ನೋಡ ಬನ್ನಿ ನವದುರ್ಗೆಯರ ನಮಿಸುವ ಮಂಗಳೂರು ದಸರಾ
ಮಂಗಳೂರು, ಅಕ್ಟೋಬರ್ 13: ಕರಾವಳಿಯ ಸುಂದರ ನಗರ ಮಂಗಳೂರಿನಲ್ಲಿಗ ನವರಾತ್ರಿಯ ಸಂಭ್ರಮ ಸಡಗರ . ವರ್ಷದಿಂದ ವರ್ಷಕ್ಕೆ ಈ ನವರಾತ್ರಿಯ ವೈಭವ ಮಂಗಳೂರಿನಲ್ಲಿ ವೃದ್ದಿಸುತ್ತಲೇ ಇದೆ.
ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಅರಮನೆ ಮೆರಗು ನೀಡಿದರೆ ಮಂಗಳೂರು ದಸರಾಕ್ಕೆ ಕುದ್ರೋಳಿ ಗೋಕರ್ಣನಾಥ ದೇವಾಲಯದ ವಿಶೇಷ ನವರಾತ್ರಿ ಮೆರುಗು ನೀಡುತ್ತದೆ.
ಮೈಸೂರಲ್ಲಿ ಚಾಮುಂಡೇಶ್ವರಿ ಅಗ್ರದೇವತೆಯಾದರೆ, ಮಂಗಳೂರು ದಸರಾಕ್ಕೆ ಶಾರದ ಮಾತೆಯೊಂದಿಗೆ ಶಕ್ತಿಯ ಪ್ರತೀಕವಾಗಿರುವ ನವದುರ್ಗೆಯರೇ ಆದಿ. ಇದು ದೂರದ ಮೈಸೂರು ದಸರಾದ ಮೆರಗನ್ನು ತುಳುನಾಡಿನ ಜನರಿಗೆ ಮಂಗಳೂರಿನಲ್ಲಿಯೇ ವೀಕ್ಷಿಸಲು ಅವಕಾಶ ಕಲ್ಪಿಸಿದೆ.

ವಿಜೃಂಭಣೆಯಿಂದ ನಡೆಯುತ್ತೆ ಮಂಗಳೂರು ದಸರಾ
ಮಂಗಳೂರು ದಸರಾ ಉತ್ಸವಕ್ಕೆ ಈಗಾಗಲೇ ಚಾಲನೆ ದೊರೆತಿದೆ. ಮೈಸೂರಿನಂತೆಯೇ ಮಂಗಳೂರು ದಸರಾ ಉತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ದಸರಾ ಉತ್ಸವದ ಅಂಗವಾಗಿ ಮಂಗಳೂರಿನ ಕುದ್ರೋಳಿಯ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಸ್ವರ್ಗವೇ ಧರೆಗಿಳಿದು ಬಂದಂತೆ ಬಾಸವಾಗುತ್ತಿದೆ. ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ನವದುರ್ಗೆಯರ ಮೂರ್ತಿಗಳು ವಿಶೇಷ ಮೆರಗು ನೀಡಿದೆ. ಮಂಗಳೂರು ದಸರಾದ ವಿಜೃಂಭಣೆ ವಿಕ್ಷಿಸಲು ಜನಸಾಗರವೇ ಹರಿದು ಬರುತ್ತಿದೆ.

ಶಾರದಾ ದೇವಿ ಪೂಜೆಯೊಂದಿಗೆ ದಸರಾಕ್ಕೆ ಚಾಲನೆ
ದಿನಕಳೆದಂತೆ ಕಡಲ ತಡಿಯ ಯಲ್ಲಿ ನವರಾತ್ರಿ ಉತ್ಸವದ ಸಡಗರ ಮುಗಿಲು ಮುಟ್ಟುತ್ತಿದೆ. ವೈಭವೋಪೇತ ವಿಶಿಷ್ಟ ಆಕರ್ಷಣೆಯ ನವರಾತ್ರಿ ಉತ್ಸವಕ್ಕೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ 10 ದಿನದ ದಸರಾ ಉತ್ಸವಕ್ಕೆ ಅಕ್ಟೋಬರ್ 10 ರಂದು ಚಾಲನೆ ನೀಡಲಾಯಿತು. ಮೈಸೂರಿನಲ್ಲಿ ಚಾಮುಂಡೇಶ್ವರಿ ಗೆ ಪೂಜೆ ಸಲ್ಲಿಸುವ ಮೂಲಕ ದಸಾರಾ ಉತ್ಸವಕ್ಕೆ ಚಾಲನೆ ದೊರೆಯುತ್ತದೆ. ಅದರಂತೆ ಶಕ್ತಿಯ ಪ್ರತೀಕವಾದ ನವದುರ್ಗೆಯರೊಂದಿಗೆ ಶಾರದಾ ದೇವಿಯ ಪ್ರತಿಮೆಯನ್ನು ಪ್ರತಿಷ್ಟಾಪಿಸಿ ಪೂಜೆ ಸಲ್ಲಿಸುವುದರೊಂದಿಗೆ ಮಂಗಳೂರಿನ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ.

ಲಕ್ಷಾಂತರ ಜನ ಭಾಗಿ
ವಿಶಿಷ್ಟ ಮೆರಗುಗಳೊಂದಿಗೆ ಲಕ್ಷಾಂತರ ಜನರನ್ನು ಮಂಗಳೂರಿನ ದಸರಾ ಮಹೋತ್ಸವ ಆಕರ್ಷಿಸುತ್ತಿದೆ. ಮಂಗಳೂರು ದಸರಾದ ವಿಶಿಷ್ಟ ಆಕರ್ಷಣೆ ನವದುರ್ಗೆಯರ ಪ್ರತಿಷ್ಟಾಪನೆ, ಮಂಗಳೂರಿನ ಕುದ್ರೋಳಿ ದೇವಾಲಯದಲ್ಲಿ ನವದುರ್ಗೆಯರ ದರ್ಶನ ಪಡೆಯುವುದೇ ಕಣ್ಣಿಗೆ ಹಬ್ಬ . ನವದುರ್ಗೆಯರನ್ನು ಪ್ರತಿಷ್ಠಾಪಿಸಲಾದ ಮಂಟಪ ಸ್ವರ್ಗವೇ ಧರೆಗಿಳಿದು ಬಂದಂತೆ ಭಾಸ ವಾಗುತ್ತಿದೆ.

ಶಕ್ತಿ ರೂಪಗಳ ಆಧಾಧನೆ
ಶಕ್ತಿ ರೂಪಗಳಾದ ನವದುರ್ಗೆಯರನ್ನು ಪ್ರತಿಷ್ಟಾಪಸಿ ನವರಾತ್ರಿಯನ್ನು ಆಚರಿಸುವುದು ಮಂಗಳೂರು ದಸರಾ ವೈಶಿಷ್ಟ್ಯ. ಶಾರದ ಮಾತೆಯಂದಿಗೆ ಶಕ್ತಿಯ ರೂಪಗಳಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಿನಿ, ಸ್ಕಂದಮಾತ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ ಮತ್ತು ಸಿದ್ದಿಧಾತ್ರಿ ಹಾಗೂ ವಿಘ್ನನಿವಾರಕ ಗಣೇಶನನ್ನು ಇಲ್ಲಿ ಪ್ರತಿಷ್ಟಾಪಿಸಿ ವೈಭವಯುತವಾಗಿ 9 ದಿನಗಳ ಕಾಲ ಆರಾಧಿಸಲ್ಪಡುತ್ತಿರುವುದು ಇಲ್ಲಿನ ವೈಶಿಷ್ಟ್ಯ.

ಅಕ್ಟೋಬರ್ 20ರ ವರೆಗೆ ನಡೆಯುತ್ತದೆ
ಅಕ್ಟೋಬರ್ 20 ರ ವರೆಗೆ ನಡೆಯುವ ಈ ಮಂಗಳೂರು ದಸರಾ ಉತ್ಸವದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳುತ್ತಿದ್ದು, ದೇಶ ವಿದೇಶಗಳಿಂದ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications