ರಮಾನಾಥ್ ರೈ ಕುಂಭಕರ್ಣ ವಂಶಸ್ಥ: ಹರಿಕೃಷ್ಣ ಬಂಟ್ವಾಳ್ ವ್ಯಂಗ್ಯ
ಮಂಗಳೂರು, ಜುಲೈ 04: "ರಾಜಕೀಯವಾಗಿ ಅಧಿಕಾರ ಕಳೆದುಕೊಂಡು ಮಾಜಿ ಸಚಿವ ರಮಾನಾಥ್ ರೈ ಬಾಯಿಗೆ ಬಂದದ್ದನ್ನು ಬಡಬಡಿಸುತ್ತಿದ್ದಾರೆ. ಅಧಿಕಾರದಲ್ಲಿ ಇದ್ದಷ್ಟು ದಿನ ರಮಾನಾಥ್ ರೈ ದಕ್ಷಿಣ ಕನ್ನಡ ಜಿಲ್ಲೆಗೆ ಮಹಾಮಾರಿಯಂತಿದ್ದರು," ಎಂದು ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ್ ವ್ಯಂಗ್ಯವಾಡಿದ್ದಾರೆ.
ಮಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಸೊಂಬೇರಿ ಸಂಸದ ಎಂದು ಹೇಳಿಕೆ ನೀಡಿದ್ದ ರಮಾನಾಥ ರೈ ವಿರುದ್ಧ ವಾಗ್ದಾಳಿ ನಡೆಸಿದರು. "ಅಧಿಕಾರವಿಲ್ಲದೆ ರಮಾನಾಥ ರೈ, ನೀರಿನಿಂದ ಹೊರತೆಗೆದ ಮೀನಿನಂತೆ ಒದ್ದಾಡುತ್ತಿದ್ದಾರೆ," ಎಂದು ಅವರು ವ್ಯಂಗ್ಯವಾಡಿದರು.
"ಈಗ ರೈಗೆ ಮನೆಯಲ್ಲಿ ಜನ ಇಲ್ಲ. ಕಾರಿನಲ್ಲಿ ಅವರೊಂದಿಗೆ ತಿರುಗಲು ಜನರಿಲ್ಲ. ಈ ಹಿನ್ನೆಲೆಯಲ್ಲಿ ತನ್ನ ಅಸ್ತಿತ್ವ ತೋರಿಸಲು ರೈ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲಿಗೆ ರಮಾನಾಥ್ ರೈ ಅವರೇ ಕಾರಣ," ಎಂದು ಇದೇ ಸಂದರ್ಭದಲ್ಲಿ ಬಂಟ್ವಾಳ್ ಆರೋಪಿಸಿದರು.

"ಸಿದ್ದರಾಮಯ್ಯ ಅವರ ಆಡಳಿತದ ಅವಧಿ 'ಅಭಿವೃದ್ಧಿಯ ಸ್ವರ್ಣಯುಗ' ಎಂದು ರಮಾನಾಥ್ ರೈ ಹೇಳಿಕೆ ನೀಡಿದ್ದಾರೆ. ಆದರೆ, ಸಿದ್ದರಾಮಯ್ಯ ಅವರ ಆಡಳಿತಾವಧಿ 'ಮರಣ ಯುಗ' ಎಂದು ಹರಿಕೃಷ್ಣ ಬಂಟ್ವಾಳ್ ಕಿಡಿಕಾರಿದರು. ವಿಧಾನ ಸೌಧದಲ್ಲಿ ಸದಾ ನಿದ್ದೆ ಮಾಡುತ್ತಿದ್ದ ರಮಾನಾಥ್ ರೈ ಕುಂಭಕರ್ಣನ ವಂಶಸ್ಥ. ಇಂತಹ ಸೋಂಬೇರಿ ವ್ಯಕ್ತಿ ಸದಾ ಚಟುವಟಿಕೆಯಲ್ಲಿರುವ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಹೇಳಿಕೆ ನೀಡುವುದು ಹಾಸ್ಯಾಸ್ಪದ," ಎಂದು ಅವರು ಅಭಿಪ್ರಾಯಪಟ್ಟರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications