ಕೋವಿಡ್ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ಮಾಡಿದ ಮಹಿಳೆಯರು!
ಮಂಗಳೂರು, ಏಪ್ರಿಲ್ 26; ಕೋವಿಡ್ ಎಂಬ ಮಾರಕ ವೈರಸ್ ಇಡೀ ಮನುಜ ಕುಲವನ್ನು ಭೀಕರವಾಗಿ ಕಾಡುತ್ತಿದೆ. ಕಣ್ಣಿಗೆ ಕಾಣದ ವೈರಸ್ನಿಂದ ಮನುಷ್ಯ, ಮನುಷ್ಯ ನಡುವೆ ದೈಹಿಕ ಅಂತರ ಜೊತೆಗೆ ಮಾನಸಿಕವಾಗಿಯೂ ಅಂತರವಿರುವಂತೆ ಮಾಡಿದೆ.
ಕೊರೊನಾ ಎಂಬ ಹೆಮ್ಮಾರಿ ಜನರನ್ನು ಭಯಭೀತಿಗೊಳಿಸಿದರೂ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಮಹಿಳಾ ತಂಡ ಕೊರೊನಾ ಆತಂಕದ ನಡುವೆಯೂ ಸಾಮಾಜಿಕ ಬದ್ಧತೆ ಮೆರೆದಿದೆ. ನ್ಯಾಷನಲ್ ವಿಮೆನ್ ಫ್ರಂಟ್ ಸಂಘಟನೆಯ ಮಹಿಳಾ ತಂಡ ಕೊರೊನಾದಿಂದ ಮೃತಪಟ್ಟ ಮುಸ್ಲಿಂ ಮಹಿಳೆಯರ ಅಂತಿಮ ವಿಧಿ ವಿಧಾನ ಮಾಡುವ ಮೂಲಕ ಮಾನವೀಯತೆಯನ್ನು ಮೆರೆದಿದೆ.
ಕೋವಿಡ್ನಿಂದ ಮೃತಪಟ್ಟ ಮಹಿಳೆಯರ ಅಂತ್ಯ ಸಂಸ್ಕಾರವನ್ನು ಗೌರವಯುತವಾಗಿ ಮಾಡುವ ಕಾರ್ಯದಲ್ಲಿ ಈ ಸಂಘಟನೆ ತೊಡಗಿದೆ. ಕೊರೊನಾದಿಂದ ಮೃತಪಟ್ಟವರ ಶವದ ಸಮೀಪಕ್ಕೆ ಬರಲು ಮನೆಯವರೇ ಹಿಂದೇಟು ಹಾಕುತ್ತಿರುವ ಸಂದರ್ಭದಲ್ಲಿ ಈ ಮಹಿಳೆಯರ ತಂಡವೇ ಅಂತಿಮ ಕಾರ್ಯವನ್ನು ಮಾಡುತ್ತದೆ.

ಕೋವಿಡ್ ಒಂದನೇ ಅಲೆಯ ಸಂದರ್ಭದಲ್ಲೂ ಈ ತಂಡ ಕೋವಿಡ್ ಮತ್ತು ಕೋವಿಡ್ ಅಲ್ಲದೆ ಮೃತಪಟ್ಟ 200ಕ್ಕೂ ಅಧಿಕ ಮುಸ್ಲಿಂ ಮಹಿಳೆಯರ ಅಂತಿಮ ವಿಧಿ ವಿಧಾನವನ್ನು ಮುಸ್ಲಿಂ ಸಂಪ್ರದಾಯದಂತೆ ಮಾಡಿತ್ತು.
ಈ ಬಾರಿಯೂ ಆ ಸೇವೆಯನ್ನು ಸಂಘಟನೆ ಮುಂದುವರಿಸುತ್ತಿದೆ. ಮೃತಪಟ್ಟ ಕೋವಿಡ್ ರೋಗಿಗಳ ಅಂತಿಮ ವಿಧಿ ವಿಧಾನವನ್ನೂ ಈ ತಂಡ ಮಾಡುತ್ತಿದ್ದು, ಬಜ್ಪೆ, ಬಂಟ್ವಾಳ, ಉಪ್ಪಿನಂಗಡಿ, ಮಂಗಳೂರು ಪರಿಸರದ ಕೋವಿಡ್ ಮೃತರ ಅಂತ್ಯಕ್ರಿಯೆಗಳನ್ನು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈ ತಂಡಗಳಿದ್ದು, ಅವರಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುತ್ತಿದೆ. ಕೊರೊನಾ ರೋಗಿ ಮೃತಪಟ್ಟ ಸಂದರ್ಭದಲ್ಲಿ ಸರ್ಕಾರದ ನಿಯಮದ ಪ್ರಕಾರ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನಡೆಸುತ್ತಾರೆ.
"ಪುರುಷ ಮೃತಪಟ್ಟರೆ ಪುರಷರೇ ಅಂತ್ಯಕ್ರಿಯೆ ಗಳನ್ನು ಮಾಡುತ್ತಾರೆ. ಆದರೆ ಮುಸ್ಲಿಂ ಸಂಪ್ರದಾಯದ ಪ್ರಕಾರ ಮುಸ್ಲಿಂ ಮಹಿಳೆ ಮೃತಪಟ್ಟರೆ ಮಹಿಳೆಯರೇ ಶವದ ಸ್ನಾನ ಇನ್ನಿತರ ಕ್ರಿಯೆಗಳನ್ನು ಮಾಡಬೇಕು. ಆದರೆ ಕೊರೊನಾ ಕಾರಣದಿಂದ ಮಹಿಳೆಯರು ಈ ಕ್ರಿಯೆ ಮಾಡಲು ಮುಂದೆ ಬರಲು ಒಪ್ಪಲಿಲ್ಲ. ಹೀಗಾಗಿ ಸಂಘಟನೆಯಿಂದಲೇ ಮಹಿಳಾ ತಂಡವನ್ನು ರಚಿಸಲಾಗಿದೆ" ಎಂದು ನ್ಯಾಷನಲ್ ವಿಮೆನ್ ಫ್ರಂಟ್ ಸಂಘಟನೆಯ ರಾಜ್ಯ ಸದಸ್ಯೆ ಫಾತಿಮಾ ಹೇಳಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications