ಮಂಗಳೂರು; ಲಷ್ಕರ್ ಪರ ಬರಹ, ಆರೋಪಿಗಳಿಗಾಗಿ ಹುಡುಕಾಟ
ಮಂಗಳೂರು, ನವೆಂಬರ್ 27 : ಮಂಗಳೂರು ನಗರದ ಬಿಜೈ ರಸ್ತೆಯ ಗೋಡೆಯ ಮೇಲೆ ಭಯೋತ್ಪಾದಕ ಸಂಘಟನೆ ಪರವಾಗಿ ಬರಹ ಬರೆಯಲಾಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗೋಡೆಯ ಮೇಲೆ ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತೋಯ್ಬಾ ಪರವಾಗಿ ಬರಹವನ್ನು ಬರೆಯಲಾಗಿದೆ. "ನಮ್ಮನ್ನು ವಿಧ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ" ಎಂದು ಬರಹದಲ್ಲಿ ಎಚ್ಚರಿಕೆ ನೀಡಲಾಗಿದೆ.
"ಲಷ್ಕರ್ ಎ ತೋಯ್ಬಾ ಮತ್ತು ತಾಲಿಬಾನ್ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎಂಬುದು ತಿಳಿದಿದೆ" ಎಂದು ಬರೆಯಲಾಗಿದ್ದು, ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.

"ಲಷ್ಕರ್ ಜಿಂದಾಬಾದ್" ಎಂದು ಸಹ ಬರೆಯಲಾಗಿದ್ದು, ಶುಕ್ರವಾರ ಬೆಳಗ್ಗೆ ಬರಹ ಬೆಳಕಿಗೆ ಬಂದಿದೆ. ಗುರುವಾರ ಮಧ್ಯರಾತ್ರಿ ಕಿಡಿಗೇಡಿಗಳು ಈ ರೀತಿ ಬರೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ತವರು ನೆಲದಲ್ಲಿಯೇ ಈ ರೀತಿಯ ಬರಹ ಪತ್ತೆಯಾಗಿದೆ.
ಕದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿದ ಬರಹವನ್ನು ಅಳಿಸಿ ಹಾಕಿದ್ದಾರೆ. ಗೋಡೆ ಮೇಲೆ ಬರೆದವರು ಯಾರು? ಎಂಬುದನ್ನು ಪತ್ತೆಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಈ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕ್ರಮ ಕೈಗೊಳ್ಳಲು ಸೂಚನೆಯನ್ನು ಕೊಟ್ಟಿದ್ದಾರೆ.
ರಾಷ್ಟ್ರ ವಿರೋಧಿ ಕೃತ್ಯಗಳನ್ನು ಸಹಿಸುವುದು ಸಾಧ್ಯವಿಲ್ಲ ಎಂದು ವೇದವ್ಯಾಸ ಕಾಮತ್ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟವನ್ನು ನಡೆಸುತ್ತಿದ್ದಾರೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications