Get Updates
Get notified of breaking news, exclusive insights, and must-see stories!

ರಾಘವೇಂದ್ರ ತೀರ್ಥರ ವಿರುದ್ಧ ಕ್ರಮಕ್ಕೆ ಜಿ ಎಸ್ ಬಿ ದೇವಳಗಳ ಒಕ್ಕೂಟದ ಆಗ್ರಹ

ಮಂಗಳೂರು, ಆಗಸ್ಟ್ 29: ಕೇಂದ್ರ ಅಪರಾಧ ತನಿಖಾದಳದ ಸಂಸ್ಥೆಯ ಹೆಸರು ಬಳಸಿ ಅಧಿಕಾರಿಗಳ ಸೋಗಿನಲ್ಲಿ ಕಾನೂನು ಬಾಹಿರ ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಕೇರಳ ಮೂಲದ ಸ್ಯಾಮ್ ಪೀಟರ್ ಹಾಗೂ ಇತರ ಏಳು ಮಂದಿ ಬಂಧಿತರು ವಿಚಾರಣೆಯ ವೇಳೆಗೆ ಬಹಿರಂಗಗೊಳಿಸಿರುವ ಈ ಸಂಚಿಗೆ ಕಾರಣರಾದ ರಾಘವೇಂದ್ರ ತೀರ್ಥ ಅಲಿಯಾಸ್ ಶಿವಾನಂದ ಪೈ ವಿರುದ್ಧ ಕಠಿಣ ಕ್ರಮ ಜರುಗಿಸಲು ಮಂಗಳೂರು ಪೊಲೀಸ್ ಕಮಿಷನರ್ ಡಾ. ಹರ್ಷ ಅವರನ್ನು ಆಗ್ರಹಿಸುವುದಾಗಿ ಜಿ.ಎಸ್.ಬಿ. ದೇವಳಗಳ ಒಕ್ಕೂಟದ ಅಧ್ಯಕ್ಷ ಜಗನ್ನಾಥ ಕಾಮತ್ ಹೇಳಿದ್ದಾರೆ.

ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ, ಈ ಅವಮಾನಕಾರಿ ವಿಷಯವನ್ನು ಜಿ.ಎಸ್.ಬಿ. ಸಮಾಜ ಖಂಡಿಸುತ್ತದೆ ಎಂದವರು ಹೇಳಿದರು.

ತನ್ನನ್ನು ಶ್ರೀ ಕಾಶೀಮಠ ಸಂಸ್ಥಾನದ ಪೀಠಾಧಿಪತಿಯನ್ನಾಗಿಸಬೇಕು. ಅದಕ್ಕಾಗಿ ಹಾಲಿ ಮಠಾಧೀಶರು ಮತ್ತು ಅವರ ಬೆಂಬಲಿಗರನ್ನು ಬೆದರಿಸಿ ಈ ಕೆಲಸ ಸಾಧಿಸುವಂತೆ ರಾಘವೇಂದ್ರ ತೀರ್ಥ ಅಲಿಯಾಸ್ ಶಿವಾನಂದ ಪೈ ಮತ್ತು ಅವರನ್ನು ಬೆಂಬಲಿಸಿ ಉಡುಪಿಯ ರಾಮಚಂದ್ರ ನಾಯಕ್ ತನ್ನನ್ನು ಸಂಪರ್ಕಿಸಿದ್ದರು ಎಂದು ಪೊಲೀಸ್ ವಿಚಾರಣೆಯಲ್ಲಿ ಬಂಧಿತ ಕೇರಳ ಮೂಲದ ಸ್ಯಾಮ್ ಪೀಟರ್ ಹೇಳಿರುವುದು ಅತ್ಯಂತ ಕಳವಳಕಾರಿ ವಿಷಯವಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.

ಶ್ರೀ ಕಾಶೀಮಠಾಧೀಶರಾಗಿದ್ದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ 1989ರಲ್ಲಿ ಎರ್ನಾಕುಲಂನ ಶಿವಾನಂದ ಪೈಯವರಿಗೆ ಸನ್ಯಾಸ ದೀಕ್ಷೆ ನೀಡಿ ರಾಘವೇಂದ್ರ ತೀರ್ಥರೆಂದು ನಾಮಕರಣ ಮಾಡಿದ್ದರು. ಮುಂದೆ 1994ರ ಏಪ್ರಿಲ್ 4ರ ರಾಯಸದಲ್ಲಿ ಅದೇ ವರ್ಷ ಡಿಸೆಂಬರ್ 12ರಿಂದ ಅನ್ವಯಿಸುವಂತೆ ರಾಘವೇಂದ್ರ ತೀರ್ಥರನ್ನು ಸಂಸ್ಥಾನದ ಕರ್ತವ್ಯವನ್ನು ಸೂಚಿಸಿ, ಮಠದ ಆರಾಧ್ಯ ಮೂರ್ತಿಗಳ ಸಹಿತ ಚಿನ್ನಾಭರಣ ಸೊತ್ತುಗಳನ್ನು ಒದಗಿಸಿದ್ದರು.

GSB Temple Association Demands Action On Raghavendra Thirtha

ಆದರೆ, ಸಂಸ್ಥಾನದ ಕರ್ತವ್ಯ ನಿರ್ವಹಣೆಗೆ ಕಷ್ಟವಾಗುತ್ತಿರುವುದರಿಂದ ನಮ್ಮನ್ನು ಕರ್ತವ್ಯದಿಂದ ವಿಮುಕ್ತರನ್ನಾಗಿಸಿ ಎಂದ ರಾಘವೇಂದ್ರ ತೀರ್ಥ, ನವೆಂಬರ್ 4, 1999ರ ಕೋರಿಕೆಯಂತೆ ನಂತರವೂ ಎಲ್ಲವೂ ಸರಿಹೋಗಬಹುದು ಎಂಬ ನಿರೀಕ್ಷೆ ಹುಸಿಯಾದ ಬಳಿಕ ಜುಲೈ 7 2000ದ ರಾಯಸದಲ್ಲಿ ರಾಘವೇಂದ್ರರನ್ನು ಎಲ್ಲ ಕರ್ತವ್ಯಗಳಿಂದ ಗುರು ಸುಧೀಂದ್ರ ತೀರ್ಥರು ವಿಮುಕ್ತರನ್ನಾಗಿಸಿದ್ದರು ಎಂದು ಅವರು ವಿವರಿಸಿದರು.

ಅಧಿಕಾರದಿಂದ ವಿಮುಕ್ತರಾದರೂ ರಾಘವೇಂದ್ರರು ಸಂಸ್ಥಾನದ ಆರಾಧ್ಯ ಮೂರ್ತಿಗಳನ್ನು ಚಿನ್ನಾಭರಣ, ಸೊತ್ತುಗಳನ್ನು ಮರಳಿಸದೇ ನ್ಯಾಯಾಲಯದಲ್ಲಿ ದಾವೆ ಹೂಡಿದರು. ಅಲ್ಲಿಯೂ ವಿಫಲರಾದಾಗ ಕಾನೂನು ಆದೇಶವನ್ನು ಧಿಕ್ಕರಿಸಿ ತಲೆ ಮರೆಸಿಕೊಂಡಿದ್ದರು.

2011ರಲ್ಲಿ ರಾಘವೇಂದ್ರರು ಪೋಲೀಸರ ವಶವಾದ ಬಳಿಕ 2015ರಲ್ಲಿ ಸುಧೀಂದ್ರ ತೀರ್ಥರು ರಾಘವೇಂದ್ರರನ್ನು ತಮ್ಮ ಉತ್ತರಾಧಿಕಾರಿಯಲ್ಲ ಎಂದು ಘೋಷಿಸಿ, ತಮ್ಮ ನೂತನ ಶಿಷ್ಯರಾದ ಸಂಯಮೀಂದ್ರ ತೀರ್ಥರೇ ಸಂಸ್ಥಾನದ ಉತ್ತರಾಧಿಕಾರಿ ಎಂದು ಆದೇಶ ಹೊರಡಿಸಿದ್ದರು.

2016ರಲ್ಲಿ ಗುರು ಸುಧೀಂದ್ರರು ವೃಂದಾವನಸ್ಥರಾದಾಗ ಅವರ ಆದೇಶದಂತೆ ಸಂಯಮೀಂದ್ರ ತೀರ್ಥ ಸ್ವಾಮೀಜಿ ಶ್ರೀಕಾಶೀಮಠಾಧೀಶರಾಗಿ ಸಂಸ್ಥಾನವನ್ನು ಇದೀಗ ಮುನ್ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ಈ ಬೆಳವಣಿಗೆಗಳಿಂದ ಅಸೂಯೆಗೊಂಡ ರಾಘವೇಂದ್ರರು ಮತ್ತು ಅವರ ಬೆಂಬಲಿಗರು ಕಳೆದ ಎರಡು ದಶಕಗಳಿಂದ ಶ್ರೀ ಸಂಸ್ಥಾನದ ಮಠಾಧೀಶರು, ದೇವಳಗಳ ಟ್ರಸ್ಟಿಗಳು, ಸಂಘ ಸಂಸ್ಥೆಗಳ ಮೇಲೆ ಮೇಲೆ ಇಲ್ಲ ಸಲ್ಲದ ಆರೋಪ, ಸುಳ್ಳು ದಾವೆಗಳಿಗೆ ಮುಂದಾಗಿ ಕಿರುಕುಳ ನೀಡುತ್ತಲೇ ಇದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಘವೇಂದ್ರರ ವಿರುದ್ಧ ಕಠಿಣ ಕ್ರಮಕ್ಕೆ ಕಮಿಷನರ್ ಅವರಿಗೆ ದೇವಳಗಳ ಒಕ್ಕೂಟದ ಪರವಾಗಿ ಮನವಿಯನ್ನು ಬಳಿಕ ಸಲ್ಲಿಸಲಾಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+