ಕರಾವಳಿ ಸಂಘಟನೆಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಪ್ರಜ್ವಲ್ ರೇವಣ್ಣ
ಮಂಗಳೂರು, ಜೂನ್ 5: ನಗರದಲ್ಲಿರುವ ಎಂಆರ್ಪಿಎಲ್ ಸಂಸ್ಥೆಯಲ್ಲಿ ಸ್ಥಳೀಯರಿಗೆ ಅವಕಾಶ ನೀಡದೇ ಉತ್ತರ ಭಾರತೀಯರಿಗೆ ಕೆಲಸ ನೀಡುತ್ತಿರುವುದನ್ನು ವಿರೋಧಿಸಿ ನಡೆಯುತ್ತಿರುವ ಮನೆಮನೆ ಪ್ರತಿಭಟನೆಗೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಂಬಲ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಜ್ವಲ್ ರೇವಣ್ಣ, " ಮಂಗಳೂರಿನಲ್ಲಿರುವ ಎಂಆರ್ಪಿಎಲ್ ಸಂಸ್ಥೆ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡದೇ, ಸಂಸ್ಥೆಯ 233 ಹುದ್ದೆಗಳಲ್ಲಿ ಶೇಕಡಾ 98ಕ್ಕೂ ಹೆಚ್ಚು ಉದ್ಯೋಗಗಳನ್ನು ಉತ್ತರ ಭಾರತೀಯರಿಗೆ ನೀಡಿ ಕರಾವಳಿಯ ಸ್ಥಳೀಯ ಯುವಕರಿಗೆ ಅನ್ಯಾಯವೆಸಗಿದೆ" ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
"ಭೂಮಿ ಕೊಟ್ಟ ರಾಜ್ಯದ ಯುವಕರಿಗೆ ಕೆಲಸ ನೀಡದೆ ಹೊರ ರಾಜ್ಯದವರಿಗೆ ಮಣೆ ಹಾಕಿರುವ ಸಂಸ್ಥೆಯ ಅವಶ್ಯಕತೆ ನಮಗೇನಿದೆ? ಡಾ ಸರೋಜಿನಿ ಮಹಿಷಿ ವರದಿ ಇಂದಿಗೂ ಜಾರಿಯಾಗಿಲ್ಲ. ರಾಜ್ಯ ಸರ್ಕಾರ ಪರಿಷ್ಕೃತ ಆದೇಶವನ್ನೂ ಹೊರಡಿಸಿತು, ಅದೂ ಕೂಡ ಪಾಲನೆಯಾಗುತ್ತಿಲ್ಲ" ಎಂದು ಪ್ರಜ್ವಲ್ ಟ್ವೀಟ್ ಮಾಡಿದ್ದಾರೆ.

"ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳೇ ಹೀಗೆ ಸ್ಥಳೀಯರಿಗೆ ವಂಚಿಸಿದರೆ ಜನರು ಏನು ಮಾಡಬೇಕು? ಈ ನಾಡಿನ ಮಣ್ಣಿನ ಮಕ್ಕಳಿಗೆ ಉದ್ಯೋಗ ಒದಗಿಸದ ಎಂಆರ್ಪಿಎಲ್ ವಿಸ್ತರಣೆಗಾಗಿ ಬೇಡಿಕೆಯಿಟ್ಟಿರುವ ಒಂದಿಂಚು ಜಾಗವನ್ನೂ ಸರ್ಕಾರ ಕೊಡಕೂಡದು".
ಮಂಗಳೂರಿನಲ್ಲಿರುವ ಎಂಆರ್ಪಿಎಲ್ ಸಂಸ್ಥೆ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡದೇ, ಸಂಸ್ಥೆಯ 233 ಹುದ್ದೆಗಳಲ್ಲಿ ಶೇಕಡಾ 98ಕ್ಕೂ ಹೆಚ್ಚು ಉದ್ಯೋಗಗಳನ್ನು ಉತ್ತರ ಭಾರತೀಯರಿಗೆ ನೀಡಿ ಕರಾವಳಿಯ ಸ್ಥಳೀಯ ಯುವಕರಿಗೆ ಅನ್ಯಾಯವೆಸಗಿದೆ.
— Prajwal Revanna (@iPrajwalRevanna) June 5, 2021
ಭೂಮಿ ಕೊಟ್ಟ ರಾಜ್ಯದ ಯುವಕರಿಗೆ ಕೆಲಸ ನೀಡದೆ ಹೊರ ರಾಜ್ಯದವರಿಗೆ ಮಣೆ ಹಾಕಿರುವ ಸಂಸ್ಥೆಯ ಅವಶ್ಯಕತೆ ನಮಗೇನಿದೆ..?
"ಎಂಆರ್ ಪಿಎಲ್ ನಲ್ಲಿ ಸ್ಥಳೀಯರಿಗೆ ಸಿಂಹಪಾಲು ಇರಬೇಕು. ಉಳಿದ ಹುದ್ದೆಗಳು ಕರ್ನಾಟಕದ ಇತರ ಜಿಲ್ಲೆಗಳಿಗೆ ಲಭ್ಯವಾಗಬೇಕು. ಸ್ಥಳೀಯರಿಗೆ ವಂಚಿಸಿ ಉತ್ತರ ಭಾರತೀಯರಿಗೆ ಉದ್ಯೋಗ ನೀಡಿರುವ ಹಿನ್ನೆಲೆಯಲ್ಲಿ ಕರಾವಳಿಯ ಜನಪರ ಸಂಘಟನೆಗಳು ಇಂದು ಕರೆ ನೀಡಿರುವ ಮನೆಮನೆ ಪ್ರತಿಭಟನೆ ನನ್ನ ಸಂಪೂರ್ಣ ಬೆಂಬಲವಿದೆ"ಎಂದು ಪ್ರಜ್ವಲ್ ರೇವಣ್ಣ ಬೆಂಬಲ ಸೂಚಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications