ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟ: ಮೂಡಬಿದ್ರೆ ಇನ್ಸ್ಪೆಕ್ಟರ್ ಸಮಯಪ್ರಜ್ಞೆಯಿಂದ ತಪ್ಪಿದ ಸಂಘರ್ಷ
ಮಂಗಳೂರು, ಅಕ್ಟೋಬರ್ 06: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಯ ವೇಳೆ ಕಲ್ಲು ತೂರಾಟ ನಡೆಸಿರುವ ಘಟನೆ ಇನ್ನೂ ಮಾಸಿಲ್ಲ. ಸದ್ಯ ರಾಗಿಗುಡ್ಡದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣವಿದೆ. ಈ ಮಧ್ಯೆ ಮಂಗಳೂರಿನ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈದ್ ಮಿಲಾದ್ ದಿನವೇ ಕಿಡಿಗೇಡಿಗಳು ಗಣಪತಿ ಕಟ್ಟೆಯಲ್ಲಿ ಹಸಿರು ಬಾವುಟವಿಟ್ಟು ಗಲಭೆಗೆ ಯತ್ನಿಸಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗೇರು ಎಂಬಲ್ಲಿ ನಡೆದಿದೆ. ಸೆಪ್ಟೆಂಬರ್ 30ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಹಬ್ಬದ ದಿನವೇ ಮಂಗಳೂರಿನಲ್ಲೂ ಶಾಂತಿ ಕದಡುವ ಪ್ರಯತ್ನ ನಡೆದಿದ್ದು, ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಅವರ ಸಮಯಪ್ರಜ್ಞೆಯಿಂದ ಸಂಭವಿಸುತ್ತಿದ್ದ ಭಾರೀ ಅನಾಹುತವೊಂದು ತಪ್ಪಿದೆ.
ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಪುಚ್ಚೆಮೊಗೇರು ಎಂಬಲ್ಲಿನ ಗಣಪತಿ ಕಟ್ಟೆಯಲ್ಲಿ ಕಿಡಿಗೇಡಿಗಳು ಹಸಿರು ಬಾವುಟ ಇಟ್ಟಿದ್ದರು. ಈ ಬಗ್ಗೆ ಹೊಸಬೆಟ್ಟು ಪಿಡಿಒ ಶೇಖರ್ ಗಮನಕ್ಕೆ ತಂದರೂ ಬಾವುಟವನ್ನು ತೆರವು ಮಾಡದೆ ಬೇಜವಾಬ್ದಾರಿ ಮೆರೆದಿದ್ದರು ಎನ್ನಲಾಗಿದೆ.

ಈ ವಿಚಾರ ತಿಳಿದ ಕೂಡಲೇ ಇನ್ಸ್ಪೆಕ್ಟರ್ ಸಂದೇಶ್ ಸ್ಥಳಕ್ಕೆ ಭೇಟಿ ನೀಡಿದ್ದು, ಪಿಡಿಒ ಶೇಖರ್ ಎನ್ನುವವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ದೃಶ್ಯ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ಗಣಪತಿ ಕಟ್ಟೆ ಮೇಲೆ ಬಾವುಟ ಹಾಕಲಿಕ್ಕೆ ಅನುಮತಿ ತೆಗೊಂಡಿದ್ದಾರಾ? ಎಂದು ಪಿಡಿಒರನ್ನು ಇನ್ಸ್ಪೆಕ್ಟರ್ ಪ್ರಶ್ನೆ ಮಾಡಿದ್ದಾರೆ.
ನಿನ್ನ ಕೆಲಸ ಏನೂ ಅಂತ ನಿನಗೆ ಗೊತ್ತಿಲ್ಲ, ಏನು ಮಾಡ್ತಾ ಇದೀಯಾ? ಅವರು ಅನುಮತಿ ತೆಗೆದುಕೊಂಡಿಲ್ಲ ಅಂದರೆ ಪೊಲೀಸ್ ದೂರು ಕೊಡಬೇಕು. ಮೊದಲು ಇವನನ್ನೇ ಆರೋಪಿ ಮಾಡಬೇಕು. ನಿನ್ನ ಅಧಿಕಾರ ಏನು ಅಂತ ನಿನಗೆ ಗೊತ್ತಿಲ್ಲ. ನನಗೂ ಇದಕ್ಕೂ ಸಂಬಂಧ ಇಲ್ಲ ಅಂತ ಹೇಳುವ ನೀನ್ಯಾಕೆ ಪಿಡಿಒ ಆಗಿದ್ದೀಯಾ ಎಂದು ಇನ್ಸ್ಪೆಕ್ಟರ್ ಗರಂ ಆಗಿದ್ದಾರೆ.
ಬಳಿಕ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಪೊಲೀಸ್ ಸಿಬ್ಬಂದಿ ಮೂಲಕ ಬಾವುಟ ತೆರವು ಮಾಡಿಸಿದ್ದಾರೆ. ಕಿಡಿಗೇಡಿಗಳು ಹಿಂದೂಗಳಿಗೆ ಸೇರಿದ್ದ ಕಟ್ಟೆಯಲ್ಲಿ ಹಸಿರು ಬಾವುಟ ಇಟ್ಟು ಮೂಡಬಿದ್ರೆ ಭಾಗದಲ್ಲಿ ಗಲಭೆಗೆ ಯತ್ನ ನಡೆಸಿದ್ದು, ಇನ್ಸ್ಪೆಕ್ಟರ್ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications