ಕರ್ನಾಟಕದಲ್ಲಿ ಮತ್ತೆ ಕೊರೊನಾ ವ್ಯಾಕ್ಸಿನೇಷನ್?: ದಿನೇಶ್ ಗುಂಡೂರಾವ್ ಹೇಳಿದ್ದೇನು?
ಮಂಗಳೂರು, ಡಿಸೆಂಬರ್ 23: ರಾಜ್ಯದಲ್ಲಿ ಕೊರೊನಾ ಮತ್ತೆ ಹೆಚ್ಚಾಗುತ್ತಿದ್ದು, ನಿನ್ನೆ ಒಂದೇ ದಿನ 78 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಬೆಂಗಳೂರು ಒಂದರಲ್ಲೇ 68 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಸದ್ಯ ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದ್ದು, ರಾಜ್ಯ ಸರ್ಕಾರ ಬಿಗಿ ಕ್ರಮಗಳ ಮೂಲಕ ಆರಂಭದಲ್ಲಿಯೇ ಕೊರೊನಾ ಕಟ್ಟಿಹಾಕಬೇಕಿದೆ.
ಗಡಿ ಜಿಲ್ಲೆ ಕೇರಳದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಕರ್ನಾಟಕದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇನ್ನು ರಾಜ್ಯದಲ್ಲಿ ಮತ್ತೆ ಕೊರೊನಾ ವ್ಯಾಕ್ಸಿನೇಷನ್ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕೊರೊನಾ ಸ್ಥಿತಿಗತಿ ಪರಿಶೀಲಿಸಿ ಮಾತನಾಡಿದ ಅವರು, ತಜ್ಞರ ತಂಡ ಸೂಚಿಸಿದ್ದಲ್ಲಿ ಮಾತ್ರ ವ್ಯಾಕ್ಸಿನೇಷನ್ ಮಾಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆ ಕೇರಳ ಗಡಿಭಾಗವಾಗಿದ್ದರಿಂದ ಅಧಿಕಾರಿಗಳಿಗೆ ಎಚ್ಚರಿಕೆಯಿಂದ ಇರಲು ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.
ಯಾವುದೇ ಸಂದರ್ಭ ಎದುರಾದರೂ ಎದುರಿಸಲು ಸಿದ್ದರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕ್ಯಾಬಿನೆಟ್ ಉಪಸಮಿತಿ ಸೋಮವಾರ ಅಥವಾ ಮಂಗಳವಾರ ಸಭೆ ನಡೆಸಲಿದೆ. ಕೇಂದ್ರ ಹಾಗೂ ಬೇರೆ ರಾಜ್ಯಗಳ ಮಾಹಿತಿ ಪಡೆದು ನಿರ್ಧಾರ ಕೈಗೊಳ್ಳಲಿದ್ದೇವೆ. ಯಾವುದೇ ಕಾರ್ಯಕ್ರಮಗಳನ್ನು ನಿಲ್ಲಿಸುವ ನಿರ್ಧಾರ ಮಾಡಿಲ್ಲ. ಇಲ್ಲಿಯವರೆಗೆ ಎಲ್ಲವೂ ಸಹಜ ಸ್ಥಿತಿಯಲ್ಲಿ ಇರಲಿದೆ. ಕ್ರಿಸ್ಮಸ್, ಹೊಸವರ್ಷ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದರು.

ಕೋವಿಡ್ ರೂಪಾಂತರಿ ತಳಿ ಜೆಎನ್ 1 ಅಪಾಯಕಾರಿಯಲ್ಲ. ಯಾರಿಗೂ ಹೆಚ್ಚಿನ ಅಪಾಯವಿಲ್ಲ. ಈ ಬಗ್ಗೆ ಮೆಡಿಕಲ್ ತಾಂತ್ರಿಕ ಸಮಿತಿಗಳು ಈಗಾಗಲೇ ಹೇಳಿಕೆ ನೀಡಿದೆ. ಆದರೂ ನಮ್ಮ ಎಚ್ಚರಿಕೆಯಲ್ಲಿ ನಾವು ಇರುವುದು ಒಳಿತು. ಸಂಪುಟ ಉಪಸಮಿತಿ ತಜ್ಞರ ವರದಿ ಪಡೆದು ನಿರ್ಧಾರ ಮಾಡಲಿದೆ. ರಾಜ್ಯದಲ್ಲಿ ಸದ್ಯ ಐದು ಸಾವಿರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 330 ಹಾಗೂ ಬೆಂಗಳೂರಿನಲ್ಲಿ 1,500 ಟೆಸ್ಟಿಂಗ್ ಟಾರ್ಗೆಟ್ ನೀಡಲಾಗಿದೆ. ಗಡಿ ಜಿಲ್ಲೆಯಾಗಿದ್ದರಿಂದ ಮಂಗಳೂರು, ಮೈಸೂರಿಗೆ ಹೆಚ್ಚು ನೀಡಲಾಗಿದೆ ಎಂದು ಹೇಳಿದರು.
ವೆಂಟಿಲೇಟರ್ ಕಾರ್ಯನಿರ್ವಹಣೆ ಪರೀಕ್ಷೆ ಬಗ್ಗೆ ಕ್ರಮ ವಹಿಸುತ್ತೇವೆ. ಸರ್ಕಾರಿ ಆಸ್ಪತ್ರೆಗಳಿಗೆ ಪಿಪಿಇ ಕಿಟ್ ಪೂರೈಕೆ ಕೆಲಸ ಆಗುತ್ತಿದೆ. ಕೆಲವು ಕಡೆ ಸ್ವಲ್ಪ ತಡ ಆಗಿದೆ, ಎಲ್ಲವೂ ಶೀಘ್ರ ಆಗಲಿದೆ. ಹೆಚ್ಚು ಟೆಸ್ಟಿಂಗ್ ಮಾಡುವ ಅಗತ್ಯ ಇದೆಯೇ ಎಂದು ನಿರ್ಧಾರ ಮಾಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಿಗೆ ಗೈಡ್ ಲೈನ್ಸ್ ಗಳ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿಸಿದರು.
ಕ್ರಿಸ್ಮಸ್, ಹೊಸ ವರ್ಷಕ್ಕೆ ಯಾವುದೇ ಹೊಸ ಗೈಡ್ ಲೈನ್ಸ್ ಇಲ್ಲ. ಆದರೆ ಜನ ಸೇರಿದ್ದಲ್ಲಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸಲು ಸಲಹೆ ಕೊಡುತ್ತೇವೆ. ಯಾವುದೂ ಕಡ್ಡಾಯವಲ್ಲ, ನಾವು ಯಾವುದೇ ನಿರ್ಬಂಧ ವಿಧಿಸಲ್ಲ. ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ಪ್ರಕಾರ ಈ ಉಪತಳಿ ಬಗ್ಗೆ ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರು.
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications