಗಿದ್ದರೂ ದೇಶದ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿ ಮತ್ತು ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ತನ್ನ ಫೇಸ್‍ಬುಕ್ ಖಾತೆ ಹಾಗೂ ವಾಟ್ಸ್ಅಪ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಮಹೇಶ್ ಅವಹೇಳನಕಾರಿ ಪದ ಬಳಸಿ ಸಂದೇಶಗಳನ್ನು ತನ್ನ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿಕೊಂಡಿದ್ದಾಗಿ ಹಿಂದೂ ಜಾಗರಣ ವೇದಿಕೆಯ ಕಡಬ ಶಾಖೆಯ ಮುಖಂಡ ವೆಂಕಟ್ರಮಣ ಕೋಡಿಂಬಾಳ ಎಂಬುವರು ಕಡಬ ಪೊಲೀಸ್ ಠಾಣೆಗೆ ಮಹೇಶ್ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಮಹೇಶ್ ನನ್ನು ಬಂಧಿಸಿದ್ದಾರೆ.

Government Employee Arrested for Offensive Post In Social Media

ಮಹೇಶ್‍ ಅವರನ್ನು ಸೇವೆಯಿಂದ ವಜಾಗೊಳಿಸಿ ಆತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಿಂದೂ ಜಾಗರಣ ವೇದಿಕೆ ಒತ್ತಾಯಿಸಿದೆ. ಮಹೇಶ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಕಡಬ ತಾಲೂಕು ಬಂದ್‍ಗೆ ಕರೆ ನೀಡಿ ಉಗ್ರ ರೀತಿಯ ಹೋರಾಟ ನಡೆಸಲಾಗುವುದು ಎಂದು ಹಿಂದು ಜಾಗರಣ ವೇದಿಕೆ ಎಚ್ಚರಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+