ಇವತ್ತು ನನ್ನ ಕಣ್ಣು ತೆರೆದಿದೆ: ಕಲ್ಲಡ್ಕದಲ್ಲಿ ಜೈ ಶ್ರೀರಾಮ್ ಘೋಷಣೆ ಮೊಳಗಿಸಿದ ಕುಮಾರಸ್ವಾಮಿ
ಮಂಗಳೂರು, ಡಿಸೆಂಬರ್ 11: ಬಂಟ್ವಾಳದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಕ್ರೀಡೋತ್ಸವದಲ್ಲಿ ಭಾಷಣ ಮಾಡಿದ ಕುಮಾರಸ್ವಾಮಿ ಕೊನೆಗೆ ಜೈ ಶ್ರೀರಾಮ್ ಅಂತಾ ಘೋಷಣೆ ಮೊಳಗಿಸಿದ್ದಾರೆ.
ಕ್ರೀಡೋತ್ಸವದ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಹಿಂದೆ ಪ್ರಭಾಕರ್ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲ. ಈ ಕಾರ್ಯಕ್ರಮ ನನ್ನ ಜೀವನದ ಅವಿಸ್ಮರಣೀಯ ಕ್ಷಣವಾಗಿದೆ. ಇಲ್ಲಿ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಕೊಡಲಾಗುತ್ತಿದೆ. ಈ ಕಾರ್ಯಕ್ರಮ ಅಷ್ಟು ಸುಲಭವಾಗಿ ಮಾಡಲು ಸಾಧ್ಯವಿಲ್ಲ. ಗುರುಕುಲ ಪರಂಪರೆಯನ್ನು ಸಂಸ್ಕೃತಿಗಳನ್ನು ನೀಡಲಾಗುತ್ತಿದೆ. ಉತ್ತಮ ಶಿಸ್ತಿನ ಬದಕನ್ನು ಕಲಿಸಲಾಗುತ್ತಿದೆ ಎಂದರು.

ಮಾನವೀಯತೆ ವಿಕಸನವನ್ನು ಇಲ್ಲಿ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಬಾರದೇ ಇದ್ದರೆ ಜೀವನದ ದೊಡ್ಡ ನಷ್ಟವಾಗುತ್ತಿತ್ತು. ಗ್ರಾಮೀಣ ಪ್ರದೇಶದ ಕಲೆಗಳನ್ನು ಮಕ್ಕಳಲ್ಲಿ ಮಾಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಚಂದ್ರಯಾನ ಉಡಾವಣೆಯನ್ನು ಕಣ್ಣಿಗೆ ಕಟ್ಟುವ ಹಾಗೆ ತೋರಿಸಿದ್ದೀರಿ. ಬಾಲ್ಯದಲ್ಲಿ ರಾಮನ ಭಜನೆ ಮಾಡಿದನ್ನು ಇವತ್ತು ಮತ್ತೆ ನೆನಪಿಸಿದ್ದೀರಿ. ಪ್ರಭಾಕರ್ ಭಟ್ ಬದುಕಿನ ಒಳ್ಳೆಯ ನಡವಳಿಕೆ ಕಲಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಕಣ್ಣು ತೆರೆಸುತ್ತಿದ್ದೀರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನೀವೇಲ್ಲಾ ಯೋಚನೆ ಮಾಡಬಹುದು ಕುಮಾರಸ್ವಾಮಿ ಹಿಂದೆ ಒಂದು ರೀತಿ ಮಾತನಾಡುತ್ತಿದ್ದರು. ಈಗ ಕಾರ್ಯಕ್ರಮ ಭಾಗವಹಿಸುತ್ತಿದ್ದೀರಿ ಅಂತಾ ನೀವು ಯೋಚಿಸಿರಬಹುದು. ನನನ್ನು ಕೆಲವರು ದಾರಿ ತಪ್ಪಿಸುವ ಮಾಹಿತಿ ನೀಡಿದ್ದರು. ಇವತ್ತು ನನ್ನ ಕಣ್ಣು ತೆರೆದಿದೆ. ನನ್ನಲ್ಲಿ ತಪ್ಪುಗಳಾಗಿದೆ, ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಭಾಷಣದ ಕೊನೆಗೆ ಜೈ ಶ್ರೀರಾಮ್ ಘೋಷಣೆ ಕೂಗಿ ಕುಮಾರಸ್ವಾಮಿ ಭಾಷಣ ಮುಗಿಸಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಇಲ್ಲಿ ಎಲ್ಲಾ ಸ್ತರದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದಾರೆ. ಶಿಕ್ಷಣದ ಜೊತೆಗೆ ಮಾನಸಿಕ ದೈಹಿಕ ಸಾಮರ್ಥ್ಯವನ್ನು ಬೆಳಸುತ್ತಿದ್ದಾರೆ. ಆರ್ಎಸ್ಎಸ್ ಹಾಗೂ ಪ್ರಭಾಕರ್ ಭಟ್ ಅವರ ಕಾರ್ಯಕ್ರಮ ಬೇರೆ. ಆದರೆ ದೇಶದ ಅಭಿವೃದ್ಧಿಗೆ ಯಾವುದೇ ಸಂಘಟನೆ ಕೈ ಜೋಡಿಸಬೇಕು. ಸಾರ್ವಜನಿಕ ಜೀವನದಲ್ಲಿ ಟೀಕೆಗಳು ಸಾಮಾನ್ಯ. ಎಲ್ಲಾ ರಾಜಕೀಯ ಪಕ್ಷದವರೂ ಟೀಕೆ ಮಾಡುತ್ತಾರೆ. ಕೆಲವೊಂದು ಸಮಯದಲ್ಲಿ ಟೀಕೇಗಳು ಸರ್ವೇ ಸಾಮಾನ್ಯ. ಭಟ್ ಅವರ ಕೊಡುಗೆ ಇಲ್ಲಿಗೆ ಭೇಟಿ ನೀಡಿದ ಬಳಿಕ ಗೊತ್ತಾಗಿದ್ದು ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಹೊಗಳಿದರು.
ಕನ್ನಡ ಶಿಕ್ಷಣಕ್ಕೆ ಅವರು ಉತ್ತಮ ಕೆಲಸ ಮಾಡಿದ್ದಾರೆ. ಹಲವರು ನನ್ನನ್ನು ದಾರಿ ತಪ್ಪಿಸಿದ್ರು ಅದ್ರಲ್ಲಿ ಕಾಂಗ್ರೆಸ್ನವರು ಇದ್ದರು. ನನ್ನ ನಡವಳಿಕೆ ರಾಜ್ಯಕ್ಕೆ ಒಳ್ಳೆದಾಗಬೇಕು ಎನ್ನುವುದು. ಎನ್ಡಿಎ ಜೊತೆ ಹೋಗೋದು ಈಗಾಗಲೇ ತೀರ್ಮಾನ ಆಗಿದೆ. ಮುಂದಿನ ದಿನದಲ್ಲಿ ಏನಾಗಲಿದೆ ಮುಂದೆ ಹೇಳುತ್ತೇನೆ. 2006ರಲ್ಲಿ ಬಿಜೆಪಿ ಜೊತೆ ಯಾವ ಸಂಬಂಧ ಇತ್ತೋ ಅದು ಹಾಗೇ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇದಕ್ಕೂ ಮುನ್ನ ಭಾಷಣ ಮಾಡಿದ ಡಾ.ಕಲ್ಲಡ್ಕ ಪ್ರಭಾಕರ್ ಭಟ್, ದೇವೇಗೌಡ ಕುಟುಂಬವನ್ನು ರಾಷ್ಟ್ರ ಭಕ್ತ ಕುಟುಂಬ. ದೇವೇಗೌಡರ ಕುಟುಂಬವೇ ರಾಷ್ಟ್ರ ಭಕ್ತ ಕುಟುಂಬ. ದೇವೇಗೌಡರು ಈ ಮಣ್ಣಿನ ಪ್ರಥಮ ಪ್ರಧಾನಿ. ದೇವೇಗೌಡರ ಜೊತೆಗೆ ತುರ್ತು ಪರಿಸ್ಥಿತಿಯ ಕಾಲವನ್ನು ಪ್ರಭಾಕರ್ ಭಟ್ ನೆನಪಿಸಿಕೊಂಡಿದ್ದಾರೆ. ಕುಮಾರಸ್ವಾಮಿ ನಿರಂತರ ಕಾರ್ಯಕ್ರಮದಲ್ಲಿ ಬ್ಯುಸಿಯಾಗಿದ್ದರು. ನಮ್ಮ ಕಾರ್ಯಕ್ರಮಕ್ಕೆ ಬರಲೇಬೇಕು ಅಂತಾ ಹೇಳಿದಾಗ ಪ್ರೀತಿಯಿಂದ ಬಂದಿದ್ದಾರೆ ಎಂದು ಕುಮಾರಸ್ವಾಮಿ ಯ ಬಗ್ಗೆ ಪ್ರಭಾಕರ್ ಭಟ್ ಮೆಚ್ಚುಗೆಯ ಮಾತನ್ನಾಡಿದ್ದಾರೆ.
-
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications