ಸೋಲಿನ ಭೀತಿಯಲ್ಲಿ ಎಸ್ಡಿಪಿಐ ಜೊತೆ ರೈ ಮೈತ್ರಿ: ಹರಿಕೃಷ್ಣ ಬಂಟ್ವಾಳ
ಮಂಗಳೂರು, ಏಪ್ರಿಲ್ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಮಾನಾಥ ರೈ ಹಾಗೂ ಕಾಂಗ್ರೆಸ್ ಇರುವವರೆಗೂ ಸೌಹಾರ್ದತೆ ನೆಲೆಸಲು ಸಾಧ್ಯವಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ರಮಾನಾಥ ರೈ ಸೋಲು ಖಚಿತ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಹೇಳಿದ್ದಾರೆ.
ಮಂಗಳೂರಿನಲ್ಲಿ ಶನಿವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಂಟ್ವಾಳಕ್ಕೆ ಕಾಲಿರಿಸಿದಾಗಲೇ ರಮಾನಾಥ ರೈ ಸೋಲುತ್ತಾರೆ ಎಂಬುದು ನಿರ್ಧಾರವಾಗಿದೆ. ರಾಹುಲ್ ಬಂಟ್ವಾಳಕ್ಕೆ ಬಂದದ್ದೇ ಶನೀಶ್ವರ ಬಂದಂತೆ. ರಾಹುಲ್ ಎಲ್ಲೆಲ್ಲಿ ಭೇಟಿ ನೀಡಿದ್ದಾರೆ ಅಲ್ಲಿ ಕಾಂಗ್ರೆಸ್ ಗೆದ್ದ ಇತಿಹಾಸವಿಲ್ಲ ಎಂದು ಅವರು ವ್ಯಂಗ್ಯವಾಡಿದರು.
ರಮಾನಾಥ ರೈ ಸೋಲುವ ಭೀತಿಯಿಂದ ಬಂಟ್ವಾಳದಲ್ಲಿ ಎಸ್ಡಿಪಿಐ ಜತೆ ಕೈಜೋಡಿಸಿದ್ದಾರೆ. ಮುಸ್ಲಿಂ ಮತಗಳನ್ನು ಪಡೆಯುವ ಉದ್ದೇಶದಿಂದ ಎಸ್ಡಿಪಿಐ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ ಎಂದು ಅವರು ಆರೋಪಿಸಿದರು.

ಹತ್ಯೆ ಮುಕ್ತ, ಭಯ ಮುಕ್ತ ಜಿಲ್ಲೆಯಾಗಬೇಕಾದಲ್ಲಿ ಮುಸ್ಲಿಮರು ಕಾಂಗ್ರೆಸ್ ಬಿಟ್ಟು ಹೊರಬರಬೇಕು. ಭಗವದ್ಗೀತೆ, ಖುರಾನ್, ಬೈಬಲ್, ತ್ರಿಪೀಟಿಕಾ ಆಧಾರದ ಮೇಲೆ ದೇಶ ರಚನೆ ಆಗಿಲ್ಲ. ಇವುಗಳ ಆಧಾರದ ಮೇಲೆ ಆಡಳಿತ ನಡೆಸಲು ಸಾಧ್ಯವಿಲ್ಲ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ರಚಿತ ಸಂವಿಧಾನದಿಂದ ಮಾತ್ರ ದೇಶ ಕಟ್ಟಲು, ನಡೆಸಲು ಸಾಧ್ಯ ಎಂದು ಅವರು ಹೇಳಿದರು.
ದೇಶದಲ್ಲಿ ಹಿಂದು, ಮುಸ್ಲಿಂ, ಕ್ರೈಸ್ತರು ಒಟ್ಟಾಗಿರಬಾರದೆಂದು ಬ್ರಿಟೀಷರು ವಿಷಬೀಜ ಬಿತ್ತಿದ್ದರು. ಅದೇ ರೀತಿ ಇವತ್ತು ಕೂಡಾ ವಿಷ ಬೀಜ ಬಿತ್ತುತ್ತಿರುವವರು ನೆಹರೂ-ಗಾಂಧಿ ಕುಡಿಗಳು ಎಂದು ವಾಗ್ದಾಳಿ ನಡೆಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಚುನಾವಣೆಗಾಗಿ ಮರಳಿನ, ಮರದ, ಟ್ರಾಸ್ಫರ್ ಮಾಡಿಸಿಕೊಟ್ಟ ದುಡ್ಡು ಹಂಚುತ್ತಿದೆ ಎಂದು ದೂರಿದ ಅವರು, ದುಡ್ಡಿನಿಂದಲೇ ಚುನಾವಣೆ ಗೆಲ್ಲಬಹುದು ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್ ಇದೆ ಎಂದು ಆರೋಪಿಸಿದರು.

"ನುಡಿದಂತೆ ನಡೆದಿದ್ದರೆ ಸಿದ್ಧರಾಮಯ್ಯನವರು ಚಾಮುಂಡೇಶ್ವರಿ ಬಿಟ್ಟು ಬಾದಾಮಿಗೇಕೆ ಓಡಿ ಹೋದರು? ಒಂದು ಕ್ಷೇತ್ರದಲ್ಲಿ ನಿಂತು ಗೆಲ್ಲಲು ಧೈರ್ಯವಿಲ್ಲದ ಸಿದ್ಧರಾಮಯ್ಯನವರು ಓಡಿ ಹೋಗಿದ್ದಾರೆ," ಎಂದು ಅವರು ವ್ಯಂಗ್ಯವಾಡಿದರು .
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಣಾಯಕರಾದ ಬಿಲ್ಲವ ಸಮುದಾಯಕ್ಕೆ ಬಿಜೆಪಿಯಲ್ಲಿ ನೀಡಿದ ಸ್ಥಾನಮಾನದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಬಿಲ್ಲವರು ನಿಷ್ಠಾವಂತ ರಾಷ್ಟ್ರವಾದಿಗಳೇ ಹೊರತು ಜಾತಿವಾದಿಗಳಲ್ಲ. ಒಂದು ವೇಳೆ ಜಾತಿವಾದಿಗಳಾಗುತ್ತಿದ್ದರೆ ಜನಾರ್ದನ ಪೂಜಾರಿ ಲೋಪಸಭಾ ಚುನಾವಣೆಯಲ್ಲಿ ಸೋಲಲು ಸಾಧ್ಯವೇ ಇರುತ್ತಿರಲಿಲ್ಲ," ಎಂದು ಅವರು ಹೇಳಿದರು.
"ಬಿಜೆಪಿ ಮೇಲೆ ಆರೋಪ ಮಾಡುವ ಕಾಂಗ್ರೆಸ್ ಬಿಲ್ಲವರಿಗೆ ಎಷ್ಟು ಪ್ರಾಮುಖ್ಯತೆ ನೀಡಿದೆ?" ಎಂದು ಅವರು ಪ್ರಶ್ನಿಸಿದರು. ಗೆದ್ದಲ್ಲಿ ಜನಾರ್ದನ ಪೂಜಾರಿ ಮನೆಯಲ್ಲಿ ಊಟ ಹಾಕುತ್ತೇನೆ ಎಂಬ ರೈ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, "ಈ ಬಾರಿಯ ಚುನಾವಣೆಯಲ್ಲಿ ರೈ ಸೋಲು ಖಚಿತ. .
ಜನಾರ್ದನ ಪೂಜಾರಿ ಮನೆಯಲ್ಲಿ ಊಟ ಹಾಕುವ ಅವಕಾಶವೇ ಬರೋದಿಲ್ಲ," ಎಂದು ಅವರು ವ್ಯಂಗ್ಯವಾಡಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications