ವೈಭವದ ಮೂಡಬಿದಿರೆ ಆಳ್ವಾಸ್ ವಿರಾಸತ್ಗೆ ಸಂಭ್ರಮದ ಚಾಲನೆ
ಮೂಡಬಿದಿರೆ, ಜನವರಿ 05: ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಪ್ರಸಿದ್ಧ ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಲಾಗಿದೆ. ಸಾಂಸ್ಕೃತಿಕ ಉತ್ಸವದ ಅಂಗವಾಗಿ ಖ್ಯಾತ ಹಿನ್ನೆಲೆ ಗಾಯಕ ಹರಿಹರನ್ ಅವರಿಗೆ ಆಳ್ವಾಸ್ ವಿರಾಸತ್ 2019 ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಿನ್ನೆ ಸಂಜೆ ನಡೆದ ಭವ್ಯ ಸಮಾರಂಭದಲ್ಲಿ ಆಳ್ವಾಸ್ ವಿರಾಸತ್ ರಜತ ಮಹೋತ್ಸವ ಕಾರ್ಯಕ್ರಮವನ್ನು ನಿಟ್ಟೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಎನ್ ವಿನಯ ಹೆಗ್ಡೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಕೇವಲ ಪಾಠ ಪ್ರವಚನಗಳಿಗೆ ಮಾತ್ರ ಸೀಮಿತವಾಗದೇ ಸಾಹಿತ್ಯ, ಸಂಸ್ಕೃತಿ, ಕಲೆ, ಕ್ರೀಡೆಗಳ ಆಕರ್ಷಿತರಾಗುವಂತೆ ಕಾರ್ಯಕ್ರಮ ಅಯೋಜಿಸುತ್ತಿರುವ ಆಳ್ವಾಸ್ ಶಿಕ್ಷಣ ಸಂಸ್ಥೆ ನಾಡಿಗೆ ಮಾದರಿ ಯಾಗಿದೆಎಂದು ಹೇಳಿದರು.
ಆರ್ಥಿಕ ಸಂಕಷ್ಟ ದಲ್ಲಿಯೂ ಕೂಡ ಟೀಕೆ ಟಿಪ್ಪಣಿಗಳನ್ನು ಸಂಭಾಳಿ ಸುತ್ತ, ಇದು ತನ್ನ ಕರ್ತವ್ಯ ಎಂದು ಭಾವಿಸಿ ಶ್ರಮಿಸುತ್ತಿರುವ ಡಾ.ಎಂ. ಮೋಹನ ಆಳ್ವರ ಚಿಂತನೆಗಳನ್ನು ಯುವಜನತೆ ಅರ್ಥಮಾಡಿ ಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಹರಿಹರನ್ಗೆ ಆಳ್ವಾಸ್ ವಿರಾಸತ್ ಪ್ರಶಸ್ತಿ
ಕಾರ್ಯಕ್ರಮದ ಅಂಗವಾಗಿ ಖ್ಯಾತ ಹಿನ್ನೆಲೆ ಗಾಯಕ ಹರಿಹರನ್ ಅವರನ್ನು ಡಾ.ಎಂ.ಮೋಹನ ಆಳ್ವರು ಅವರು 'ಆಳ್ವಾಸ್ ವಿರಾಸತ್ 2019' ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಆಳ್ವಾಸ್ ವಿರಾಸತ್ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಗೌರವಧನ, ಸ್ಮರಣಿಕೆ, ಸಮ್ಮಾನ ಫಲಕ ಒಳ ಗೊಂಡಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಹರಿಹರನ್ ಈ ಸಮ್ಮಾನ ನನ್ನಲ್ಲಿ ವಿನೀತ ಪ್ರಜ್ಞೆಯನ್ನು ಉದ್ದೀಪಿಸಿದೆ, ಇದು ಸ್ಮರಣೀಯ ಕ್ಷಣ ಎಂದು ಹರಿಹರನ್ ಭಾವುಕರಾಗಿ ಪ್ರತಿಕ್ರಿಯಿಸಿದರು.

ಪೇಜಾವರ ಶ್ರೀ ಮಾತು
ಉದ್ಘಾಟನ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು . ತಾಳ ಮೇಳದ ಹೊಂದಾಣಿಕೆ ಯಿಂದ ಸುಂದರ ಸಂಗೀತ ಯಾವ ರೀತಿ ಹೊರಹೊಮ್ಮಲು ಸಾಧ್ಯವೋ ಅದೇ ರೀತಿ ಪರಸ್ಪರ ಸಾಮರಸ್ಯದೊಂದಿಗೆ ಜನರ ರಾಷ್ಟ್ರೀಯ ಜೀವನ ಸಂಗೀತವಾಗಿರಲಿ ಎಂದು ಹೇಳಿದರು.

ಪಶ್ಚಿಮದವರನ್ನು ಪ್ರಭಾವಿಸಿರುವ ಅಧ್ಯಾತ್ಮ
ಅಧ್ಯಾತ್ಮ, ಯೋಗ, ಕಲೆ ಇವುಗಳೆಲ್ಲ ಪೂರ್ವದಿಂದ ಪಶ್ಚಿಮಕ್ಕೆ ಸಾಗಿ ಅಲ್ಲಿನವರನ್ನು ಪ್ರಭಾವಿಸಿದರೆ ಪಶ್ಚಿಮದ ವಿಕೃತಿಗಳು ಪೂರ್ವಕ್ಕೆ ಬಂದು ಈ ನಾಡನ್ನು ಕಂಗೆಡಿಸಿವೆ. ಇಂಥ ಸಂದರ್ಭ ವಿರಾಸತ್ ಸಾಮರಸ್ಯ ಮೂಡಿಸುವ ಅಪೂರ್ವ ಪ್ರಯತ್ನ ಎಂದು ಅವರು ಅಭಿಪ್ರಾಯ ಪಟ್ಟರು.

ಹರಿಹರನ್ ಸಂಗೀತದ ಮೋಡಿ
ನಂತರ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಹರಿಹರನ್ ಶಾಸ್ತ್ರೀಯ ಸಂಗೀತದ ಮೋಡಿ ಮಾಡಿದರೆ ಲೆಸ್ಲೆ ಲಿವಿಸ್ ಪಾಶ್ಚಾತ್ಯ ಸಂಗೀತದ ರಸ ದೌತಣ ಉಣ ಬಡಿಸಿದರು. ಈ ಸಂದರ್ಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವರಾದ ಅಮರನಾಥ ಶೆಟ್ಟಿ, ಅಭಯಚಂದ್ರ, ಜಯಶ್ರೀ ಅಮರನಾಥ ಶೆಟ್ಟಿ, ಮಾಜಿ ವಿಧಾನಪರಿಷತ್ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ಮತ್ತಿತರರು ಉಪಸ್ಥಿತರಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications