ಅರ್ಧ ಲೀಟರ್ ನೀರಿಗೆ 40 ರೂ., ಮಂಗಳೂರಲ್ಲಿ ಹೀಗೊಂದು ಹಗಲು ದರೋಡೆ
ಮಂಗಳೂರಿನಲ್ಲಿ ನೀರಿನ ಹಾಹಾಕಾರ ಮುಗಿಲು ಮುಟ್ಟುತ್ತಿದೆ. ಇದರ ಮಧ್ಯೆ 10 ರೂಪಾಯಿಗೆ ಸಿಗುತ್ತಿದ್ದ ಅರ್ಧ ಲೀಟರ್ ಮಿನರಲ್ ವಾಟರ್ ಗೆ 40 ರೂಪಾಯಿ ವಸೂಲಿ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ಮಂಗಳೂರು, ಏಪ್ರಿಲ್ 3: ಮಂಗಳೂರಿನಲ್ಲಿ ನೀರಿನ ಹಾಹಾಕಾರ ಮುಗಿಲು ಮುಟ್ಟುತ್ತಿದೆ. ಇದರ ಮಧ್ಯೆ 10 ರೂಪಾಯಿಗೆ ಸಿಗುತ್ತಿದ್ದ ಅರ್ಧ ಲೀಟರ್ ಮಿನರಲ್ ವಾಟರ್ ಗೆ 40 ರೂಪಾಯಿ ವಸೂಲಿ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ನಗರದ ಐಷಾರಾಮಿ ಮಾಲ್ ಗಳಲ್ಲಿ ಪ್ರತಿ ಅರ್ಧ ಲೀಟರ್ ನೀರಿನ ಬಾಟಲಿಗೆ 10 ರೂಪಾಯಿ ಜಾಗದಲ್ಲಿ 40 ರೂಪಾಯಿ ವಸೂಲಿ ಮಾಡುತ್ತಿದ್ದಾರೆ. 1 ಲೀಟರ್ ನೀರಿನ ಬಾಟಲಿಗೆ 20ರ ಜಾಗದಲ್ಲಿ 80 ರೂಪಾಯಿ ವಸೂಲಿ ಮಾಡಲಾಗುತ್ತಿದೆ.[ಬಿಸಿಲ ಬೇಗೆಯ ನಡುವೆ ಮಂಗಳೂರಲ್ಲಿ ಶುರುವಾಯಿತೇ ನೀರಿನ ದಂಧೆ ?]

ಬಾಟಲಿಯಲ್ಲಿ ಬರೆದ 'ಎಂಆರ್ ಪಿ' (ಮಾಕ್ಸಿಮಮ್ ರಿಟೇಲ್ ಪ್ರೈಸ್) ಬೆಲೆ ಯಾವುದನ್ನೂ ಈ ಮಾಲ್ ಗಳು ಗಮನಕ್ಕೆ ತೆಗೆದುಕೊಳ್ಳದೆ ಹಗಲು ದರೋಡೆಯಲ್ಲಿ ನಿರತವಾಗಿವೆ.
ಜೀವ ಜಲ ದುಬಾರಿ
ಮಂಗಳೂರಿನ ವಿವಿಧ ಶಾಪಿಂಗ್ ಮಾಲ್, ಮಲ್ಟಿಫ್ಲೆಕ್ಸ್ ಸಿನೆಮಾ ಮಂದಿರಗಳಲ್ಲಿ ನೀರಿನ ಬಾಟಲಿಗಳನ್ನು ದುಪ್ಪಟ್ಟಲ್ಲ ನಾಲ್ಕು ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದಿರುವ ಸಾಮಾಜಿಕ ಕಾರ್ಯಕರ್ತ ಶಶಿಧರ ಶೆಟ್ಟಿ ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.[ಮಂಗಳೂರಿನಲ್ಲಿ ನೀರಿಗೆ ಸಮಸ್ಯೆ, ಟ್ಯಾಂಕರ್ ಗಳಿಗೆ ಹೆಚ್ಚಿದ ಬೇಡಿಕೆ]

'ಶಾಪಿಂಗ್ ಮಾಲೊಂದರಲ್ಲಿ ತಮ್ಮಿಂದ ಒಂದು ಲೀಟರ್ ನೀರಿಗೆ 80 ರೂಪಾಯಿ ದುಡ್ಡು ವಸೂಲಿ ಮಾಡಿದ್ದಾರೆ. ಅಲ್ಲದೆ ಇಲ್ಲಿಗೆ ಬರುವ ಎಲ್ಲರಿಂದಲೂ ಇದೇ ಮೊತ್ತದ ದುಡ್ಡು ವಸೂಲಿ ಮಾಡುತ್ತಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ನಮ್ಮ ಜಿಲ್ಲೆಯವರೇ ಆಗಿದ್ದರೂ ಇಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಬಡ ಜನರ ಲೂಟಿ ಹೊಡೆಯಲಾಗುತ್ತಿರುವುದು ವಿಷಾದನೀಯ ಸಂಗತಿ," ಎಂದು ಶಶಿಧರ್ ಶೆಟ್ಟಿ ದೂರಿದ್ದಾರೆ.
"ನಗರದ 'ಸಿಟಿ ಸೆಂಟರ್' ಮಾಲ್ ಸೇರಿದಂತೆ ಹಲವು ಮಲ್ಟಿಪ್ಲೆಕ್ಸ್ ಸಿನೆಮಾ ಮಂದಿರಗಳಿಗೆ ತೆರಳಿದರೆ ಅಲ್ಲಿ ಹೊರಗಡೆಯಿಂದ ಯಾವುದೇ ತಿಂಡಿ ತಿನಸುಗಳನ್ನು ಕೊಂಡು ಹೋಗುವುದಕ್ಕೆ ಅವಕಾಶವಿಲ್ಲ. ನೀರನ್ನು ಕೂಡಾ ಅಲ್ಲಿಂದಲೇ ಖರೀದಿಸಬೇಕು. ಹೀಗಿರುವಾಗ ದುಪ್ಪಟ್ಟು ದರ ವಸೂಲಿ ಮಾಡಿ ನೀರಿನ ಬಾಟಲಿಗಳಲ್ಲಿ ಜನತೆಯ ಹಣ ಕೊಳ್ಳೆ ಹೊಡೆಯುತ್ತಿದ್ದಾರೆ. ಆದ್ದರಿಂದ ಕೂಡಲೇ ಇಂತಹ ಅಂಗಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ," ಅವರು ಆಗ್ರಹಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications