ಕಲ್ಲಡ್ಕ ಪ್ರಭಾಕರ ಭಟ್ ರ ಶಾಲೆಗೆ ರಾಜ್ಯ ಸರ್ಕಾರದ ಅನುದಾನ ರದ್ದು
ಮಂಗಳೂರು, ಆಗಸ್ಟ್ 8: ಕಲ್ಲಡ್ಕ ಪ್ರಭಾಕರ ಭಟ್ ರ ಮುಂದಾಳತ್ವದಲ್ಲಿ ನಡೆಯುತ್ತಿರುವ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸರಕಾರ ನೀಡುತ್ತಿದ್ದ ಅನುದಾನಕ್ಕೆ ಕತ್ತರಿ ಬಿದ್ದಿದೆ. ಸರಕಾರದ ಈ ನಡೆಯನ್ನು ಖಂಡಿಸಿರುವ ಕಲ್ಲಡ್ಕ ಪ್ರಭಾಕರ್ ಭಟ್, "ಇದೊಂದು ಸಿದ್ದರಾಮಯ್ಯ ಸರಕಾರದ ದ್ವೇಷದ ನಡೆ," ಎಂದು ಟೀಕಿಸಿದ್ದಾರೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಮತ್ತು ಬಂಟ್ವಾಳದ ಪುಣಚ ಶ್ರೀದೇವಿ ವಿದ್ಯಾಕೇಂದ್ರವನ್ನು ದತ್ತು ತೆಗೆದುಕೊಳ್ಳಲಾಗಿತ್ತು. ಇವುಗಳಿಗೆ ದೇವಸ್ಥಾನದ ದತ್ತು ಯೋಜನೆಯಡಿ ಅನುದಾನ ಲಭಿಸುತ್ತಿತ್ತು.

2007ರಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಈ ಎರಡು ಶಾಲೆಗಳನ್ನು ದತ್ತು ತೆಗೆದುಕೊಳ್ಳಲಾಗಿತ್ತು. ಕಳೆದ ಹತ್ತು ವರ್ಷಗಳಲ್ಲಿ ಕೊಲ್ಲೂರು ದೇವಸ್ಥಾನದಿಂದ ಶ್ರೀರಾಮ ವಿದ್ಯಾಕೇಂದ್ರಕ್ಕೆ 2.32 ಕೋಟಿ ಅನುದಾನ ಲಭಿಸಿದ್ದರೆ, ಪುಣಚ ಶ್ರೀದೇವಿ ಶಾಲೆಗೆ 50.72 ಲಕ್ಷ ನೆರವು ನೀಡಲಾಗಿತ್ತು.
ಇದೀಗ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ದೇವಸ್ಥಾನದಿಂದ ಶಾಲೆಗೆ ಬರುತ್ತಿದ್ದ ಅನುದಾನಕ್ಕೆ ಬ್ರೇಕ್ ಹಾಕಿದೆ. 'ದೇವಸ್ಥಾನದ ದುಡ್ಡು ಶಾಲೆಗೆ ವ್ಯಯಿಸಬಾರದು' ಎಂದು ಉಲ್ಲೇಖಿಸಿ 2007ರಲ್ಲಿ ರಾಜ್ಯ ಸರಕಾರ ನೀಡಿದ್ದ ದತ್ತು ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ.

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಆರೆಸ್ಸೆಸ್ ಮುಖಂಡ ಪ್ರಭಾಕರ ಭಟ್ಟರ ನೇತೃತ್ವದಲ್ಲಿ ನಡೆಯುತ್ತಿರುವುದರಿಂದ ರಾಜ್ಯ ಸರಕಾರ ದ್ವೇಷದ ರಾಜಕಾರಣಕ್ಕಾಗಿ ಅನುದಾನ ಕಡಿತಗೊಳಿಸಿದೆ ಎಂಬ ಆರೋಪವೂ ಕೇಳಿಬಂದಿದೆ.
ಈ ಕುರಿತು 'ಒನ್ಇಂಡಿಯಾ' ಕ್ಕೆ ಪ್ರತಿಕ್ರಿಯೆ ನೀಡಿರುವ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಕಲ್ಲಡ್ಕ ಪ್ರಭಾಕರ್ ಭಟ್, "ಇದು ಸಿದ್ದರಾಮಯ್ಯ ಸರಕಾರದ ದ್ವೇಷದ ರಾಜಕಾರಣ. ರಾಜ್ಯ ಸರಕಾರ ಬಡ ಮಕ್ಕಳ ಹೊಟ್ಟೆಗೆ ಹೊಡೆದಿದೆ. ಈ ವಿದ್ಯಾಕೇಂದ್ರದಲ್ಲಿ ಕಲಿಯುತ್ತಿರುವುದು ಸಿದ್ಧರಾಮಯ್ಯ ಹೇಳಿಕೊಂಡು ತಿರುಗಾಡುವ ಅಹಿಂದದ ಮಕ್ಕಳೇ. ಶೇಕಡಾ 90ರಷ್ಟು ಅಹಿಂದ ವರ್ಗಕ್ಕೆ ಸೇರಿದ ಬಡ ಮಕ್ಕಳು ಕೇಂದ್ರದಲ್ಲಿದ್ದಾರೆ. ಇವರಿಗೆ ರಾಜ್ಯ ಸರಕಾರ ಅನ್ಯಾಯ ಮಾಡಿದೆ," ಎಂದು ಕಿಡಿಕಾರಿದ್ದಾರೆ .
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications