ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಸಿರು ಕಟ್ಟಡ ನೀತಿಯಡಿ ಮಳೆ ನೀರು ಕೊಯ್ಲು ನಿಯಮ ಜಾರಿ- ಯು.ಟಿ. ಖಾದರ್

|
Google Oneindia Kannada News

ಮಂಗಳೂರು ಜೂನ್ 25: ರಾಜ್ಯದಲ್ಲಿ ಹಸಿರು ಕಟ್ಟಡ ನೀತಿಗೆ ಸಂಬಂಧಿಸಿದಂತೆ ಕರಡು ನೀತಿ ಪ್ರಕಟಿಸಲಾಗಿದ್ದು, ಶೀಘ್ರವೇ ನೂತನ ನೀತಿ ಜಾರಿಗೆ ಬರಲಿದೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದರು.

ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ನಗರ ಪ್ರದೇಶಗಳಲ್ಲಿ 'ಮಳೆ ನೀರು ಕೊಯ್ಲು' ವ್ಯವಸ್ಥೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಸಿರು ಕಟ್ಟಡ ನೀತಿ ಜಾರಿಗೆ ಬರಲಿದೆ' ಎಂದು ಹೇಳಿದರು. ಮುಂಬರುವ ದಿನಗಳಲ್ಲಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಹೊಸ ಮನೆ ಅಥವಾ ಕಟ್ಟಡ ನಿರ್ಮಾಣ ಮಾಡುವಾಗ ಕಡ್ಡಾಯವಾಗಿ ಹಸಿರು ಕಟ್ಟಡ ನೀತಿ ಅನುಸರಿಸಬೇಕು. ಈ ಸಂಬಂಧ ಕರಡು ನೀತಿ ಪ್ರಕಟಿಸಲಾಗಿದೆ ಎಂದರು.

ಸಂತ್ರಸ್ತರಿಗೆ ಮೂರು ದಿನಗಳಲ್ಲಿ ಪರಿಹಾರ; ಯು.ಟಿ ಖಾದರ್ ಭರವಸೆಸಂತ್ರಸ್ತರಿಗೆ ಮೂರು ದಿನಗಳಲ್ಲಿ ಪರಿಹಾರ; ಯು.ಟಿ ಖಾದರ್ ಭರವಸೆ

ನೂತನ ನೀತಿಯನ್ವಯ ಹೊಸ ಮನೆ ಅಥವಾ ಕಟ್ಟಡ ನಿರ್ಮಿಸುವಾಗ ಮಳೆ ನೀರು ಕೊಯ್ಲು ವ್ಯವಸ್ಥೆ ಅನುಷ್ಠಾನಗೊಳ್ಳಬೇಕು. ಕಸದ ನಿರ್ವಹಣೆಗೆ ಹೊಸ ಸೂತ್ರ ಜಾರಿಗೊಳಿಸಿ ಸ್ವಚ್ಛತೆಗೆ ವಿಶೇಷ ಆದ್ಯತೆ ಹಾಗೂ ಸೋಲಾರ್ ಅಳವಡಿಕೆಗೆ ಈ ನೀತಿಯಡಿಯಲ್ಲಿ ಮೊದಲ ಪ್ರಾಶಸ್ತ್ಯ ನೀಡಲಾಗುವುದು ಎಂದು ಅವರು ತಿಳಿಸಿದರು. ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆಯೂ ಕಾನೂನು ಜಾರಿಗೆ ತರಲಾಗುವುದು ಎಂದು ಅವರು ಎಚ್ಚರಿಸಿದರು.

Green building policy draft copy ready said U T Khadar

ಮನೆ ಕಟ್ಟುವ ಸಮಯದಲ್ಲಿ ಪರವಾನಗಿ ಸಿಗಬೇಕಾದರೆ ಮಳೆ ನೀರು ಕೊಯ್ಲು ಕಡ್ಡಾಯವಾಗಿರಬೇಕು. ಈ ಬಗ್ಗೆ ಸ್ಥಳೀಯ ನುರಿತರಿಂದ ಅನುಮತಿ ಪಡೆಯುವ ಕ್ರಮವನ್ನು ನೀತಿಯಲ್ಲಿ ಸೇರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

English summary
Urban development minister UT Khadar said that Green building policy draft copy is already completed. Where in adopting rain water harvesting, solar energy system for new building policy. It will be introduced soon
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X