ಉಚಿತ ಎಲ್ಪಿಜಿ-ಸಿಎಂ ಅನಿಲ ಭಾಗ್ಯ ಘೋಷಿಸಿದ ಖಾದರ್
ಮಂಗಳೂರು, ಜುಲೈ 27: ಅಡುಗೆ ಅನಿಲ ಸಂಪರ್ಕ ಹೊಂದಿರದ ರಾಜ್ಯದಲ್ಲಿರುವ ಲಕ್ಷಾಂತರ ಮಂದಿಗೆ ಶುಭ ಸುದ್ದಿ ಕಾದಿದೆ.
ರಾಜ್ಯದಲ್ಲಿನ ಅಡುಗೆ ಅನಿಲ ರಹಿತರೆಲ್ಲರಿಗೂ 'ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗುವುದು ಎಂದು ಸಚಿವ ಯು.ಟಿ ಖಾದರ್ ಅವರು ಗುರುವಾರದಂದು ಘೋಷಿಸಿದ್ದಾರೆ.
ಸರ್ಕ್ಯೂಟ್ ಹೌಸ್ನಲ್ಲಿ ಕರೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆಯ ಫಲಾನುಭವಿಗಳಿಗೆ 1940 ರೂ. ಬೆಲೆಯ ಅಡುಗೆ ಅನಿಲ ಸಂಪರ್ಕದೊಂದಿಗೆ 999 ರೂ. ವೌಲ್ಯದ 2 ಬರ್ನರ್ ಗ್ಯಾಸ್ ಸ್ಟ್ವವ್ ಉಚಿತವಾಗಿ ನೀಡಲಾಗುವುದು.
ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿದ ಕುಟುಂಬದ ಮಹಿಳೆಯು ತನ್ನ ಹೆಸರಿನಲ್ಲಿ ಈ ಯೋಜನೆಯನ್ನು ಪಡೆದುಕೊಳ್ಳಬಹುದು ಎಂದರು.

18 ವರ್ಷದ ಮೇಲ್ಪಟ್ಟ ಮಹಿಳಾ ಸದಸ್ಯರು (ಮಹಿಳೆಯರಿಲ್ಲದಿದ್ದರೆ 18 ವರ್ಷ ಮೇಲ್ಪಟ್ಟ ಪುರುಷರು) ತಮ್ಮ ಮನೆಯ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆ ಖಾಸಗಿ ಫ್ರಾಂಚೈಸಿ ಕೇಂದ್ರ, ತಾಲೂಕು ಕಚೇರಿ, ಗ್ರಾಮ ಪಂಚಾಯತ್ ಕಚೇರಿ, ಜನಸ್ನೇಹಿ ಕೇಂದ್ರ, ಬೆಂಗಳೂರು ಒನ್/ ಕರ್ನಾಟಕ ಒನ್ ಕೇಂದ್ರಗಳಲ್ಲಿ 20 ರೂ. ಪಾವತಿಸಿ ಅರ್ಜಿ ಸಲ್ಲಿಸಬಹುದು. ಪರಿಶೀಲನೆಯ ಬಳಿಕ 15 ದಿನದೊಳಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗುವುದು ಎಂದರು.
ಕೇಂದ್ರ ಸರಕಾರದ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿದವರೂ ಮುಖ್ಯಮಂತ್ರಿಗಳ ಅಡುಗೆ ಅನಿಲ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಆದರೆ, ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಮತ್ತೆ ಇಲ್ಲಿ ಅವಕಾಶವಿಲ್ಲ. ಕೇಂದ್ರ ಸರಕಾರ ಎಲ್ಲರಿಗೂ ಈ ಯೋಜನೆಯ ಪ್ರಯೋಜನ ಕಲ್ಪಿಸಿದ್ದರೆ ರಾಜ್ಯ ಸರಕಾರ ಮತ್ತೆ ಮುಖ್ಯಮಂತ್ರಿಗಳ ಅಡುಗೆ ಅನಿಲ ಯೋಜನೆ ಜಾರಿಗೊಳಿಸುವ ಆವಶ್ಯಕೆಯಿರಲಿಲ್ಲ ಎಂದು ಹೇಳಿದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications