ರಾಘವೇಂದ್ರ ತೀರ್ಥರ ವಿರುದ್ಧ ಕ್ರಮಕ್ಕೆ ಜಿ ಎಸ್ ಬಿ ದೇವಳಗಳ ಒಕ್ಕೂಟದ ಆಗ್ರಹ
ಮಂಗಳೂರು, ಆಗಸ್ಟ್ 29: ಕೇಂದ್ರ ಅಪರಾಧ ತನಿಖಾದಳದ ಸಂಸ್ಥೆಯ ಹೆಸರು ಬಳಸಿ ಅಧಿಕಾರಿಗಳ ಸೋಗಿನಲ್ಲಿ ಕಾನೂನು ಬಾಹಿರ ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಕೇರಳ ಮೂಲದ ಸ್ಯಾಮ್ ಪೀಟರ್ ಹಾಗೂ ಇತರ ಏಳು ಮಂದಿ ಬಂಧಿತರು ವಿಚಾರಣೆಯ ವೇಳೆಗೆ ಬಹಿರಂಗಗೊಳಿಸಿರುವ ಈ ಸಂಚಿಗೆ ಕಾರಣರಾದ ರಾಘವೇಂದ್ರ ತೀರ್ಥ ಅಲಿಯಾಸ್ ಶಿವಾನಂದ ಪೈ ವಿರುದ್ಧ ಕಠಿಣ ಕ್ರಮ ಜರುಗಿಸಲು ಮಂಗಳೂರು ಪೊಲೀಸ್ ಕಮಿಷನರ್ ಡಾ. ಹರ್ಷ ಅವರನ್ನು ಆಗ್ರಹಿಸುವುದಾಗಿ ಜಿ.ಎಸ್.ಬಿ. ದೇವಳಗಳ ಒಕ್ಕೂಟದ ಅಧ್ಯಕ್ಷ ಜಗನ್ನಾಥ ಕಾಮತ್ ಹೇಳಿದ್ದಾರೆ.
ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ, ಈ ಅವಮಾನಕಾರಿ ವಿಷಯವನ್ನು ಜಿ.ಎಸ್.ಬಿ. ಸಮಾಜ ಖಂಡಿಸುತ್ತದೆ ಎಂದವರು ಹೇಳಿದರು.
ತನ್ನನ್ನು ಶ್ರೀ ಕಾಶೀಮಠ ಸಂಸ್ಥಾನದ ಪೀಠಾಧಿಪತಿಯನ್ನಾಗಿಸಬೇಕು. ಅದಕ್ಕಾಗಿ ಹಾಲಿ ಮಠಾಧೀಶರು ಮತ್ತು ಅವರ ಬೆಂಬಲಿಗರನ್ನು ಬೆದರಿಸಿ ಈ ಕೆಲಸ ಸಾಧಿಸುವಂತೆ ರಾಘವೇಂದ್ರ ತೀರ್ಥ ಅಲಿಯಾಸ್ ಶಿವಾನಂದ ಪೈ ಮತ್ತು ಅವರನ್ನು ಬೆಂಬಲಿಸಿ ಉಡುಪಿಯ ರಾಮಚಂದ್ರ ನಾಯಕ್ ತನ್ನನ್ನು ಸಂಪರ್ಕಿಸಿದ್ದರು ಎಂದು ಪೊಲೀಸ್ ವಿಚಾರಣೆಯಲ್ಲಿ ಬಂಧಿತ ಕೇರಳ ಮೂಲದ ಸ್ಯಾಮ್ ಪೀಟರ್ ಹೇಳಿರುವುದು ಅತ್ಯಂತ ಕಳವಳಕಾರಿ ವಿಷಯವಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.
ಶ್ರೀ ಕಾಶೀಮಠಾಧೀಶರಾಗಿದ್ದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ 1989ರಲ್ಲಿ ಎರ್ನಾಕುಲಂನ ಶಿವಾನಂದ ಪೈಯವರಿಗೆ ಸನ್ಯಾಸ ದೀಕ್ಷೆ ನೀಡಿ ರಾಘವೇಂದ್ರ ತೀರ್ಥರೆಂದು ನಾಮಕರಣ ಮಾಡಿದ್ದರು. ಮುಂದೆ 1994ರ ಏಪ್ರಿಲ್ 4ರ ರಾಯಸದಲ್ಲಿ ಅದೇ ವರ್ಷ ಡಿಸೆಂಬರ್ 12ರಿಂದ ಅನ್ವಯಿಸುವಂತೆ ರಾಘವೇಂದ್ರ ತೀರ್ಥರನ್ನು ಸಂಸ್ಥಾನದ ಕರ್ತವ್ಯವನ್ನು ಸೂಚಿಸಿ, ಮಠದ ಆರಾಧ್ಯ ಮೂರ್ತಿಗಳ ಸಹಿತ ಚಿನ್ನಾಭರಣ ಸೊತ್ತುಗಳನ್ನು ಒದಗಿಸಿದ್ದರು.

ಆದರೆ, ಸಂಸ್ಥಾನದ ಕರ್ತವ್ಯ ನಿರ್ವಹಣೆಗೆ ಕಷ್ಟವಾಗುತ್ತಿರುವುದರಿಂದ ನಮ್ಮನ್ನು ಕರ್ತವ್ಯದಿಂದ ವಿಮುಕ್ತರನ್ನಾಗಿಸಿ ಎಂದ ರಾಘವೇಂದ್ರ ತೀರ್ಥ, ನವೆಂಬರ್ 4, 1999ರ ಕೋರಿಕೆಯಂತೆ ನಂತರವೂ ಎಲ್ಲವೂ ಸರಿಹೋಗಬಹುದು ಎಂಬ ನಿರೀಕ್ಷೆ ಹುಸಿಯಾದ ಬಳಿಕ ಜುಲೈ 7 2000ದ ರಾಯಸದಲ್ಲಿ ರಾಘವೇಂದ್ರರನ್ನು ಎಲ್ಲ ಕರ್ತವ್ಯಗಳಿಂದ ಗುರು ಸುಧೀಂದ್ರ ತೀರ್ಥರು ವಿಮುಕ್ತರನ್ನಾಗಿಸಿದ್ದರು ಎಂದು ಅವರು ವಿವರಿಸಿದರು.
ಅಧಿಕಾರದಿಂದ ವಿಮುಕ್ತರಾದರೂ ರಾಘವೇಂದ್ರರು ಸಂಸ್ಥಾನದ ಆರಾಧ್ಯ ಮೂರ್ತಿಗಳನ್ನು ಚಿನ್ನಾಭರಣ, ಸೊತ್ತುಗಳನ್ನು ಮರಳಿಸದೇ ನ್ಯಾಯಾಲಯದಲ್ಲಿ ದಾವೆ ಹೂಡಿದರು. ಅಲ್ಲಿಯೂ ವಿಫಲರಾದಾಗ ಕಾನೂನು ಆದೇಶವನ್ನು ಧಿಕ್ಕರಿಸಿ ತಲೆ ಮರೆಸಿಕೊಂಡಿದ್ದರು.
2011ರಲ್ಲಿ ರಾಘವೇಂದ್ರರು ಪೋಲೀಸರ ವಶವಾದ ಬಳಿಕ 2015ರಲ್ಲಿ ಸುಧೀಂದ್ರ ತೀರ್ಥರು ರಾಘವೇಂದ್ರರನ್ನು ತಮ್ಮ ಉತ್ತರಾಧಿಕಾರಿಯಲ್ಲ ಎಂದು ಘೋಷಿಸಿ, ತಮ್ಮ ನೂತನ ಶಿಷ್ಯರಾದ ಸಂಯಮೀಂದ್ರ ತೀರ್ಥರೇ ಸಂಸ್ಥಾನದ ಉತ್ತರಾಧಿಕಾರಿ ಎಂದು ಆದೇಶ ಹೊರಡಿಸಿದ್ದರು.
2016ರಲ್ಲಿ ಗುರು ಸುಧೀಂದ್ರರು ವೃಂದಾವನಸ್ಥರಾದಾಗ ಅವರ ಆದೇಶದಂತೆ ಸಂಯಮೀಂದ್ರ ತೀರ್ಥ ಸ್ವಾಮೀಜಿ ಶ್ರೀಕಾಶೀಮಠಾಧೀಶರಾಗಿ ಸಂಸ್ಥಾನವನ್ನು ಇದೀಗ ಮುನ್ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.
ಈ ಬೆಳವಣಿಗೆಗಳಿಂದ ಅಸೂಯೆಗೊಂಡ ರಾಘವೇಂದ್ರರು ಮತ್ತು ಅವರ ಬೆಂಬಲಿಗರು ಕಳೆದ ಎರಡು ದಶಕಗಳಿಂದ ಶ್ರೀ ಸಂಸ್ಥಾನದ ಮಠಾಧೀಶರು, ದೇವಳಗಳ ಟ್ರಸ್ಟಿಗಳು, ಸಂಘ ಸಂಸ್ಥೆಗಳ ಮೇಲೆ ಮೇಲೆ ಇಲ್ಲ ಸಲ್ಲದ ಆರೋಪ, ಸುಳ್ಳು ದಾವೆಗಳಿಗೆ ಮುಂದಾಗಿ ಕಿರುಕುಳ ನೀಡುತ್ತಲೇ ಇದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ರಾಘವೇಂದ್ರರ ವಿರುದ್ಧ ಕಠಿಣ ಕ್ರಮಕ್ಕೆ ಕಮಿಷನರ್ ಅವರಿಗೆ ದೇವಳಗಳ ಒಕ್ಕೂಟದ ಪರವಾಗಿ ಮನವಿಯನ್ನು ಬಳಿಕ ಸಲ್ಲಿಸಲಾಯಿತು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications