ಕಮಿಷನ್ ಆರೋಪ; ಧರ್ಮಸ್ಥಳದಲ್ಲಿ ಹಾಲಪ್ಪ- ಬೇಳೂರು ಆಣೆ ಪ್ರಮಾಣ ಪ್ರಹಸನ
ಮಂಗಳೂರು, ಫೆಬ್ರವರಿ 12: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ದೇವಸ್ಥಾನ ಮತ್ತೆ ಆಣೆ ಪ್ರಮಾಣಕ್ಕೆ ಸಾಕ್ಷಿಯಾಗಿದ್ದು, ಶಿವಮೊಗ್ಗ ಜಿಲ್ಲೆ ಸಾಗರ ಶಾಸಕ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ನಡುವಿನ ಮರಳು ಮಾಫಿಯಾದ ಕಮಿಷನ್ ಪಡೆದ ಆರೋಪ ಪ್ರತ್ಯಾರೋಪ ಈಗ ಶ್ರೀಕ್ಷೇತ್ರ ಧರ್ಮಸ್ಥಳದ ದೇವರ ಕಟಕಟೆಗೆ ಬಂದು ನಿಂತಿದೆ.
ಈ ಆರೋಪ ಸುಳ್ಳು ಅಂತಾ ಶಾಸಕ ಹರತಾಳು ಹಾಲಪ್ಪ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಆಣೆ- ಪ್ರಮಾಣ ಮಾಡಿದರೆ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾತ್ರ ಹರತಾಳು ಹಾಲಪ್ಪ ಕಮಿಷನ್ ಪಡೆದದ್ದು ನಿಜ. ಈ ಬಗ್ಗೆ ದೇವರೆದುರು ಪ್ರಮಾಣ ಮಾಡಿದ್ದೇನೆ ಅಂತಾ ಹೇಳಿದ್ದಾರೆ.
ಮೊದಲು ಮಂಜುನಾಥನ ದರ್ಶನಕ್ಕೆ ಆಗಮಿಸಿದ ಶಾಸಕ ಹರತಾಳು ಹಾಲಪ್ಪ, ಮಂಜುನಾಥನ ದರ್ಶನ ಪಡೆದು ಆಣೆ- ಪ್ರಮಾಣ ಮಾಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ದೇವಾಲಯಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ದೇವರ ಎದುರೇ ಆಣೆ ಪ್ರಮಾಣ ಮಾಡಿದ್ದಾರೆ. ರಾಹುಕಾಲಕ್ಕೂ ಮುನ್ನ ಶ್ರೀಕ್ಷೇತ್ರದಲ್ಲಿ ಹರತಾಳು ಹಾಲಪ್ಪ ಆಣೆ ಪ್ರಮಾಣ ಮಾಡಿದ್ದು, ತಮ್ಮ ಆಪ್ತರಾದ ವಿನಾಯಕ್ ರಾವ್ ಹಾಗು ಬಿ.ಟಿ. ರವೀಂದ್ರ ಅವರೊಂದಿಗೆ ಆಣೆ ಪ್ರಮಾಣ ಮಾಡಿದ್ದಾರೆ. ಮರಳು ಮಾಫಿಯಾದಿಂದ ತಾವಾಗಲಿ ತಮ್ಮ ಸಂಗಡಿಗರಾಗಲಿ ಕಮಿಷನ್ ಪಡೆದಿಲ್ಲ ಎಂದು ಆಣೆ- ಪ್ರಮಾಣ ಮಾಡಿದ್ದಾರೆ.

ಆಣೆ- ಪ್ರಮಾಣ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಹರತಾಳು ಹಾಲಪ್ಪ, ವಿನಾಕಾರಣ ನನ್ನ ಮೇಲೆ ಬೇಳೂರು ಗೋಪಾಲಕೃಷ್ಣ ಆರೋಪ ಮಾಡುತ್ತಿದ್ದಾರೆ. ಆಣೆ- ಪ್ರಮಾಣದ ಸವಾಲು ಹಾಕಿ ಈಗ ಪಲಾಯನ ಮಾಡುತ್ತಿದ್ದಾರೆ. ಈಗ ಗೋವಾ ಚುನಾವಣೆಯ ಸುಬೂಬು ಹೇಳುತ್ತಿದ್ದಾರೆ. ಬೇಳೂರು ಗೋಪಾಲಕೃಷ್ಣ ಅವರಿಗೆ ಬುದ್ಧಿ ಭ್ರಮಣೆಯಾಗಿದೆ. ದೇವರೆದುರು ನಾನು ಆಣೆ ಪ್ರಮಾಣ ಮಾಡಿದ್ದೇನೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದ್ದಾರೆ.
ಶಾಸಕ ಹಾಲಪ್ಪ ಆಣೆ ಪ್ರಮಾಣದ ಬಳಿಕ ದೇವಾಲಯಕ್ಕೆ ಆಗಮಿಸಿದ ಬೇಳೂರು ಗೋಪಾಲಕೃಷ್ಣ, ಶ್ರೀಮಂಜುನಾಥನ ದರ್ಶನ ಪಡೆದು ಆಣೆ- ಪ್ರಮಾಣ ಮಾಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ದೇವಾಲಯಕ್ಕೆ ಆಗಮಿಸಿದ ಬೇಳೂರು ಗೋಪಾಲಕೃಷ್ಣ, ಶಾಸಕ ಹರತಾಳು ಹಾಲಪ್ಪ ಕಮೀಷನ್ ಪಡೆದಿದ್ದು ನಿಜ ಎಂದು ದೇವರ ಎದುರು ಪ್ರಮಾಣ ಮಾಡಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ನಾವು ಬರುವತನಕ ಶಾಸಕರು ನಿಲ್ಲಬಹುದಿತ್ತು. ದೇವಾಲಯಕ್ಕೆ ಬಂದು ಓಡಿದ್ದು ಯಾಕೆ? ನೋಟಿಸ್ ನೀಡಿದ ಮೇಲೆ ನಾವು ಬರುವತನಕ ನಿಲ್ಲಬಹುದಿತ್ತು. ನಾನು ದೇವರೆದುರು ಆಣೆ ಪ್ರಮಾಣ ಮಾಡಲು ಬಂದಿದ್ದೇನೆ. ಮಂಜುನಾಥ ಸ್ವಾಮಿ ಎದುರು ಆಣೆ ಪ್ರಮಾಣ ಮಾಡಿದ್ದೇನೆ ಎಂದರು.

ಶಾಸಕ ಹಾಲಪ್ಪ ಅವರ ವಿರುದ್ಧ ನಾನು ಮಾಡಿರುವ ಆರೋಪಗಳು ಸತ್ಯ. ನನ್ನೊಂದಿಗೆ ಸಾಕ್ಷಿಗಳು ಬಂದಿದ್ದಾರೆ. ಕಮಿಷನ್ ನೀಡಿದವರು ಬಂದಿದ್ದಾರೆ. ಹಾಲಪ್ಪ ಅವರು ತಮ್ಮ ಆಪ್ತ ವಿನಾಯಕ್ ರಾವ್ ಅವರ ಮೂಲಕ ಮರಳು ಲಾರಿ ಮಾಲಕರಿಂದ ಕಮಿಷನ್ ಪಡೆದಿದ್ದಾರೆ. ದೇವರೆದುರು ಸಾಕ್ಷಿಯಾಗಿ ಆಣೆ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ಹಾಲಪ್ಪ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎಂದು ಧರ್ಮಸ್ಥಳದಲ್ಲಿ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications