ಸಿಎಂ ಕುಮಾರಸ್ವಾಮಿ ಸುಬ್ರಹ್ಮಣ್ಯನಿಗೆ ಚಿನ್ನದ ರಥ ನೀಡುತ್ತಿರುವುದೇಕೆ?
ಮಂಗಳೂರು, ಏಪ್ರಿಲ್ 29:ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ನೂತನ ಚಿನ್ನದ ರಥ ಅರ್ಪಿಸಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. 2006 ರಲ್ಲಿ ಕುಮಾರಸ್ವಾಮಿ ರಥ ಸಮರ್ಪಣೆಗೆ ಯೋಚಿಸಿದ್ದರು ಎಂದು ಹೇಳಲಾಗಿದ್ದು, ಈಗ ದಿಢೀರನೇ ಚಿನ್ನದ ರಥ ಸಮರ್ಪಣೆಗೆ ವೇಗ ಕಲ್ಪಿಸಲಾಗಿದೆ. ಈ ಬೆಳವಣಿಗೆ ರಾಜಕೀಯ ಕ್ಷೇತ್ರದಲ್ಲಿ ಚರ್ಚೆಗೆ ಕಾರಣವಾಗಿದೆ.
ಮುಖ್ಯಮಂತ್ರಿಯ ಗಾದಿಗೆ ಅಡೆತಡೆಯಾಗದ ರೀತಿಯಲ್ಲಿ ಹಾಗೂ ಸಮಸ್ಯೆಗಳು ಬಾರದಂತೆ ಜ್ಯೋತಿಷಿಗಳ ಸಲಹೆ ಮೇರೆಗೆ ಶೀಘ್ರ ಚಿನ್ನದ ರಥ ಅರ್ಪಿಸಲು ಮುಖ್ಯಮಂತ್ರಿ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಜ್ಯೋತಿಷಿಗಳ ಸಲಹೆಯಂತೆ ಸಿಎಂ ರಥ ನಿರ್ಮಾಣಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಕುಮಾರಸ್ವಾಮಿ ಮೊದಲ ಬಾರಿಗೆ ಸಿಎಂ ಆದಾಗ ದೇವರಿಗೆ ಸ್ವರ್ಣ ರಥ ನಿರ್ಮಿಸಿ ಅರ್ಪಿಸುವ ಉದ್ದೇಶ ಹೊಂದಿದ್ದರು ಎಂದು ಹೇಳಲಾಗಿದೆ.

ಈಗ ಜ್ಯೋತಿಷಿಗಳ ಸಲಹೆಯಂತೆ ನೂತನ ಚಿನ್ನದ ರಥ ನಿರ್ಮಾಣ ಕೆಲಸ ಚುರುಕುಗೊಳಿಸಲಾಗಿದ್ದು, ಈ ಸಂಬಂಧ ಬೆಂಗಳೂರಿನಲ್ಲಿ ಮುಜರಾಯಿ ಇಲಾಖೆಯ ಉನ್ನತ ಅಧಿಕಾರಿಗಳ ಮತ್ತು ದೇವಸ್ಥಾನದ ಆಡಳಿತ ಮಂಡಳಿ ಸಭೆ ನಡೆದಿದೆ.
ಜ್ಯೋತಿಷಿಯೊಬ್ಬರು ಚಿನ್ನದ ರಥ ನಿರ್ಮಾಣ ಪೂರ್ಣಗೊಳ್ಳದಿದ್ದಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿ ಇರುವವರಿಗೆ ಸಮಸ್ಯೆ ಉಂಟು. ಒಂದು ವೇಳೆ ಚಿನ್ನದ ರಥ ಸಮರ್ಪಣೆಯಾದರೆ ಎಲ್ಲಾ ಅಡೆತಡೆಗಳೂ ನಿವಾರಣೆಯಾಗುತ್ತವೆ. ಸರ್ಕಾರಕ್ಕೂ ಧಕ್ಕೆ ಬಾರದು, ಮಂಡ್ಯದಲ್ಲಿ ಪುತ್ರ ನಿಖಿಲ್ ಗೆಲ್ಲಬಹುದು ಎಂದು ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ. ರಥ ನಿರ್ಮಾಣಕ್ಕೆ 240 ಕೆ.ಜಿ.ಚಿನ್ನ ಅಗತ್ಯವಿದ್ದು, ನೂತನ ರಥ ಸುಮಾರು 80ರಿಂದ 85 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications