ದಕ್ಷಿಣ ಕನ್ನಡ: ಹಸಿರು ಶಾಲೆಯಲ್ಲಿ ಕೃಷಿ ಕ್ರಾಂತಿ; ದ್ರಾಕ್ಷಿ ನೆಟ್ಟು ಸೈ ಎನಿಸಿಕೊಂಡ ಮಕ್ಕಳು
ಮಂಗಳೂರು, ಏಪ್ರಿಲ್ 27: ಎಲ್ಲೆಡೆ ನಗರೀಕರಣದ ಬಗ್ಗೆಯೇ ಹೆಚ್ಚಿನ ಒಲವಿದ್ದು, ಪರಿಸರದ ಬಗ್ಗೆ ಕಾಳಜಿ ಕ್ಷೀಣಿಸುತ್ತಿದೆ. ಹೈಟೆಕ್ ಕಟ್ಟಡಗಳಲ್ಲಿ ಕಲಿಯುವ ಇಂದಿನ ಮಕ್ಕಳಿಗೂ ಪರಿಸರ ಎನ್ನುವುದರ ಬಗ್ಗೆ ಅರಿವೇ ಇಲ್ಲದಂತಹ ಸ್ಥಿತಿಯೂ ನಿರ್ಮಾಣಗೊಂಡಿದೆ.
ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಶಿಕ್ಷಣದ ಜೊತೆಗೆ ಪರಿಸರಕ್ಕೂ ಅಷ್ಟೇ ಮಹತ್ವವನ್ನು ನೀಡಿದೆ. ಶಾಲೆಯ ತುಂಬೆಲ್ಲಾ ವಿವಿಧ ರೀತಿಯ ಅಪರೂಪದ ಹಣ್ಣಿನ ಗಿಡಗಳು, ಔಷಧೀಯ ಸಸ್ಯಗಳನ್ನು ಬೆಳೆಸಿದೆ. ಈ ಶಾಲೆಯ ಪರಿಸರ ಕಾಳಜಿಗೆ ಐದು ಬಾರಿ ಈ ಶಾಲೆ ಹಸಿರು ಶಾಲೆ ಎನ್ನುವ ಪ್ರಶಸ್ತಿಯ ಗರಿಯನ್ನೂ ಮುಡಿಗೇರಿಸಿಕೊಂಡಿದೆ.

1935ರಲ್ಲಿ ನಿರ್ಮಾಣಗೊಂಡಿರುವ ಶಾಲೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಗ್ರಾಮದ ಪೆಲ್ಲಾಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾತ್ರ ಹಸಿರು ಶಾಲೆಯಾಗಿ ಕೊಂಚ ಭಿನ್ನವಾಗಿಯೇ ಗುರುತಿಸಿಕೊಂಡಿದೆ. ಮಕ್ಕಳಿಗೆ ಎಳವೆಯಿಂದಲೇ ಪರಿಸರದ ಬಗ್ಗೆ ಕಾಳಜಿ ಮೂಡಬೇಕು ಎನ್ನುವ ಸದುದ್ದೇಶದಿಂದ ಈ ಶಾಲೆಯನ್ನು ಪರಿಸರಸ್ನೇಹಿ ಶಾಲೆಯಾಗಿ ರೂಪಿಸಲಾಗಿದೆ.
1935ರಲ್ಲಿ ನಿರ್ಮಾಣಗೊಂಡಿರುವ ಈ ಶಾಲೆಯಲ್ಲಿ ಹಳೆಯ ಕಟ್ಟಡದ ಜೊತೆಗೆ ಹೊಸದಾಗಿ ನಿರ್ಮಿಸಲಾದ ಕಟ್ಟಡದಲ್ಲೂ ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಗುತ್ತಿದೆ. ಆದರೆ ಇಲ್ಲಿ ಕಟ್ಟಡಕ್ಕಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಪರಿಸರಕ್ಕೆ ನೀಡಲಾಗುತ್ತಿದೆ. ಶಾಲೆಯ ಪರಿಸರದ ತುಂಬಾ ಖಾಲಿ ಜಾಗ ಇರುವಲ್ಲೆಲ್ಲಾ ಒಂದಲ್ಲಾ ಒಂದು ರೀತಿಯ ಹಣ್ಣಿನ, ಔಷಧೀಯ ಗುಣಗಳ ಗಿಡ-ಮರಗಳನ್ನು ಬೆಳೆಸಲಾಗಿದೆ.

150ಕ್ಕೂ ಮಿಕ್ಕಿದ ಬಲು ಅಪರೂಪದ ಹಣ್ಣಿನ ಮರಗಳು
ಈ ಶಾಲೆಯಲ್ಲಿ ಸುಮಾರು 150ಕ್ಕೂ ಮಿಕ್ಕಿದ ಬಲು ಅಪರೂಪದ ಹಣ್ಣಿನ ಮರಗಳು ಸೇರಿದಂತೆ ಔಷಧೀಯ ಗುಣವುಳ್ಳ ಗಿಡಗಳನ್ನು ಬೆಳೆಯಲಾಗಿದೆ. ಕ್ಯಾನ್ಸರ್ ಕಾಯಿಲೆಗೆ ರಾಮಬಾಣದಂತಿರುವ ಲಕ್ಷ್ಮಣ ಫಲದ ಸಸಿಯನ್ನೂ ಈ ಶಾಲೆಯಲ್ಲಿ ಬೆಳೆಸಲಾಗುತ್ತಿದ್ದು, ಪ್ರತೀ ವರ್ಷವೂ ಉತ್ತಮ ಹಣ್ಣುಗಳನ್ನೂ ಈ ಸಸಿಗಳಿಂದ ಪಡೆಯಲಾಗುತ್ತಿದೆ.
ಅಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಣಸಿಗದ ದ್ರಾಕ್ಷಿ ಬಳ್ಳಿಗಳನ್ನೂ ಈ ಶಾಲೆಯಲ್ಲಿ ಶಿಕ್ಷಕರು ಮಕ್ಕಳ ಸಹಾಯದಿಂದ ಬೆಳೆಯುತ್ತಿದ್ದು, ಕಳೆದ ವರ್ಷ ಸುಮಾರು 4-5 ಕಿಲೋದಷ್ಟು ದ್ರಾಕ್ಷಿ ಹಣ್ಣನ್ನು ಪಡೆದಿದ್ದಾರೆ. ಈ ಬಾರಿ ಮತ್ತೆ ದ್ರಾಕ್ಷಿ ಬಳ್ಳಿಯಲ್ಲಿ ಹಣ್ಣು ಬಿಟ್ಟಿದ್ದು, ದ್ರಾಕ್ಷಿಯನ್ನು ದಕ್ಷಿಣ ಕನ್ನಡ ನೆಲದಲ್ಲೂ ಬೆಳೆಯಬಹುದು ಎನ್ನುವುದನ್ನು ಈ ಶಾಲೆ ಶಿಕ್ಷಕರು ಮತ್ತು ಮಕ್ಕಳು ತೋರಿಸಿಕೊಟ್ಟಿದ್ದಾರೆ.

ಶಾಲೆಯಲ್ಲಿ ಆಧುನಿಕ ಶೌಚಾಲಯ ನಿರ್ಮಾಣ
ಪರಿಸರಕ್ಕೆ ಹೆಚ್ಚಿನ ಒತ್ತನ್ನು ಈ ಶಾಲೆಯಲ್ಲಿ ನೀಡಲಾಗುತ್ತಿರುವುದರ ಜೊತೆಗೆ ಸ್ವಚ್ಛತೆಗೂ ಇಲ್ಲಿ ಪ್ರಥಮ ಆದ್ಯತೆಯನ್ನು ನೀಡಲಾಗಿದೆ. ಒಂದು ಕಾಲದಲ್ಲಿ ಶೌಚಾಲಯವನ್ನೇ ನೋಡದ ಈ ಶಾಲೆಯಲ್ಲಿ ಇದೀಗ ಯಾವ ಸರಕಾರಿ ಶಾಲೆಯಲ್ಲೂ ಇರದ ಆಧುನಿಕ ಶೌಚಾಲಯವನ್ನು ನಿರ್ಮಿಸಲಾಗಿದೆ. ಸರಕಾರಿ ಶಾಲೆಗಳಲ್ಲಿರುವ ಹಳೆ ಶೌಚಾಲಯದ ವ್ಯವಸ್ಥೆಗೆ ಈ ಶಾಲೆ ತಿಲಾಂಜಲಿಯಿಟ್ಟಿದೆ.
ಗ್ರಾಮೀಣ ಭಾಗದ ಮಕ್ಕಳು ಹೊಸ ಶೌಚಾಲಯ ವ್ಯವಸ್ಥೆಗೂ ಒಗ್ಗಿಕೊಳ್ಳಲಿ ಎನ್ನುವ ಕಾರಣಕ್ಕೆ ಹೈಟೆಕ್ ಶೌಚಾಲಯವನ್ನೂ ನಿರ್ಮಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ಅತ್ಯಂತ ಅಪರೂಪವಾಗಿರುವ ಈ ಶಾಲೆಯ ಆವರಣವನ್ನು ಸುತ್ತಿದೆಲ್ಲಾ ಕಡೆ ಅಪರೂಪದ ಗಿಡ-ಮರ-ಬಳ್ಳಿಗಳ ಪರಿಚಯವಾಗುತ್ತದೆ ಎನ್ನುತ್ತಾರೆ ಕಡೇಶ್ವಾಲ್ಯ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷೆ ಶ್ಯಾಮಲಾ.

ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಪರಿಸರ ಸ್ನೇಹ
ಆಧುನಿಕತೆ ಕಡೆ ವಾಲುತ್ತಿರುವ ಇತ್ತೀಚಿನ ಮಕ್ಕಳನ್ನು ಮತ್ತೆ ಪರಿಸರದ ಕಡೆಗೆ ಕರೆತರಬೇಕು ಎನ್ನುವ ಉದ್ದೇಶದಿಂದ ಈ ಶಾಲೆಯನ್ನು ಹಸಿರು ಶಾಲೆಯಾಗಿ ಬದಲಾಯಿಸಲಾಗಿದೆ. ಮಕ್ಕಳಲ್ಲಿ ಶಿಕ್ಷಣದ ಜೊತೆಗೆ ಪರಿಸರ ಸ್ನೇಹವೂ ಜಾಗೃತವಾಗಿರಲಿ ಎನ್ನುವ ಕಾರಣಕ್ಕೆ ಶಾಲೆಯಲ್ಲಿ ಈ ರೀತಿಯ ಪ್ರಯೋಗಗಳು, ಪ್ರಯತ್ನಗಳು ನಡೆಯಬೇಕಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications