ಮಹಾಘಟಬಂಧನ ಅಧಿಕಾರಕ್ಕೆ ಬಂದ್ರೆ ಗೌಡ್ರು ಪ್ರಧಾನಿಯಾಗೊಲ್ಲ: HDK
Recommended Video

ಮಂಗಳೂರು, ಏಪ್ರಿಲ್ 08: ಕೇಂದ್ರದಲ್ಲಿ ಮಹಾಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿಯಾಗೋಲ್ಲ. ಅವರು ಕೇಂದ್ರ ಸರ್ಕಾರಕ್ಕೆ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಪ್ರಧಾನಿಯಾಗುವ ಇಂಗಿತವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು.
ಅವರು ಸರ್ಕಾರದ ಸಲಹೆಗಾರರಾಗಿ, ಈ ದೇಶದ ಹಿತಾಸಕ್ತಿಯನ್ನು ಕಾಪಾಡುತ್ತಾರೆ. ಯಾರು ಪ್ರಧಾನಿಯಾಗುತ್ತಾರೆ ಎಂಬುದು ಬೇರೆ ವಿಷಯ ಎಂದು ಕುಮಾರಸ್ವಾಮಿ ಹೇಳಿದರು.

ತುಮಕೂರಿನಲ್ಲಿ ಮಾತನಾಡುತ್ತಿದ್ದ ದೇವೇಗೌಡರು, "ಪ್ರಾದೇಶಿಕ ಪಕ್ಷಗಳೊಂದಿಗೆ ರಾಷ್ಟ್ರೀಯ ಪಕ್ಷಗಳು ಹೊಂದಿಕೊಳ್ಳುವುದು ಕಷ್ಟ ಎಂಬ ಮಾತಿದೆ. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿಯೇ ಸರ್ಕಾರ ನಡೆಸುತ್ತಿದೆ. ನಮ್ಮ ಮುಂದೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಬಲವನ್ನು ಕುಗ್ಗಿಸಲು ನಾವು ಪ್ರಯತ್ನಿಸಬೇಕಿದೆ" ಎಂದರು.












Click it and Unblock the Notifications