ಕುದ್ರೋಳಿ: ಕಲುಷಿತ ನೀರಿನಲ್ಲಿ ಮಟ್ಕಾ ಸೋಡಾ ತಯಾರಿಸುತ್ತಿದ್ದ ಸ್ಟಾಲ್ ಸೀಝ್
ಮಂಗಳೂರು, ಅಕ್ಟೋಬರ್, 23: ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಜಾತ್ರೆಯ ಸ್ಟಾಲ್ವೊಂದರಲ್ಲಿ ಕೊಳಕು ನೀರಿನಿಂದ ಮಟ್ಕಾ ಸೋಡಾ ಮಾರಾಟ ಮಾಡಲಾಗುತ್ತಿರುವ ವೀಡಿಯೋ ವೈರಲ್ ಆಗಿದೆ. ನಂತರ ಇದರ ಬೆನ್ನಲ್ಲೇ ಮನಪಾ ಆರೋಗ್ಯಾಧಿಕಾರಿಗಳು ದಾಳಿ ನಡೆಸಿ ಮಟ್ಕಾ ಸ್ಟಾಲ್ ಅನ್ನು ಸೀಜ್ ಮಾಡಿದ ಘಟನೆ ನಡೆದಿದೆ.
ಮಂಗಳೂರು ದಸರಾ ಹಿನ್ನೆಲೆಯಲ್ಲಿ ಸ್ಟಾಲ್ ನಲ್ಲಿ ಮಟ್ಕಾ ಸೋಡಾ ಮಾರಾಟ ಮಾಡಲಾಗುತ್ತಿತ್ತು. ಆದರೆ ಮಟ್ಕಾ ಸ್ಟಾಲ್ ನಲ್ಲಿ ಸ್ವಚ್ಛತೆಗೆ ಆದ್ಯತೆ ನೀಡದೆ ಮಟ್ಕಾ ಸೋಡಾ ಮಾರಾಟ ಮಾಡಲಾಗುತ್ತಿತ್ತು. ಇದನ್ನು ಯಾರೋ ವೀಡಿಯೋ ಮಾಡಿ ಸಾಮಾಜಿಕ ತಾಣಗಳಲ್ಲಿ ವೈರಲ್ ಮಾಡಿದ್ದರು. ಕೊಳಕು ನೀರಿನಲ್ಲಿ ಮಟ್ಕಾ ಪಾಟ್ ಗಳನ್ನು ತೊಳೆಯುವುದು, ಸ್ಟಾಲ್ ಸಿಬ್ಬಂದಿ ತಂಬಾಕು ಜಗಿದು ಉಗುಳಿದ ಬಳಿಕ ಅದೇ ನೀರಿನಲ್ಲಿ ಪಾಟ್ ತೊಳೆಯುವುದು ಹೀಗೆ ಶುಚಿತ್ವವೇ ಇಲ್ಲದ ರೀತಿಯ ದೃಶ್ಯಗಳು ವೈರಲ್ ಆದ ವೀಡಿಯೋದಲ್ಲಿ ಸೆರೆಯಾಗಿತ್ತು.

ವಿಡಿಯೋ ವೈರಲ್ ಬೆನ್ನಲ್ಲೇ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳ ಮಟ್ಕಾ ಸ್ಟಾಲ್ ಗೆ ದಾಳಿ ಮಾಡಿ ಮಟ್ಕಾ ಸೋಡಾ ಶಾಪ್ ಸೀಝ್ ಮಾಡಿದ್ದಾರೆ. ಮಟ್ಕಾ ಸೋಡಾ ಪಾಟ್ ಗಳ ಸಹಿತ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆ ಬಳಿಕ ಕುದ್ರೋಳಿ ದೇವಸ್ಥಾನದ ದಸರಾ ಸಂತೆಯ ವಿವಿಧ ಉಳಿದ ಸ್ಟಾಲ್ ಗಳಲ್ಲೂ ಅಧಿಕಾರಿಗಳು ಶುಚಿತ್ವದ ಪರಿಶೀಲನೆ ನಡೆಸಿದ್ದಾರೆ. ಶುಚಿತ್ವ ಕಾಪಾಡದಿದ್ದಲ್ಲಿ ಸ್ಟಾಲ್ ಸೀಝ್ ಮಾಡುವ ಎಚ್ಚರಿಕೆ ನೀಡಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications