ಮಸಾಜ್ ಪಾರ್ಲರ್ ಲೈಸನ್ಸ್ ರದ್ದು, ಮಂಗಳೂರು ಪಾಲಿಕೆಗೆ ಹೈಕೋರ್ಟ್ ತರಾಟೆ
ಮಂಗಳೂರು, ಅಕ್ಟೋಬರ್ 12: "ಸ್ತ್ರೀಯರು ಪುರುಷರಿಗೆ, ಪುರುಷರು ಸ್ತ್ರೀಯರಿಗೆ ಮಸಾಜ್ ಮಾಡಬಾರದು ಎಂದು ಯಾವ ಕಾನೂನು ಹೇಳುತ್ತದೆ? ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯಗಳು ಲಭ್ಯವಾಗದಿದ್ದರೂ ಮಸಾಜ್ ಸೆಂಟರ್ ಗಳ ಪರವಾನಿಗೆ ಹೇಗೆ ರದ್ದು ಪಡಿಸಿದ್ದೀರಿ?" ಎಂದು ಮಂಗಳೂರು ಮಹಾನಗರ ಪಾಲಿಕೆ (ಮನಪಾ)ಯ ಆಡಳಿತವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಒಂದು ವೇಳೆ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ ಕಾನೂನು ಪ್ರಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬಹುದಲ್ಲವೇ? ಎಂದು ಹೈಕೋರ್ಟ್ ಪಾಲಿಕೆಯನ್ನು ಪ್ರಶ್ನಿಸಿದೆ

ಮಂಗಳೂರು ಮೇಯರ್ ಕವಿತಾ ಸನಿಲ್ ನೇತೃತ್ವದಲ್ಲಿ ಈ ಹಿಂದೆ ನಗರದಲ್ಲಿ ಮಸಾಜ್ ಪಾರ್ಲರ್ ಗಳ ಮೇಲೆ ದಾಳಿ ನಡೆಸಿ ಆರು ಮಸಾಜ್ ಸೆಂಟರ್ ಗಳ ಪರವಾನಿಗೆ ರದ್ದುಪಡಿಸಲಾಗಿತ್ತು. ಆಯುರ್ವೇದ, ಪಂಚಕರ್ಮ ಚಿಕಿತ್ಸೆ ನೀಡುವ ನೆಪದಲ್ಲಿ ನಡೆಯುತ್ತಿದ್ದ ಆರು ಮಸಾಜ್ ಸೆಂಟರ್ ಗಳ ಪರವಾನಿಗೆ ರದ್ದು ಪಡಿಸಿದ್ದನ್ನು ಮಾಲಿಕರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು.
ಇದರ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಕೀಲರು, 'ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ದೂರುಗಳು ಕೇಳಿ ಬಂದ ಮಾತ್ರಕ್ಕೆ ಯಾವುದೇ ಶೋಕಾಸ್ ನೋಟಿಸ್ ಜಾರಿ ಮಾಡದೆ, ಸ್ಥಳ ಪರಿಶೀಲನೆ ನಡೆಸದೆ ಏಕಾಏಕಿ ಪರವಾನಿಗೆ ರದ್ದು ಪಡಿಸಿದ ಮಂಗಳೂರು ಮಹಾನಗರ ಪಾಲಿಕೆ ಅಕ್ರಮ ಮತ್ತು ಕಾನೂನು ಬಾಹಿರ,' ಎಂದು ವಾದಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು ಮನಪಾ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡು ಅಂತಿಮವಾಗಿ, 'ಅರ್ಜಿದಾರರಿಗೆ ಹೊಸದಾಗಿ ಶೋಕಾಸ್ ನೋಟಿಸ್ ಜಾರಿಗೊಳಿಸಿ ಅವರ ಆಹವಾಲುಗಳನ್ನು ಆಲಿಸಬೇಕು. ಅಗತ್ಯ ಬಿದ್ದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲಿಯವರೆಗೆ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು,' ಎಂದು ಪಾಲಿಕೆಗೆ ಎಚ್ಚರಿಕೆ ನೀಡಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications